Congress Manifesto: 30 ಲಕ್ಷ ಹುದ್ದೆಗಳ ಭರ್ತಿ ಹಾಗೂ ಈ ಕುಟುಂಬದ ಮಹಿಳೆಯರಿಗೆ ಪ್ರತಿ ವರ್ಷ ₹1,00,000 ನೆರವು
ನವದೆಹಲಿ, ಏಪ್ರಿಲ್, 05: ಇದೀಗ ದೇಶದಲ್ಲಿ ಲೋಕಸಭೆ ಚುನಾವಣೆ ಕಾವು ಏರುತ್ತಿದ್ದು, ಮತದಾರರನ್ನು ಸೆಳೆಯಲು ಎಲ್ಲಾ ಪಕ್ಷಗಳು ಭಾರೀ ತಯಾರಿ ನಡೆಸುತ್ತಿವೆ. ಇದೀಗ ಇಂದು (ಏಪ್ರಿಲ್ 05) ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಗೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, 25 ಗ್ಯಾರಂಟಿಗಳಮನ್ನು ಘೋಷಣೆ ಮಾಡಿದೆ. ಈ ವೇಳೆ ಯುವಕರಿಗೆ ಹಾಗೂ ಬಡ ಕುಟುಂಬದ ಮಹಿಳೆಯರಿಗೆ ಗುಡ್ನ್ಯೂಸ್ವೊಂದನ್ನು ನೀಡಿದೆ. ಮಾಹಿತಿ ಇಲ್ಲಿದೆ ಗಮನಿಸಿ.
ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. 2024ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬಡ ಕುಟುಂಬದ ಮಹಿಳೆಯರಿಗೆ ಪ್ರತಿ ವರ್ಷ 1,00,000 ರೂಪಾಯಿಗಳ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.'

ಯುವ ನ್ಯಾಯ ಅಡಿಯಲ್ಲಿ ಕೇಂದ್ರ ಸರ್ಕಾರದ ವಿವಿಧ ಹಂತಗಳಲ್ಲಿ ಮಂಜೂರಿ ಆಗಿರುವ ಹುದ್ದೆಗಳಲ್ಲಿ ಸುಮಾರು 30 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಣೆ ಮಾಡಿದೆ. ಮತ್ತು ಒಂದು ವರ್ಷದವರೆಗೆ ಅಪ್ರೆಂಟಿಸ್ಶಿಪ್ ಕಾರ್ಯಕ್ರಮದಡಿಯಲ್ಲಿ ಯುವಕರಿಗೆ 1 ಲಕ್ಷ ರೂಪಾಯಿ ನೀಡುವುದಾಗಿ ಘೋಷಣೆ ಮಾಡಿದೆ.
ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಭಾರೀ ಪೈಪೋಟಿ ನಡೆಸುತ್ತಿದ್ದಾರೆ. ಅಲ್ಲದೆ ಆರೋಪ, ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ. ಇನ್ನು ಇಂದು (ಏಪ್ರಿಲ್ 04) ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಕಾರ್ಯಕ್ರಮದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
"ರಾಮ ಕುಟುಂಬಸ್ಥ, ಸೀತೆ, ಲಕ್ಷ್ಮಣ ಬಿಟ್ರು, ರಾಮ ಒಬ್ಬನಿಗೆ ದೇವಾಲಯ ಕಟ್ಟಿ, ಜೈ ಶ್ರೀರಾಮ್ ಅಂತಾ ಹೇಳುತ್ತಾರೆ. ಶ್ರೀರಾಮ, ಸೀತೆ ಎಲ್ಲರೂ ಒಂದೇ. ಅದಕ್ಕಾಗಿಯೇ ನಾನು ಹೇಳುತ್ತೇನೆ ಜೈ ಸೀತಾರಾಮ, ನಿವೆಲ್ಲರೂ ಸೀತಾರಾಮ ಎಂದು ಹೇಳಿ," ಎಂದು ಜನರಿಗೆ ಕರೆ ನೀಡಿದರು.
ಇನ್ನು ಅಮಿತ್ ಷಾ ಅವರನ್ನು ಭೇಟಿ ಮಾಡಿ ಕರ್ನಾಟಕದಲ್ಲಿ ಬರಗಾಲ ಇದೆ, ಹಣ ಬಿಡುಗಡೆ ಮಾಡಿ ಎಂದು ಮನವಿ ಮಾಡಲಾಗಿತ್ತು. ಡಿಸೆಂಬರ್ 23ರಂದು ಸಭೆ ನಡೆಸಿ ರಾಜ್ಯಕ್ಕೆ ಹಣ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದರು. ಆದರೆ ಎಂಟು ತಿಂಗಳು ಕಳೆದರೂ ಸಭೆ ನಡೆಸಲಿಲ್ಲ, ಹಣ ಬಿಡುಗಡೆ ಮಾಡಲಿಲ್ಲ. ನಾವು ರಾಜ್ಯಕ್ಕೆ 18,171 ಕೋಟಿ ಹಣ ಕೇಳಿದ್ದೇವೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ನಾವು ರೈತರಿಗೆ 33,2,500 ಸಾವಿರ ರೈತರಿಗೆ 2,000 ಹಣ ಕೊಟ್ಟಿದ್ದೇನೆ ಎಂದು ಹೇಳಿದರು.
ನಮ್ಮ ರಾಜ್ಯದಿಂದಲೇ ಅತಿ ಹೆಚ್ಚು ತೆರಿಗೆ ಹಣ ವಸೂಲಿ ಮಾಡಿಕೊಡಲಾಗುತ್ತದೆ. ನಮಗೇ ಅನ್ಯಾಯ ಮಾಡಿದರೇ ಹೇಗೆ ನಿರ್ಮಲಾ ಸೀತಾರಾಮನ್ ಅವರೇ? ಎಂದು ಪ್ರಶ್ನೆ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಮತಕ್ಕಾಗಿ ಮೋದಿ ರೋಡ್ ಶೋ ಮಾಡ್ತಾರೆ. ದುಡ್ಡು ಕೊಟ್ಟು ಜನ ಕರೆದುಕೊಂಡು ಬರುತ್ತಾರೆ. 27 ಜನ ಸಂಸದರು ಇದ್ದರು. ರಾಜ್ಯದ ಬಗ್ಗೆ ಒಬ್ಬರು ಮಾತನಾಡಲಿಲ್ಲ. ಮೋದಿ ಕಂಡರೆ ಗಡಗಡ ಎಂದು ನಡುಗುತ್ತಾರೆ. ಇಂತಹವರನ್ನು ಯಾಕೆ ಪಾರ್ಲಿಮೆಂಟ್ಗೆ ಕಳುಹಿಸಬೇಕು. ರಾಜ್ಯದ 27 ಬಿಜೆಪಿ ಎಂಪಿಗಳು ಕೋಲೆ ಬಸವನ ರೀತಿ ಇದ್ದಾರೆ. ಎಲ್ಲದಕ್ಕೂ ಬರೀ ತಲೆ ಅಲ್ಲಾಡಿಸುತ್ತಾರೆ, ನಾರಾಯಣಸ್ವಾಮಿ ಮಾತಾಡಲಿಲ್ಲ, ಗೋವಿಂದ ಕಾರಜೋಳ ಮಾತನಾಡಲಿಲ್ಲ ಎಂದು ಸಂಸದರ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಬಿಜೆಪಿ ವಿರುದ್ಧ ಮಾಡಿದವರನ್ನು ಹೆದರಿಸುತ್ತಾರೆ. ಹಾಗೆಯೇ ಕೆ.ಎಸ್.ಈಶ್ವರಪ್ಪ ಪಕ್ಷೇತರವಾಗಿ ನಿಂತರೆ ಅವರಿಗೆ ಇ.ಡಿ ಬಿಟ್ಟು ಹೆದರಿಸುತ್ತಾರೆ ಎಂದು ಆಕ್ರೋಶ ಹೊರಹಾಕಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications