ದಾವಣಗೆರೆ; ವಿವಿಧ ಹುದ್ದೆಗೆ ಅರ್ಜಿ ಕರೆದ ಜಿಲ್ಲಾ ಪಂಚಾಯಿತಿ
ದಾವಣಗೆರೆ, ಆಗಸ್ಟ್ 16: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜಿಲ್ಲಾ ಪಂಚಾಯಿತಿ ಅರ್ಜಿಗಳನ್ನು ಕರೆದಿದೆ. ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಜಿ ಸಲ್ಲಿಕೆ ಮಾಡಲು ಆಗಸ್ಟ್ 24 ಕೊನೆಯ ದಿನವಾಗಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನಕ್ಕೆ ಅಗತ್ಯವಿರುವ ಸಿಬ್ಬಂದಿಗಳನ್ನು ಹೊರಗುತ್ತಿಗೆ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಖಾಲಿ ಇರುವ ಹುದ್ದೆಗಳ ವಿವರಗಳು ಹಾಗೂ ಸದರಿ ಹುದ್ದೆಗಳಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ, ವಯೋಮಿತಿ ಮತ್ತು ಮಾಸಿಕ ಸಂಭಾವನೆ ವಿವರ ಇಲ್ಲಿದೆ.

ಯಾವ-ಯಾವ ಹುದ್ದೆಗಳು; ತಾಂತ್ರಿಕ ಸಹಾಯಕ (ಸಿವಿಲ್) 4, ತಾಂತ್ರಿಕ ಸಹಾಯಕ (ಕೃಷಿ) 1, ತಾಂತ್ರಿಕ ಸಹಾಯಕ (ತೋಟಗಾರಿಕೆ) 6, ತಾಂತ್ರಿಕ ಸಹಾಯಕ (ಅರಣ್ಯ) 2, ತಾಂತ್ರಿಕ ಸಹಾಯಕ (ರೇಷ್ಮೆ) 1, ಆಡಳಿತ ಸಹಾಯಕರು 6 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಎಲ್ಲಾ ಹುದ್ದೆಗಳಿಗೆ ವಯೋಮಿತಿ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷಗಳು (1/8/2023ಕ್ಕೆ ಅನ್ವಯವಾಗುವಂತೆ). ತಾಂತ್ರಿಕ ಸಹಾಯಕ (ಸಿವಿಲ್), ತಾಂತ್ರಿಕ ಸಹಾಯಕ (ಕೃಷಿ), ತಾಂತ್ರಿಕ ಸಹಾಯಕ (ತೋಟಗಾರಿಕೆ), ತಾಂತ್ರಿಕ ಸಹಾಯಕ (ಅರಣ್ಯ), ತಾಂತ್ರಿಕ ಸಹಾಯಕ (ರೇಷ್ಮೆ) ಹುದ್ದೆಗಳಿವೆ ವೇತನ 28,000 + ಪ್ರಯಾಣ ಭತ್ಯೆ ಗರಿಷ್ಠ ರೂ. 2000 ತನಕ. ಆಡಳಿತ ಸಹಾಯಕರು ಹುದ್ದೆಗಳಿಗೆ 22,000 ರೂ. ವೇತನ ನಿಗದಿ ಮಾಡಲಾಗಿದೆ.
ಅರ್ಜಿಗಳನ್ನು ಸಲ್ಲಿಕೆ ಮಾಡಲು 24/8/2023 ಕೊನೆಯ ದಿನವಾಗಿದೆ. ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಕೆ ಮಾಡಲು ವಿಳಾಸ davanagere.nic.in. ಈ ವೆಬ್ಸೈಟ್ನಲ್ಲಿ ನೇಮಕಾತಿ ಅಧಿಸೂಚನೆ ಹಾಗೂ ನಂತರದಲ್ಲಿ ಮೆರಿಟ್ ಪಟ್ಟಿ, ಶಾರ್ಟ್ ಲಿಸ್ಟ್, ಆಯ್ಕೆ, ಪಟ್ಟೆಯ ವಿವರಗಳನ್ನು ವೀಕ್ಷಿಸಬಹುದಾಗಿದೆ.
ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿದ ನಂತರ ಪಡೆದ ಸ್ವೀಕೃತಿ ಪತ್ರದ ಪ್ರತಿಯೊಂದಿಗೆ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ಪಂಚಾಯತ್ ಕಚೇರಿಯ ನರೇಗಾ ವಿಭಾಗ, ಕೊಠಡಿ ಸಂ. 111 ಗೆ ದಿನಾಂಕ: 24/8/2023ರೊಳಗೆ ಸಲ್ಲಿಸಿ, ಸ್ವೀಕೃತಿ ಪಡೆಯಬೇಕು.
