Jobs: ದಾವಣಗೆರೆಯಲ್ಲಿ ಉದ್ಯೋಗ ಮೇಳ, ಕೆಲಸ ಖಾಲಿ ಇದೆ
ದಾವಣಗೆರೆ, ಜುಲೈ. 05: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಜುಲೈ 6 ರಂದು (ಶನಿವಾರ) ಬೆಳಗ್ಗೆ 10 ಗಂಟೆಗೆ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ 20 ಕ್ಕಿಂತ ಹೆಚ್ಚು ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿ.ಫಾರ್ಮ, ಬಿ.ಫಾರ್ಮ, ಡಿಪ್ಲೊಮಾ, ಬಿಇ, ಬಿ ಟೆಕ್, ಹಾಗೂ ಪದವಿ, ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ 15 ಸೆಟ್ ಬಯೋಡಾಟಾ ಮತ್ತು ಆಧಾರ್ ನಂಬರ್ ಜೊತೆಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ: 8105122556, 9591088202, ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ.ಡಿ.ತಿಳಿಸಿದ್ದಾರೆ.
ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆ
ಜಿಲ್ಲಾ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ 16 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆ ನೇಮಕ ಮಾಡಿಕೊಳ್ಳಲು ಜೂ.29 ರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಹುದ್ದೆಗಳು:
ರಾಜಗೊಂಡನಹಳ್ಳಿ , ಬೇತೂರು, ಕೊಂಡಜ್ಜಿ, ಹೆಬ್ಬಾಳು , ಕಬ್ಬಳ, ಉಕ್ಕಡಗಾತ್ರಿ, ಹಳೆಬಾತಿ, ಪಾಂಡೋಮಟ್ಟಿ, ಕಂದನಕೋವಿ, ಕಕ್ಕರಗೊಳ್ಳ, ಬನ್ನಿಕೋಡು, ವಡೆಯರಹತ್ತೂರು, ಓಬನ್ನನಹಳ್ಳಿ(ನರಗನಹಳ್ಳಿ) , ದೊಡ್ಡಬ್ಬಿಹೆರೆ , ಅಣಜಿ , ಗುಡಾಳು ಇಲ್ಲಿ ಖಾಲಿ ಇರುತ್ತವೆ.
ಆಸಕ್ತ ಆಭ್ಯರ್ಥಿಗಳು ದಾಖಲೆಗಳನ್ನು ಅಧಿಕಾರಿಗಳಿಂದ ದೃಢೀಕರಿಸಿ ವೆಬ್ಸೈಟ್ davanagere.nic.in ಮೂಲಕ ಅರ್ಜಿ ಸಲ್ಲಿಸಿ ನಂತರ ಸ್ವೀಕೃತಿ ಪತ್ರದ ಪ್ರತಿಯೊಂದಿಗೆ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ಪಂಚಾಯತ್ ಕಚೇರಿ ಆಡಳಿತ ವಿಭಾಗದ ಕೊಠಡಿ ಸಂ.25 ಗೆ ಜುಲೈ 20 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಖ್ಯೆ 08192-226655 ಗೆ ಕರೆ ಮಾಡಬಹುದು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ತಿಳಿಸಿದ್ದಾರೆ.
ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ
ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿಯ ಬಾಡ ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಓದಲು ಹಾಗೂ ಬರೆಯಲು ಚೆನ್ನಾಗಿ ಬಲ್ಲವರಾಗಿರಬೇಕು ,ಅರ್ಜಿದಾರರು ಖಾಲಿ ಇರುವ ಗ್ರಾಮಸಹಾಯಕ ಹುದ್ದೆಯ ವೃತ್ತದ ನಿವಾಸಿಯಾಗಿರಬೇಕು ಮತ್ತು ಕೇಂದ್ರ ಸ್ಥಾನದಲ್ಲಿಯೇ ವಾಸವಾಗಿರಬೇಕು.
ಗ್ರಾಮಸಹಾಯಕ ತಳವಾರರು, ತೋಟೆಗಳು, ನೀರುಗಂಟೆಗಳು ವಾಲಿಕರ್ಸ್, ಮಹರಸ್, ಬಾರಿಕರಸ್, ವೀರಾಡಿಗಳು, ಬಲೂತಿದಾರಸ್ ತಳಿಯಾರಿಸ್ ವೆಟಿಸ್, ಕುಲುವಡಿಸ್, ಉರ್ಗಾನಿಸ್ ಕುಟುಂಬದವರಿಗೆ ಆದ್ಯತೆ ನೀಡಲಾಗುವುದು, ಅರ್ಜಿದಾರರು 25 ವರ್ಷ ವಯೋಮಾನದವರಾಗಿರಬೇಕು. ಅರ್ಜಿ ಸಲ್ಲಿಸಲು ಜುಲೈ 5 ಕೊನೆಯ ದಿನವಾಗಿರುತ್ತದೆ.
ಅರ್ಜಿಯೊಂದಿಗೆ ಜನ್ಮ ದಿನಾಂಕ (ವರ್ಗಾವಣೆ ಪತ್ರ, ಎಸ್.ಎಸ್.ಎಲ್ ಸಿ ಅಂಕಪಟ್ಟಿ ಲಗತ್ತಿಸುವುದು ), ವಾಸಸ್ಥಳ ದೃಢೀಕರಣ, (ಸಂಬಂಧಿಸಿದ ಉಪತಹಸೀಲ್ದಾರರಿಂದ ) ಪಡೆದ ಪತ್ರ ಲಗತ್ತಿಸುವುದು, ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ, ಪಡಿತರ ಚೀಟಿ, ವ್ಯಾಸಾಂಗ ಪೂರೈಸಿದ ಬಗ್ಗೆ ದಾಖಲೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಚೇರಿ ಸಲ್ಲಿಸಬೇಕೆಂದು ತಹಶೀಲ್ದಾರ್ ಡಾ.ಅಶ್ವಥ್ ತಿಳಿಸಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications