2 ಸಾವಿರ ವೈದ್ಯರು, 700ಕ್ಕೂ ಹೆಚ್ಚು ನರ್ಸಿಂಗ್ ಸಿಬ್ಬಂದಿಗಳ ನೇರ ನೇಮಕಾತಿ: ಸಚಿವ ಸುಧಾಕರ್
ವಿಜಯನಗರ, ಮಾರ್ಚ್ 31: ಮುಂದಿನ ಒಂದು ತಿಂಗಳೊಳಗೆ 2 ಸಾವಿರಕ್ಕೂ ಹೆಚ್ಚು ವೈದ್ಯರನ್ನು, 700ಕ್ಕೂ ಹೆಚ್ಚು ಪ್ಯಾರಾಮೆಡಿಕಲ್, ನರ್ಸಿಂಗ್ ಸಿಬ್ಬಂದಿಗಳನ್ನು ನೇರ ನೇಮಕಾತಿ ಮಾಡಿಕೊಳ್ಳುವುದಕ್ಕೆ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ವರ್ಚುವಲ್ ತಂತ್ರಜ್ಞಾನದ ಮೂಲಕ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಸಾರ್ವಜನಿಕರ ಬಳಕೆಗೆ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂಆರ್ಐ), ಗ್ರಂಥಾಲಯ, ಉಪನ್ಯಾಸಕರ ಸಭಾಂಗಣ ಮತ್ತು ಪರೀಕ್ಷಾ ಸಭಾಂಗಣ, 300 ವಿದ್ಯಾರ್ಥಿಗಳ ಆಸನ ಸಾಮರ್ಥ್ಯದ ಉಪನ್ಯಾಸ ರಂಗಮಂದಿರ, ಸ್ನಾತಕೋತ್ತರ ವಿದ್ಯಾರ್ಥಿಗಳ ವಸತಿ ನಿಲಯ ಮತ್ತು ದಂತ ವೈದ್ಯಕೀಯ ಮಹಿಳಾ ವಿದ್ಯಾರ್ಥಿಗಳ ಹಾಸ್ಟೆಲ್ಗಳ ಶಂಕುಸ್ಥಾಪನೆ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವ ವೈದ್ಯರಿಗೆ ಉತ್ತೇಜನ ನೀಡಲು ಬಡ್ತಿ ಮತ್ತು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದ್ದು, ನಿರ್ದಿಷ್ಟ ಕಾನೂನುಗಳನ್ನು ಬದಲಾವಣೆ ಮಾಡುತ್ತಿದ್ದೇವೆ ಎಂದು ಸಚಿವ ಡಾ.ಸುಧಾಕರ್ ವಿವರಿಸಿದರು.

ಖಾಸಗಿ ಹಾಗೂ ಸರಕಾರಿ ಸಹಭಾಗಿತ್ವದಲ್ಲಿ ಆರೋಗ್ಯ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ಸಿಎಸ್ಆರ್ ಸಮಿತಿ ರಚಿಸಲಾಗಿದ್ದು, ಗೀತಾಂಜಲಿ ಕಿರ್ಲೋಸ್ಕರ್ ಅವರನ್ನು ಗೌರವಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದರು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಈ ಹಿಂದೆ ಕಾರಾಗೃಹ ಕಟ್ಟಡವಾಗಿದ್ದ 173 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ವಿಮ್ಸ್ ತಲೆ ಎತ್ತಿದೆ. ಗತವೈಭವವನ್ನು ಆರೋಗ್ಯ ಕ್ಷೇತ್ರದಲ್ಲಿ ಮರುಕಳಿಸುವ ನಿಟ್ಟಿನಲ್ಲಿ ವಿಮ್ಸ್ ಸಂಸ್ಥೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿಮ್ಸ್ ಕೇವಲ ನಮ್ಮ ರಾಜ್ಯದ ಜನರಿಗೆ ಚಿಕಿತ್ಸೆ ನೀಡುವುದಕ್ಕೆ ಸೀಮಿತವಾಗಿಲ್ಲ, ಆಂಧ್ರಪ್ರದೇಶ ಮತ್ತು ತೆಲಂಗಾಣ ಜನರಿಗೆ ಚಿಕಿತ್ಸೆ ಪಡೆದುಕೊಳ್ಳುವ ಸಂಜೀವಿನಿಯಾಗಿದೆ ಎಂದು ಮಾಹಿತಿ ನೀಡಿದರು.

ವಿಮ್ಸ್ ಸಂಸ್ಥೆಯನ್ನು ಏಮ್ಸ್ ಮಾದರಿಯನ್ನಾಗಿ ಪರಿವರ್ತಿಸಲು ಹಾಗೂ ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಾತಿಯನ್ನು 150ರಿಂದ 250ಕ್ಕೆ ಹೆಚ್ಚಿಸಿ ಉನ್ನತೀಕರಣಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪ್ರಸ್ತಾವನೆಗೆ ಸರಕಾರ ಸ್ಪಂದಿಸಿ ವಿಮ್ಸ್ ಸಂಸ್ಥೆಗೆ ಅವಶ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಲು ಕಟ್ಟಡ ಕಾಮಗಾರಿಗಳು ಮತ್ತು ಉಪಕರಣಗಳನ್ನು ಅಳವಡಿಸಿಲು ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications