ಬಿಎಸ್ಎಫ್ ಉದ್ಯೋಗ: PUC ಪಾಸಾದವರಿಗೆ 29200 ರೂ. ವೇತನ!
ನವದೆಹಲಿ, ಜುಲೈ 29: ಭಾರತದ ಗಡಿ ಭದ್ರತಾ ಪಡೆಯಲ್ಲಿ 323 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬಿಎಸ್ಎಫ್ ಸಹಾಯಕ ಸಬ್-ಇನ್ಸ್ ಪೆಕ್ಟರ್ ಮತ್ತು ಹೆಡ್-ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಳೆದ ಜುಲೈ 22ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ಮುಂದಿನ ಆಗಸ್ಟ್ 21ರವರೆಗೂ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಬಿಎಸ್ಎಫ್ ಆಹ್ವಾನಿಸಿದ 323 ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಕ್ಕೆ ವಿದ್ಯಾರ್ಹತೆ, ವಯೋಮಿತಿ ಮತ್ತು ಅರ್ಜಿ ಶುಲ್ಕ ಎಷ್ಟಿರುತ್ತದೆ. ಇದರ ಜೊತೆಗೆ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ವೇತನ ಶ್ರೇಣಿ ಯಾವ ರೀತಿಯಾಗಿರುತ್ತದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳಿ.

ವಿದ್ಯಾರ್ಹತೆ:
ಬಿಎಸ್ಎಫ್ ಹೊರಡಿಸಿರುವ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವ ಯಾವುದೇ ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12ನೇ ತರಗತಿ ಪಾಸ್ ಆಗಿರಬೇಕು.
ವಯೋಮಿತಿ ಎಷ್ಟಿರಬೇಕು?:
ಗಡಿ ಭದ್ರತಾ ಪಡೆಯಲ್ಲಿ ಕಾರ್ಯ ನಿರ್ವಹಿಸುವುದಕ್ಕೆ ನಿಗದಿತ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷಗಳಾಗಿದ್ದರೆ, ಗರಿಷ್ಠ ವಯೋಮಿತಿಯು 25 ವರ್ಷವಾಗಿದೆ.
ವೇತನ ಶ್ರೇಣಿ ಎಷ್ಟಿರುತ್ತದೆ?:
ಬಿಎಸ್ಎಫ್ ಸಹಾಯಕ ಸಬ್-ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 29200 ರಿಂದ 92300 ರೂಪಾಯಿವರೆಗೂ ವೇತನ ನೀಡಲಾಗುತ್ತದೆ. ಅದೇ ರೀತಿ ಹೆಡ್-ಕಾನ್ಸ್ ಟೇಬಲ್ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ 25500 ದಿಂದ 81100 ರೂಪಾಯಿ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವಿಲ್ಲ:
ಬಿಎಸ್ಎಫ್ ಸಹಾಯಕ ಸಬ್-ಇನ್ಸ್ ಪೆಕ್ಟರ್ ಹುದ್ದೆಗಳ ಸಂಖ್ಯೆ 11 ಆಗಿದ್ದರೆ, ಹೆಡ್-ಕಾನ್ಸ್ ಟೇಬಲ್ ಹುದ್ದೆಗಳ ಸಂಖ್ಯೆಯು 312 ಆಗಿದೆ. ಒಟ್ಟು 323 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತದ ಗಡಿ ಭದ್ರತಾ ಪಡೆಯಲ್ಲಿ ಕಾರ್ಯ ನಿರ್ವಹಿಸುವುದಕ್ಕಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಸಲ್ಲಿಕೆ ಶುಲ್ಕವನ್ನು ವಿಧಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ವಿಧಾನ ಹೇಗಿರುತ್ತದೆ?:
ಬಿಎಸ್ಎಫ್ ಸಹಾಯಕ ಸಬ್-ಇನ್ಸ್ ಪೆಕ್ಟರ್ ಮತ್ತು ಹೆಡ್-ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆ ಹಾಗೂ ನಂತರದಲ್ಲಿ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications