Union Budget 2023; 30 ಕೌಶಲ್ಯ ತರಬೇತಿ ಕೇಂದ್ರಗಳ ಸ್ಥಾಪನೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಯುವ ಜನರಿಗೆ ಉದ್ಯೋಗ ತರಬೇತಿ ನೀಡಲು ಆದ್ಯತೆ ನೀಡಿದ್ದಾರೆ. 30 ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ನವದೆಹಲಿ, ಫೆಬ್ರವರಿ 01; ಲೋಕಸಭೆಯ ಬಜೆಟ್ ಅಧಿವೇಶನ ಮಂಗಳವಾರ ಆರಂಭವಾಗಿದೆ. ಬುಧವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ.
ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಉದ್ಯೋಗ ಕ್ಷೇತ್ರ, ಯುವಕರಿಗೆ ಉದ್ಯೋಗ ತರಬೇತಿ ನೀಡುವ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಇದಕ್ಕಾಗಿ ಹೊಸ ಘೋಷಣೆಯನ್ನು ಸಹ ಮಾಡಿದ್ದಾರೆ.
ಅಂತರಾಷ್ಟ್ರೀಯ ಅವಕಾಶಗಳಿಗೆ ತಕ್ಕಂತೆ ದೇಶದ ಯುವಕರಿಗೆ ತರಬೇತಿ ನೀಡಲು 30 ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ ಎಂದು ನಿರ್ಮಾಲಾ ಸೀತಾರಾಮನ್ ಹೇಳಿದರು.

'ಕೌಶಲ್ಯ ಭಾರತ ಅಂತರಾಷ್ಟ್ರೀಯ ಕೇಂದ್ರ'ಗಳು ದೇಶದ ವಿವಿಧ ರಾಜ್ಯಗಳ 30 ಕಡೆ ಸ್ಥಾಪನೆಯಾಗಲಿವೆ.
ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಯುವ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶಗಳಿವೆ. ಆದರೆ ಅದಕ್ಕೆ ತಕ್ಕ ತರಬೇತಿ ಸಿಗುತ್ತಿಲ್ಲ. ಈ ಹಿನ್ನಲೆಯಲ್ಲಿ ತರಬೇತಿ ಕೇಂದ್ರಗಳ ಮೂಲಕ ಯುವಕರಿಗೆ ಅಂತರಾಷ್ಟ್ರೀಯ ಮಟ್ಟದ ತರಬೇತಿಯನ್ನು ನೀಡಲಾಗುತ್ತದೆ.
'ಪ್ರಧಾನ್ ಮಂತ್ರಿ ಕೌಶಲ್ ವಿಕಾಸ್ ಯೋಜನೆ 4.0' ಆರಂಭಿಸಿ ಯುವಜನರಿಗೆ ತರಬೇತಿ ನೀಡಲಾಗುತ್ತದೆ ಎಂದು ಹಣಕಾಸು ಸಚಿವರು ಘೋಷಣೆ ಮಾಡಿದ್ದಾರೆ.
ಅಪ್ರೆಂಟಿಸ್ಶಿಪ್ ಯೋಜನೆ ಘೋಷಣೆ; ನಿರ್ಮಲಾ ಸೀತಾರಾಮನ್ ಬುಧವಾರ ಮಂಡನೆ ಮಾಡಿದ ಬಜೆಟ್ನಲ್ಲಿ ಅಪ್ರೆಂಟಿಶಿಪ್ ಯೋಜನೆಯೊಂದನ್ನು ಘೋಷಣೆ ಮಾಡಲಾಗಿದೆ. ದೇಶದ ಯುವಜನರ ಆರ್ಥಿಕತೆಯನ್ನು ಉತ್ತೇಜಿಸಲು ಅವರ ಕನಸುಗಳನ್ನು ನನಸು ಮಾಡಲು ಈ ಯೋಜನೆ ಯಡಿ ಸ್ಟೈಫಂಡ್ ನೀಡಲಾಗುತ್ತದೆ.
ಬಜೆಟ್ನಲ್ಲಿ 'ಪ್ಯಾನ್ ಇಂಡಿಯಾ ನ್ಯಾಷನಲ್ ಅಪ್ರೆಂಟಿಸ್ಶಿಪ್ ಪ್ರಮೋಷನ್ ಸ್ಕೀಮ್' ಘೋಷಣೆ ಮಾಡಲಾಗಿದೆ. ಇದರ ಅನ್ವಯ ಮೂರು ವರ್ಷಗಳಲ್ಲಿ 47 ಲಕ್ಷ ಯುವಕರಿಗೆ ಸ್ಟೈಫಂಡ್ ಬೆಂಬವನ್ನು ಒದಗಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಸಚಿವರು ಬಜೆಟ್ ಭಾಷಣದಲ್ಲಿ, "ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಲಾಗಿದೆ. ಇದರಿಂದ ಕೌಶಲ್ಯ, ಆರ್ಥಿಕತೆ, ವ್ಯಾಪಾರ ಅವಕಾಶಗಳ ಕುರಿತು ಮಾಹಿತಿ ನೀಡುವುದರಿಂದ ಯುವ ಜನತೆಗೆ ಉದ್ಯೋಗ ಸೃಷ್ಟಿಸಲು ಸಹಾಯಕವಾಗಲಿದೆ" ಎಂದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications