ದಕ್ಷಿಣ ಕನ್ನಡ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಜನವರಿ 19 : ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 12/2/2020 ಕೊನೆಯ ದಿನವಾಗಿದೆ.
ಶೀಘ್ರಲಿಪಿಗಾರರರು 10, ಬೆರಳಚ್ಚುಗಾರರು 6, ಬೆರಳಚ್ಚು ನಕಲುಗಾರರು 13 ಮತ್ತು ಆದೇಶ ಜಾರಿಕಾರರು 5 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.
ಶಿವಮೊಗ್ಗ; 69 ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದ ಒಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಹಾವೇರಿ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ
ಕನ್ನಡ ಮತ್ತು ಆಂಗ್ಲ ಬೆರಳಚ್ಚು ಫ್ರೌಢ ದರ್ಜೆ ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಫ್ರೌಢ ಪರೀಕ್ಷೆಯಲ್ಲಿ ತೇರ್ಗಡೆ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದೊಳಗೆ ಹೊಂದಿರಬೇಕಾಗಿದೆ.
ಕೊಪ್ಪಳ; 22 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಹಾಕಿ
ವಯೋಮಿತಿ ವಿವರಗಳು : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷದ ವಯೋಮಿತಿ ಹೊಂದಿರಬೇಕು. ಕೆಳಕಂಡ ವಯೋಮಿತಿಯನ್ನು ಮೀರಿರಬಾರದು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ -1ರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಾಧಿಕಾರ ನೀಡುವ ಜಾತಿ ದೃಢೀಕರಣ ಪತ್ರ ಹೊಂದಿದ್ದಲ್ಲಿ ಗರಿಷ್ಠ 40 ವರ್ಷ.
ಪ್ರವರ್ಗ 2ಎ/2ಬಿ/3ಎ/3ಬಿಗೆ ಸೇರಿದ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಾಧಿಕಾರ ನೀಡುವ ಜಾತಿ ದೃಢೀಕರಣ ಪತ್ರ ಹೊಂದಿದ್ದಲ್ಲಿ ಗರಿಷ್ಠ 38 ವರ್ಷ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ.
ಅರ್ಜಿ ಶುಲ್ಕದ ವಿವರ : ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 1, 2ಎ, 2ಬಿ, 3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 200 ರೂ., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ 100 ರೂ., ಎಲ್ಲಾ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ.ಗಳು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