ಆಯ್ಕೆ ವಿಧಾನ; ಸ್ವೀಕರಿಸಿದ ಅರ್ಜಿಗಳ ವಿವರಗಳನ್ನು ಪರಿಶೀಲಿಸಿ ಮೆರಿಟ್ ಆಧಾರದಲ್ಲಿ ಅಭ್ಯರ್ಥಿಗಳನ್ನು ಹೆಚ್ಚು ಅಂಕದಿಂದ ಕಡಿಮೆ ಅಂಕದ ಆಧಾರದಲ್ಲಿ (Highest to lower order of Merit) ಒಟ್ಟು 100 ಅಂಕಗಳಿಗೆ ಕೆಳಗಿನಂತೆ ಮೆರಿಟ್ ಪಟ್ಟಿಯನ್ನು ತಯಾರಿಸಿಕೊಳ್ಳಲಾಗುವುದು.
ತಯಾರಿಸಿದ ಮೆರಿಟ್ ಪಟ್ಟಿಯನ್ನು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ/ davanagere.nic.in ವೆಬ್ಸೈಟ್ನಲ್ಲಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಒಂದು ವಾರದ ಕಾಲವಕಾಶ ನೀಡಲಾಗುವುದು. ಆಕ್ಷೇಪಣೆ ಪ್ರಕ್ರಿಯೆ ನಂತರ, ಮೆರಿಟ್ ಪಟ್ಟಿಯನ್ನು ಅವಶ್ಯವಿರುವ ಹುದ್ದೆಗನುಗುಣವಾಗಿ ಅನುಪಾತ 1:3 ರಂತೆ Short list ಅನ್ನು ತಯಾರಿಸಲಾಗುವುದು.
ಶಾರ್ಟ್ ಲಿಸ್ಟ್ನಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಗೆ ಅಭ್ಯರ್ಥಿಗಳನ್ನು ಜಿಲ್ಲಾ ಪಂಚಾಯತ್ಗೆ ಆಹ್ವಾನಿಸಿ ಮೂಲ ದಾಖಲೆಗಳ ಪರಿಶೀಲನೆ ನಡೆಸಲಾಗುವುದು. ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನಾ ದಿನಾಂಕವನ್ನು ಇ-ಮೇಲ್/ ದೂರವಾಣಿ ಮೂಲಕ ತಿಳಿಸಲಾಗುವುದು.
ಒಂದು ವೇಳೆ ಮೆರಿಟ್ ಶಾರ್ಟ್ ಲಿಸ್ಟ್ನಲ್ಲಿರುವ ಅಭ್ಯರ್ಥಿಗಳು ದಾಖಲಾತಿ ಪರಿಶೀಲನೆಗೆ ಅಥವಾ ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ, ಮೆರಿಟ್ ಪಟ್ಟಿಯಲ್ಲಿರುವ (Waiting list) ಮುಂದಿನ ಅಭ್ಯರ್ಥಿಗಳನ್ನು ಹುದ್ದೆಯ ನೇಮಕಾತಿಗೆ ಪರಿಗಣಿಸಲಾಗುವುದು.
ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ, ಕನ್ನಡ ಮತ್ತು ಇಂಗ್ಲೀಷ್ ಭಾಷೆ ತಿಳಿದಿರಬೇಕು. ತಾಂತ್ರಿಕ ಸಹಾಯಕ ಹುದ್ದೆಯ ನೇಮಕಾತಿಗೆ ಯಾವುದೇ ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆ ಇರುವುದಿಲ್ಲ.
ಆಡಳಿತ ಸಹಾಯಕ ಹುದ್ದೆಗೆ ಮೆರಿಟ್ ಶಾರ್ಟ್ ಲಿಸ್ಟ್ನಲ್ಲಿರುವ ಅಭ್ಯರ್ಥಿಗಳನ್ನು ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.
ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾದ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಸಂಸ್ಥೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು, ನೇಮಕಾತಿಯ ಅವಧಿಯು 11 ತಿಂಗಳಾಗಿದ್ದು, ಅಭ್ಯರ್ಥಿಗಳ ಕಾರ್ಯಕ್ಷಮತೆ ಪರಿಶೀಲಿಸಿ ಮುಂದುವರೆಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಅಂತಿಮ ಆಯ್ಕೆ ಪಟ್ಟಿ ಅನುಮೋದಿಸುವುದು ಅಥವಾ ರದ್ದುಪಡಿಸುವುದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ದಾವಣಗರ ಇವರ ತೀರ್ಮಾನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಕಚೇರಿಯ ನರೇಗಾ ವಿಭಾಗ ಅಥವಾ ಜಿಲ್ಲಾ ಪಂಚಾಯತ್ ಕಚೇರಿಯ ಉಚಿತ ಸಹಾಯವಾಣಿ ಸಂಖ್ಯೆ 1800 425 2203ಗೆ ಕರೆ ಮಾಡುವುದು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications