BSF Recruitment: ಒಟ್ಟು 1526 ಹುದ್ದೆಗಳು ಖಾಲಿ ಇವೆ, ನೇಮಕಾತಿ ವಿವರ
ಬೆಂಗಳೂರು, ಜೂನ್ 06: ಗಡಿ ಭದ್ರತಾ ಪಡೆಯಲ್ಲಿ (BSF) ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶುರುವಾಗಿದೆ. ಒಂದೂವರೆಗೆ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಗಡಿ ಭದ್ರತಾ ಪಡೆಯಲ್ಲಿ ಹೆಡ್ ಕಾನ್ಸ್ಟೇಬಲ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳು ಸೇರಿದಂತೆ ಬರೋಬ್ಬರಿ 1526 ಖಾಲಿ ಇವೆ. ಭಾರತೀಯ ಸೈನ್ಯದಲ್ಲಿ ಕೆಲಸ ಮಾಡುವ ಉದ್ದೇಶ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಅಭ್ಯರ್ಥಿಗಳ ಅರ್ಜಿ ಸಲ್ಲಿಕೆಗೆ ಜುಲೈ 8 ಕೊನೆಯ ದಿನವಾಗಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಕೆಗೆ ಮೊದಲು ವೇತನ, ವಿದ್ಯಾರ್ಹತೆ, ವಯೋಮಿತಿ ಸೇರಿದಂತೆ ನೇಮಕಾತಿ ಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ.
ನೇಮಕಾತಿ ಪೂರ್ಣ ವಿವರ
ನೇಮಕಾತಿ ಎಲ್ಲಿ?: ಬಿಎಸ್ಎಫ್
ಹುದ್ದೆ ಹೆಸರು: ಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್
ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಮತ್ತು ವಾರಂಟ್ ಆಫೀಸರ್ : 243
ಹೆಡ್ ಕಾನ್ಸ್ಟೇಬಲ್ ಮತ್ತು ಹವಿಲ್ದಾರ್ (ಕ್ಲರ್ಕ್)-: 1283
ಒಟ್ಟು ಹುದ್ದೆ: 1526
ಅರ್ಜಿ ಸಲ್ಲಿಕೆ ಕೊನೆ ದಿನ: ಜುಲೈ 8
ಮಾಸಿಕ ವೇತನ
ಅರ್ಜಿ ಸಲ್ಲಿಕೆ, ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಬಹುದು. ಸದ್ಯ ವೇತನ ನಿಗದಿಪಡಿಸಿಲ್ಲ. ಅಭ್ಯರ್ಥಿ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ನಿಯಮಾನುಸಾರ ಮಾಸಿಕ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ ಮಾಹಿತಿ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ, ದೈಹಿಕ ಮಾನದಂಡಗಳ ಪರೀಕ್ಷೆ ನಡೆಸಲಾಗುವುದು. ಟೈಪಿಂಗ್/ಸ್ಟೆನೋ ಒಳಗೊಂಡ ಕೌಶಲ್ಯ ಪರೀಕ್ಷೆ ನಡೆಸಿ ಇಲ್ಲಿ ಆಯ್ಕೆ ಆಗುವವರಿಗೆ ಅಂತಿಮದಲ್ಲಿ ದಾಖಲಾತಿ ಪರಿಶೀಲಿಸಲಾಗುವುದು. ಈ ವೇಳೆ ವೈದ್ಯಕೀಯ ಪರೀಕ್ಷೆ ಸಹ ಇರಲಿದೆ ಎಂದು ಬಿಎಸ್ಎಫ್ ಅಧಿಸೂಚನೆ ತಿಳಿಸಿದೆ.
ಯಾವುದೇ ಅಭ್ಯರ್ಥಿಗಳಿಗೂ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆ ದಿನದವರೆಗೂ ಕಾಯದೇ ಈಗಲೇ ಅರ್ಜಿ ಹಾಕಿದರೆ ಉತ್ತಮ.
ಅರ್ಜಿ ಸಲ್ಲಿಕೆ ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅದಕ್ಕಾಗಿ ಮೊದಲು ನೀವು ಇಲ್ಲಿ ನೀಡಲಾಗಿರುವ ಅಧಿಕೃತ ವೆಬ್ಸೈಟ್ https://rectt.bsf.gov.in/ ಗೆ ಭೇಟಿ ನೀಡಬೇಕು. ಈ ಲಿಂಕ್ ಮೂಲಕ ನೀವು ಈ ಕೂಡಲೇ ಸೂಕ್ತ ದಾಖಲೆಗಳ ಸಮೇತರಾಗಿ ಅರ್ಜಿ ಹಾಕಬೇಕು.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications