DRDO CABS Recruitment 2026: ಕರ್ನಾಟಕದಲ್ಲಿ ಭರ್ಜರಿ ಉದ್ಯೋಗಾವಕಾಶ, ಮಾಸಿಕ ಉತ್ತಮ- ವಿವರ
ಬೆಂಗಳೂರು: ಇಂಜಿನಿಯರಿಂಗ್ ಪದವೀಧರರು ಕರ್ನಾಟಕದಲ್ಲಿ ಒಂದು ಪ್ರತಿಷ್ಠಿತ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಲು ಇಚ್ಛಿಸಿದ್ದರೆ ನಿಮಗೆ ಇಲ್ಲಿದೆ ಸುವರ್ಣ ಅವಕಾಶ. ಭಾರತೀಯ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ (DRDO) ಭಾಗವಾಗಿರುವ ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್ (CABS) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ವಿವಿಧ ಹುದ್ದೆಗಳು ಖಾಲಿ ಇದ್ದು, ಯಾರೆಲ್ಲ ಸ್ಥಳೀಯವಾಗಿ ಉದ್ಯೋಗ ಪಡೆಯಬೇಕೆನ್ನು ಹಂಬಲ ಇದೆಯೋ ಅಂಥವರು ಈ ಕೂಡಲೇ ಅಗತ್ಯ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಬಹುದು. ಒಟ್ಟು 10 ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳು ಖಾಲಿ ಇವೆ. ಈ ನೇಮಕಾತಿ ವಯೋಮಿತಿ, ವಿದ್ಯಾರ್ಹತೆ, ಮಾಸಿಕ ವೇತನ, ಅರ್ಜಿ ಸಲ್ಲಿಕೆ ಕೊನೆ ದಿನ, ನೇರ ಸಂದರ್ಶನ ಮಾಹಿತಿ ಇಲ್ಲಿದೆ.

ನೇಮಕಾತಿ ಪೂರ್ಣ ವಿವರ
ನೇಮಕಾತಿ ಸಂಸ್ಥೆ: DRDO ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್ (CABS)
ಹುದ್ದೆ ಹೆಸರು: ಜ್ಯೂನಿಯ್ ರಿಸರ್ಚ್ ಫೆಲೋ ಹುದ್ದೆಗಳು
ಖಾಲಿ ಹುದ್ದೆಗಳು: 10
ಪೋಸ್ಟಿಂಗ್: ಕರ್ನಾಟಕ
ಅರ್ಜಿ ಸಲ್ಲಿಕೆ ಆರಂಭ: 2026 ಜನವರಿ 22
ವಾಕ್ ಇನ್ ಇಂಟರ್ವ್ಯೂವ್: 2026 ಜನವರಿ 25 ಮತ್ತು 26
ಶೈಕ್ಷಣಿಕ ಅರ್ಹತೆ
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ಬಿಇ, ಬಿಟೆಕ್ ಅಥವಾ ಎಂಇ, ಎಂಟೆಕ್ ಪೂರ್ಣಗೊಳಿಸಿರಬೇಕು. ಅಂಥವರು ಅರ್ಜಿ ಸಲ್ಲಿಸಲು ಅರ್ಹರು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯಸ್ಸಿನ ಮಿತಿ
ಅರ್ಜಿ ಸಲ್ಲಿಸುವವರಿಗೆ 2025 ಡಿಸೆಂಬರ್ 31ಕ್ಕೆ ಸರಿಯಾಗಿ ಗರಿಷ್ಠ 28 ವರ್ಷ ಮೀರಿರಬಾರದು. ಜಾತಿ ಮೀಸಲಾತಿಗೆ ಅನುಗುಣವಾಗಿ ಪರಿಶಿಷ್ಟ ಜಾರಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ವಿಧಾನ, ಮಾಸಿಕ ವೇತನ
ಅಧಿಸೂಚನೆಯಲ್ಲಿ ತಿಳಿಸಿರುವಂತೆ ವಾಕ್ ಇನ್ ಇಂಟರ್ವ್ಯೂವ್ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಆದವರಿಗೆ ಮಾಸಿಕ 37,000 ಮಾಸಿಕ ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ
ಅಭ್ಯರ್ಥಿಗಳು ಸೂಕ್ತ ದಾಖಲೆ ಸಹಿತ ಅರ್ಜಿಯನ್ನು ಡಿಆರ್ಡಿಓ ಅಧಿಕೃತ ವೆಬ್ಸೈಟ್ drdo.gov.in ಗೆ ಭೇಟಿ ನೀಡಿ. ಕೇಳಲಾದ ಮಾಹಿತಿ ನಮೂದಿಸಿ, ದಾಖಲೆ ಸ್ಕ್ಯಾನ್ ಮಾಡಿ ಅಪ್ಲೊಡ್ ಮಾಡಬೇಕು. ಅರ್ಜಿ ಸಮೂನೆ ಭರ್ತಿ ಮಾಡಬೇಕು. ಇಮೇಲ್ ಅನ್ನು [email protected] ಗೆ ಕೊನೆ ದಿನದೊಳಗೆ ಕಳಹಿಸಬೇಕು. ಹೆಚ್ಚಿನ ಮಾಹಿತಿಗೆ ಈ ಜಾಲತಾಣದಲ್ಲಿ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ












Click it and Unblock the Notifications