ಪಿಎಚ್ಡಿ, ಎಲ್ಎಲ್ಬಿ, ಎಂಟೆಕ್ ಮಾಡಿದವರಿಂದ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ: ಅಪಾಯದ ಹಂತಕ್ಕೆ ತಲುಪಿದ ನಿರುದ್ಯೋಗ?
ಹೈದರಾಬಾದ್, ಜನವರಿ 21: ಭಾರತದಲ್ಲಿನ ನಿರುದ್ಯೋಗ ಸಮಸ್ಯೆ ಅಪಾಯದ ಹಂತಕ್ಕೆ ತಲುಪಿರುವ ಸೂಚನೆಗಳು ಕಂಡುಬರುತ್ತಿವೆ. ಒಂದು ಕಡೆ ಬಹುರಾಷ್ಟ್ರೀಯ ಕಂಪನಿಗಳು ಸಾವಿರಾರು ಲೆಕ್ಕದಲ್ಲಿ ಉದ್ಯೋಗಗಳನ್ನು ಕಡಿತಗೊಳಿಸುತ್ತಿವೆ. ಇನ್ನೊಂದು ಕಡೆ ಓದಿದವರಿಗೆ ಕೆಲಸಗಳು ಸಿಗುತ್ತಿಲ್ಲ. ಕೋವಿಡ್ ನಂತರದ ಭೀಕರ ಪರಿಣಾಮಗಳನ್ನು ಜಗತ್ತಿನ ಬಹುತೇಕ ರಾಷ್ಟ್ರಗಳು ಎದುರಿಸುತ್ತಿವೆ. ಅದಕ್ಕೆ ಭಾರತವೂ ಹೊರತಲ್ಲ. ಏರುತ್ತಿರುವ ಬೆಲೆಗಳು, ಉದ್ಯೋಗಗಳ ಕಡಿತ, ಆರ್ಥಿಕ ತೊಂದರೆಗಳು ಭಾರತವನ್ನು ನರಳಿಸುತ್ತಿವೆ. ಇದು ಮುಂದೆ ಯಾವ ಹಂತಕ್ಕೆ ಬಂದು ನಿಲ್ಲಲಿದೆ ಎಂಬುದನ್ನು ಕಾಲವೇ ಉತ್ತರಿಸಬೇಕಿದೆ.
ಇದಕ್ಕೆ ಪೂರಕವೆಂಬಂತೆ ಆಂಧ್ರ ಪ್ರದೇಶದಲ್ಲಿ ಘಟನೆಯೊಂದು ನಡೆದಿದೆ. ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದವರಲ್ಲಿ 10 ಪಿಎಚ್ಡಿ ಮತ್ತು 930 ಎಂಟೆಕ್ ಪದವೀಧರರಿದ್ದು, ಭಾನುವಾರ ಲಿಖಿತ ಪರೀಕ್ಷೆಗೆ ಹಾಜರಾಗಲಿದ್ದಾರೆ.
ರಾಜ್ಯ ಮಟ್ಟದ ಪೊಲೀಸ್ ನೇಮಕಾತಿ ಮಂಡಳಿಯ ಅಧಿಕೃತ ಟಿಪ್ಪಣಿಯ ಪ್ರಕಾರ, ಕಾನ್ಸ್ಟೇಬಲ್ ಹುದ್ದೆಗೆ ಅರ್ಹತೆಯ ತೊಂದರೆ ಎದುರಾಗಿದೆ. ಅಭ್ಯರ್ಥಿಗಳ ಪಟ್ಟಿಯಲ್ಲಿ 5,284 MBA, 4,365-M Sc ಮತ್ತು 94 LLB ಪದವಿ ಹೊಂದಿರುವವರು ಇದ್ದಾರೆ.

6,400 ಕಾನ್ಸ್ಟೆಬಲ್ ಹುದ್ದೆಗಳಿಗೆ ಪರೀಕ್ಷೆ ಬರೆಯುತ್ತಿರುವ 5,03,486 ಅಭ್ಯರ್ಥಿಗಳಲ್ಲಿ ಒಟ್ಟಾರೆ 13,961 ಸ್ನಾತಕೋತ್ತರ ಪದವೀಧರರು ಮತ್ತು 1, 55,537 ಪದವೀಧರರು ಸೇರಿದ್ದಾರೆ.
APSLPRB 3,580 (ಪುರುಷರು ಮತ್ತು ಮಹಿಳೆಯರು) ಸ್ಟೈಪೆಂಡರಿ ಕೆಡೆಟ್ ಟ್ರೈನಿ (SCT) ಪೊಲೀಸ್ ಕಾನ್ಸ್ಟೇಬಲ್ಗಳು (ಸಿವಿಲ್) ಮತ್ತು 2,520 (ಪುರುಷರು) SCT ಪೊಲೀಸ್ ಕಾನ್ಸ್ಟೇಬಲ್ಗಳನ್ನು (AP ವಿಶೇಷ ಪೊಲೀಸ್) ನೇಮಕ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ.

ಒಟ್ಟು 5,03,486 ಅರ್ಜಿದಾರರ ಪೈಕಿ 3,95,415 ಪುರುಷರು ಮತ್ತು 1,08,071 ಮಹಿಳೆಯರು. 3.64 ಲಕ್ಷಕ್ಕೂ ಹೆಚ್ಚು ಅರ್ಜಿದಾರರು ತೆಲುಗು ಭಾಷೆಯನ್ನು ಲಿಖಿತ ಪರೀಕ್ಷಾ ಮಾಧ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. 1.39 ಲಕ್ಷಕ್ಕೂ ಹೆಚ್ಚು ಜನರು ಇಂಗ್ಲಿಷ್ ಮತ್ತು 227 ಮಂದಿ ಉರ್ದು ಮಾಧ್ಯಮವನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತದಲ್ಲಿ ನಿರುದ್ಯೋಗ ದರವು 2022 ರ ನವೆಂಬರ್ನಲ್ಲಿ 8 ಪ್ರತಿಶತದಿಂದ ಡಿಸೆಂಬರ್ನಲ್ಲಿ 8.30 ಪ್ರತಿಶತಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರ್ಥಿಕತೆಯನ್ನು ಮೇಲ್ವಿಚಾರಣೆ ಮಾಡುವ ಕೇಂದ್ರ ಹೇಳಿದೆ.

ಭಾರತದಲ್ಲಿ, ಆಯ್ಕೆಮಾಡಿದ ಕುಟುಂಬಗಳನ್ನು ನೇರವಾಗಿ ಸಂದರ್ಶನ ಮಾಡುವ ಮೂಲಕ ನಿರುದ್ಯೋಗ ದರವನ್ನು ಅಂದಾಜಿಸಲಾಗಿದೆ. ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿಯು 15 ವರ್ಷಕ್ಕಿಂತ ಮೇಲ್ಪಟ್ಟ 522,000 ಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡ 174,405 ಕ್ಕೂ ಹೆಚ್ಚು ಕುಟುಂಬಗಳನ್ನು ಸಂದರ್ಶನ ಮಾಡಿದೆ.
-
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications