ಬಜೆಟ್ 2024: 1 ಕೋಟಿ ಯುವಕರಿಗೆ ಟಾಪ್ 500 ಕಂಪನಿಗಳಲ್ಲಿ ಉದ್ಯೋಗ ಘೋಷಣೆ
ನವದೆಹಲಿ, ಜುಲೈ 23: ಮುಂದಿನ ಐದು ವರ್ಷಗಳಲ್ಲಿ ಟಾಪ್ 500 ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಅವಕಾಶ ಕಲ್ಪಿಸಲು ಸರ್ಕಾರ ಇಂಟರ್ನ್ಶಿಪ್ ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಸದರಿ 2024-25 ಮುಂಗಡ ಪತ್ರ ಮಂಡನೇ ವೇಳೆ, ಸೀತಾರಾಮನ್ ಪ್ರತಿ ತಿಂಗಳು ₹5,000 ಇಂಟರ್ನ್ಶಿಪ್ ಭತ್ಯೆ ಮತ್ತು ಹೊಸ ಯೋಜನೆಯ ಅಡಿಯಲ್ಲಿ ₹6,000 ಒಂದು ಬಾರಿ ಸಹಾಯ ಒದಗಿಸಲಾಗುವುದು ಎಂದು ಅವರು ವಿವರಿಸಿದರು.

ಇಂಟರ್ನ್ಶಿಪ್ ಅನ್ನು ಸುಗಮಗೊಳಿಸುವ ಕಂಪನಿಗಳು ಇಂಟರ್ನ್ಗಳಿಗೆ ತರಬೇತಿ ನೀಡುವ ವೆಚ್ಚವನ್ನು ಭರಿಸುತ್ತವೆ.ಅದಕ್ಕಾಗಿ ಅವರ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR) ಹಣವನ್ನು ಬಳಸುತ್ತವೆ. ಇಂಟರ್ನ್ಗಳು ನಿಜ ಜೀವನದ ಪರಿಸರಕ್ಕೆ ಒಡ್ಡಿಕೊಳ್ಳುತ್ತಾರೆ ಮತ್ತು ಪ್ರತಿ ತಿಂಗಳು ಭತ್ಯೆಯನ್ನು ಪಡೆಯುತ್ತಾರೆ ಎಂದು ಅವರು ಹೇಳಿದರು.
ಹೊಸ ಉದ್ಯೋಗಿಗಳಿಗೆ ಒಂದು ತಿಂಗಳ ವೇತನ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ದಾಖಲೆಯ ಬಜೆಟ್ ಮಂಡನೆ ಮಾಡಿದ್ದಾರೆ. ಈ ವೇಳೆ ಅವರು ಹೊಸದಾಗಿ ಕೆಲಸಕ್ಕೆ ಸೇರುವ ಉದ್ಯೋಗಿಗಳಿಗೆ ಕೊಡುಗೆಯೊಂದನ್ನು ಘೋಷಣೆ ಮಾಡಿದ್ದಾರೆ. ಉದ್ಯೋಗಕ್ಕೆ ಸೇರುವ ಎಲ್ಲಾ ಹೊಸ ಉದ್ಯೋಗಿಗಳಿಗೆ ಸರ್ಕಾರವು ಒಂದು ತಿಂಗಳ ವೇತನ ನೀಡಲಿದೆ. ಈ ಮೊತ್ತವು ಅವರ ಖಾತೆಗೆ ಜಮೆ ಆಗುವುದಿಲ್ಲ. ಬದಲಾಗಿ, ಉದ್ಯೋಗಿಗಳಿಗೆ ಭವಿಷ್ಯ ನಿಧಿ (Provident Fund) ಕೊಡುಗೆಯಾಗಿ ನೀಡಲಾಗುವುದು ಎಂದು ಅವರು ತಿಳಿಸಿದರು.
ಹೊಸ ಉದ್ಯೋಗಿಗಳಿಗೆ ಒಂದು ತಿಂಗಳ ವೇತನ ನೀಡಯವು ಈ ಯೋಜನೆಯು ಎಲ್ಲಾ ರಂಗಗಳಲ್ಲಿ ಹೊಸದಾಗಿ ಕೆಲಸಕ್ಕೆ ಬರುವ ನವ ಉದ್ಯೋಗಿಗಳಿಗೆ ನೀಡಲು ಸರ್ಕಾರ ಉದ್ದೇಶಿಸಿದೆ. ಇದರಿಂದ ಆಗತಾನೇ ಆಯಾ ಕ್ಷೇತ್ರವನ್ನು ಪ್ರವೇಶಿಸುವ ದೇಶದ 2 ಕೋಟಿಗೂ ಹೆಚ್ಚು ಮಂದಿಗೆ ಪ್ರಯೋಜನ ಸಿಗಲಿದೆ ಎಂದು ಅವರು ವಿವರಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿಯು ಮೂರನೇ ಭಾರಿಗೆ ಕೇಂದ್ರದಲ್ಲಿ ಸತತವಾಗಿ ಅಧಿಕಾರಕ್ಕೆ ಬಂದಿದೆ. ಬಿಜೆಪಿಯು ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ವಂತ ಬಹುಮತ ಹೊಂದದೇ, ಮಿತ್ರ ಪಕ್ಷಗಳ ಬೆಂಬಲ ಸಹಿತವಾಗಿ ಅಧಿಕಾರಕ್ಕೆ ಬಂದಿದೆ. ಈ ಭಾರಿ ಬಿಜೆಪಿಗೆ ತ್ರಾಸದಾಯಕ ಫಲಿತಾಂಶ ಧಕ್ಕಿದೆ.
ಉದ್ಯೋಗ ಸಂಬಂಧಿತ 03 ಯೋಜನೆ ಘೋಷಣೆ
ಇದಕ್ಕೆ ಉದ್ಯೋಗಾವಕಾಶಗಳ ಮೇಲಿನ ಅಸಮಾಧಾನ, ಉದ್ಯೋಗ ಸೃಷ್ಟಿ ಭರವಸೆ ಈಡೇರಿಕೆ ಆಗದ ಅಂಶಗಳೇ ಕಾರಣ ಎಂದು ಕೇಂದ್ರ ಪರಿಗಣಿಸಿದೆ. ಹೀಗಾಗಿ ಬಜೆಟ್ ಮೇಲೆ ಉದ್ಯೋಗ ಕ್ಷೇತ್ರದತ್ತ ಗಮನ ಹರಿಸಲಾಗಿದೆ. ಹೀಗಾಗಿ ಸದರಿ 2024-25ರ ಕೇಂದ್ರ ಬಜೆಟ್ ಮಂಡಿಸುವಾಗ ಹಣಕಾಸು ಸಚಿವರು ಮೂರು ಉದ್ಯೋಗ ಸಂಬಂಧಿತ ಯೋಜನೆ ಘೋಷಿಸಿದ್ದಾರೆ.
ಉದ್ಯೋಗಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ದೇಶದಲ್ಲಿ ಉದ್ಯೋಗಿ ಮಹಿಳಾ ಹಾಸ್ಟೆಲ್ಗಳನ್ನು ಸ್ಥಾಪಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಇದೇ ವೇಳೆ ಘೋಷಣೆ ಮಾಡಿದರು.
ಹವಾಮಾನ-ಸ್ಥಿತಿಸ್ಥಾಪಕ ಬೀಜಗಳನ್ನು ಅಭಿವೃದ್ಧಿಪಡಿಸಲು ಸರ್ಕಾರವು ಖಾಸಗಿ ವಲಯ, ಡೊಮೇನ್ ತಜ್ಞರು ಮತ್ತು ಇತರರಿಗೆ ಹಣವನ್ನು ನೀಡಲಾಗುತ್ತದೆ ಎಂದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications