ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ, ಏಪ್ರಿಲ್ 25ರ ತನಕ ಅರ್ಜಿ ಸಲ್ಲಿಕೆ ಮಾಡಿ
ದಾವಣಗೆರೆ, ಮಾರ್ಚ್ 29: ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಏಪ್ರಿಲ್ 25 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಮತ್ತು ಇತರ ವಿವರಗಳು ಇಲ್ಲಿವೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಹರಿಹರ, ಜಗಳೂರು, ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 27 ಅಂಗನವಾಡಿ ಕಾರ್ಯಕರ್ತೆ, 4 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 214 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಈ ಹುದ್ದೆಗಳನ್ನು ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಇಲಾಖೆಯ https://dwcd.karnataka.gov.in ರಲ್ಲಿ ಆನ್ಲೈನ್ ಸೇವೆಗಳ ಟ್ಯಾಬ್ನಲ್ಲಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಯ ಸಬ್ಟ್ಯಾಬ್ನಲ್ಲಿ ಕ್ಲಿಕ್ ಮಾಡುವ ಮೂಲಕ ವೆಬ್ಸೈಟ್ ವಿಳಾಸ https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬೇಕು.
ಎಷ್ಟು ಹುದ್ದೆಗಳು ಖಾಲಿ ಇವೆ?: ಹರಿಹರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 4 ಅಂಗನವಾಡಿ ಕಾರ್ಯಕರ್ತೆ ಮತ್ತು 20 ಅಂಗನವಾಡಿ ಸಹಾಯಕಿಯರನ್ನು ನೇಮಕಾತಿ ಮಾಡಲು ಈ ಹಿಂದೆ ಭೌತಿಕವಾಗಿ ಅರ್ಜಿ ಆಹ್ವಾನಿಸಲಾಗಿದ್ದು ಇದನ್ನು ಪರಿಗಣಿಸಲಾಗುವುದಿಲ್ಲ, ಈ ಅಭ್ಯರ್ಥಿಗಳು ಸಹ ಹೊಸದಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.
ಅಭ್ಯರ್ಥಿಗಳು ಆನ್ಲೈನ್ನಲ್ಲಿ ನಿಗದಿತ ಅರ್ಜಿ ತುಂಬುವುದು, ಭಾವಚಿತ್ರ, ಅಗತ್ಯ ದಾಖಲೆ, ಆಧಾರ್ ಸಂಖ್ಯೆ ನಮೂದಿಸಿ ಇ-ಹಸ್ತಾಕ್ಷರದೊಂದಿಗೆ ಅರ್ಜಿ ಪೂರ್ಣಗೊಳಿಸಬೇಕಾಗಿರುತ್ತದೆ. ನಾಲ್ಕು ವಿವಿಧ ಹಂತದಲ್ಲಿ ಅರ್ಜಿಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುವುದು.
ವೆಬ್ಸೈಟ್ನಲ್ಲಿ ತಿಳಿಸಿರುವ ಅಂಶಗಳ ಜೊತೆಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಇತರೆ ಅವಶ್ಯಕ ದಾಖಲಾತಿಗಳ ಜೊತೆಗೆ, ವಿಧವೆಯರು ಪತಿಯ ಮರಣ ಪ್ರಮಾಣ ಪತ್ರ ಅಥವಾ ವಿಧವಾ ಪ್ರಮಾಣ ಪತ್ರವನ್ನು ಆನ್ಲೈನ್ನಲ್ಲಿ ಅಪ್ ಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ.
ಅಭ್ಯರ್ಥಿಗಳ ಆಯ್ಕೆ ಪಟ್ಟಿ ತಯಾರಿಸುವಾಗ ಆನ್ಲೈನ್ನಲ್ಲಿ ಅಪ್ಲೋಡ್ ಮಾಡಿರುವ ವಿಧವೆಗೆ ಸಂಬಂಧಿಸಿದ ದಾಖಲಾತಿಗಳನ್ನು ಡೌನ್ಲೋಡ್ ಮಾಡಿಕೊಂಡು ಭೌತಿಕವಾಗಿ ಪರಿಶೀಲಿಸಿ ಆಯ್ಕೆ ಪಟ್ಟಿ ತಯಾರಿಸಲಾಗುವುದು. ಆಸಿಡ್ ದಾಳಿಗೆ ತುತ್ತಾದ ಮಹಿಳೆಯರಿಗೆ ಮೊದಲ ಆದ್ಯತೆ, ಇಲಾಖೆಯ ಸಂಸ್ಥೆಗಳ ನಿವಾಸಿಗಳಿಗೆ ಎರಡನೇ ಆದ್ಯತೆ, ವಿಧವೆಯರಿಗೆ ಮೂರನೇ ಆದ್ಯತೆ ನೀಡಲಾಗುವುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದಾವಣಗೆರೆ 08192-263219, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಹರಿಹರ 08192-241431, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಜಗಳೂರು 08196-227132, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಹೊನ್ನಾಳಿ ಮತ್ತು ನ್ಯಾಮತಿ 08196-227132 ಸಂಪರ್ಕಿಸಬಹುದು.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications