Union Budget 2023; 30 ಕೌಶಲ್ಯ ತರಬೇತಿ ಕೇಂದ್ರಗಳ ಸ್ಥಾಪನೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಯುವ ಜನರಿಗೆ ಉದ್ಯೋಗ ತರಬೇತಿ ನೀಡಲು ಆದ್ಯತೆ ನೀಡಿದ್ದಾರೆ. 30 ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ನವದೆಹಲಿ, ಫೆಬ್ರವರಿ 01; ಲೋಕಸಭೆಯ ಬಜೆಟ್ ಅಧಿವೇಶನ ಮಂಗಳವಾರ ಆರಂಭವಾಗಿದೆ. ಬುಧವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ.
ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಉದ್ಯೋಗ ಕ್ಷೇತ್ರ, ಯುವಕರಿಗೆ ಉದ್ಯೋಗ ತರಬೇತಿ ನೀಡುವ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಇದಕ್ಕಾಗಿ ಹೊಸ ಘೋಷಣೆಯನ್ನು ಸಹ ಮಾಡಿದ್ದಾರೆ.
ಅಂತರಾಷ್ಟ್ರೀಯ ಅವಕಾಶಗಳಿಗೆ ತಕ್ಕಂತೆ ದೇಶದ ಯುವಕರಿಗೆ ತರಬೇತಿ ನೀಡಲು 30 ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ ಎಂದು ನಿರ್ಮಾಲಾ ಸೀತಾರಾಮನ್ ಹೇಳಿದರು.

'ಕೌಶಲ್ಯ ಭಾರತ ಅಂತರಾಷ್ಟ್ರೀಯ ಕೇಂದ್ರ'ಗಳು ದೇಶದ ವಿವಿಧ ರಾಜ್ಯಗಳ 30 ಕಡೆ ಸ್ಥಾಪನೆಯಾಗಲಿವೆ.
ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಯುವ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶಗಳಿವೆ. ಆದರೆ ಅದಕ್ಕೆ ತಕ್ಕ ತರಬೇತಿ ಸಿಗುತ್ತಿಲ್ಲ. ಈ ಹಿನ್ನಲೆಯಲ್ಲಿ ತರಬೇತಿ ಕೇಂದ್ರಗಳ ಮೂಲಕ ಯುವಕರಿಗೆ ಅಂತರಾಷ್ಟ್ರೀಯ ಮಟ್ಟದ ತರಬೇತಿಯನ್ನು ನೀಡಲಾಗುತ್ತದೆ.
'ಪ್ರಧಾನ್ ಮಂತ್ರಿ ಕೌಶಲ್ ವಿಕಾಸ್ ಯೋಜನೆ 4.0' ಆರಂಭಿಸಿ ಯುವಜನರಿಗೆ ತರಬೇತಿ ನೀಡಲಾಗುತ್ತದೆ ಎಂದು ಹಣಕಾಸು ಸಚಿವರು ಘೋಷಣೆ ಮಾಡಿದ್ದಾರೆ.
ಅಪ್ರೆಂಟಿಸ್ಶಿಪ್ ಯೋಜನೆ ಘೋಷಣೆ; ನಿರ್ಮಲಾ ಸೀತಾರಾಮನ್ ಬುಧವಾರ ಮಂಡನೆ ಮಾಡಿದ ಬಜೆಟ್ನಲ್ಲಿ ಅಪ್ರೆಂಟಿಶಿಪ್ ಯೋಜನೆಯೊಂದನ್ನು ಘೋಷಣೆ ಮಾಡಲಾಗಿದೆ. ದೇಶದ ಯುವಜನರ ಆರ್ಥಿಕತೆಯನ್ನು ಉತ್ತೇಜಿಸಲು ಅವರ ಕನಸುಗಳನ್ನು ನನಸು ಮಾಡಲು ಈ ಯೋಜನೆ ಯಡಿ ಸ್ಟೈಫಂಡ್ ನೀಡಲಾಗುತ್ತದೆ.
ಬಜೆಟ್ನಲ್ಲಿ 'ಪ್ಯಾನ್ ಇಂಡಿಯಾ ನ್ಯಾಷನಲ್ ಅಪ್ರೆಂಟಿಸ್ಶಿಪ್ ಪ್ರಮೋಷನ್ ಸ್ಕೀಮ್' ಘೋಷಣೆ ಮಾಡಲಾಗಿದೆ. ಇದರ ಅನ್ವಯ ಮೂರು ವರ್ಷಗಳಲ್ಲಿ 47 ಲಕ್ಷ ಯುವಕರಿಗೆ ಸ್ಟೈಫಂಡ್ ಬೆಂಬವನ್ನು ಒದಗಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಸಚಿವರು ಬಜೆಟ್ ಭಾಷಣದಲ್ಲಿ, "ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಲಾಗಿದೆ. ಇದರಿಂದ ಕೌಶಲ್ಯ, ಆರ್ಥಿಕತೆ, ವ್ಯಾಪಾರ ಅವಕಾಶಗಳ ಕುರಿತು ಮಾಹಿತಿ ನೀಡುವುದರಿಂದ ಯುವ ಜನತೆಗೆ ಉದ್ಯೋಗ ಸೃಷ್ಟಿಸಲು ಸಹಾಯಕವಾಗಲಿದೆ" ಎಂದರು.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications