Emmvee Energy: ಬೆಂಗಳೂರಲ್ಲಿ ಹೊಸ ಉತ್ಪಾದನಾ ಘಟಕ: ₹15,000 ಕೋಟಿ ಹೂಡಿಕೆ, 10,000 ಉದ್ಯೋಗ
ಬೆಂಗಳೂರು, ಫೆಬ್ರವರಿ 21: ಬೆಂಗಳೂರಲ್ಲಿ ಇದೇ ತಿಂಗಳು ನಡೆ ಇನ್ವೆಸ್ಟ್ ಕರ್ನಾಟಕ 2025 ದಲ್ಲಿ ಸಾಕಷ್ಟು ಒಡಂಬಡಿಕೆ, ಹೂಡಿಕೆ ಮಾತುಕತೆ ನಡೆದಿವೆ. ಸಹಿ ಹಾಕಿದ ಬೆನ್ನಲ್ಲೆ ಒಂದೊಂದೆ ಯೋಜನೆಗಳು, ಒಪ್ಪಂದಗಳು ಜಾರಿಗೆ ಬರುತ್ತಿವೆ. ಇದೀಗ ಉನ್ನತ ಗುಣಮಟ್ಟದ ಸೋಲಾರ್ ಫೋಟೋವೋಲ್ಟಾಯಿಕ್ ಕೋಶಗಳು ಮತ್ತು ಮಾಡ್ಯೂಲ್ ಉತ್ಪಾದನೆಗೆ ಹೆಸರಾಗಿರುವ, ಬೆಂಗಳೂರು ಮೂಲದ ಎಮ್ವಿ ಎನರ್ಜಿ ಕಂಪನಿಯು ಉತ್ಪಾದನಾ ಘಟಕ ಆರಂಭಿಸಲು ಮುಂದಾಗಿದೆ.
ಎಮ್ವಿ ಎನರ್ಜಿ ಕಂಪನಿಯು ತನ್ನ ಉತ್ಪಾದನಾ ಘಟಕ ಆರಂಭಿಸಲು ಹಂತಹಂತವಾಗಿ 15,000 ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ. ಇದರಿಂದ ಈ ಬಾಗದಲ್ಲಿ 10 ಸಾವಿರ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರು ಗುರುವಾರ ಹೇಳಿದರು.

ವಿಧಾನಸೌಧದ ಕಚೇರಿಯಲ್ಲಿ ಎಮ್ವಿ ಎನರ್ಜಿ ಕಂಪನಿಯ ಉನ್ನತ ಮಟ್ಟದ ಪ್ರತಿನಿಧಿಗಳ ಜತೆ ಸಭೆ ನಡೆಸಿ ಬಳಿಕ ಮಾತನಾಡಿದರು. ಕಂಪನಿಯೊಂದಿಗೆ ಹೂಡಿಕೆ ಸಂಬಂಧ ಇತ್ತೀಚಿಗೆ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿದ್ದು, ಕಾರ್ಯರೂಪಕ್ಕೆ ಬರುತ್ತಿರುವುದು ಸಂತಸದ ಸಂಗತಿ ಎಂದರು.
ಕಂಪನಿಯು ಮೊದಲ ಹಂತದಲ್ಲಿ 5,000 ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ. 5 ಗಿಗಾವ್ಯಾಟ್ ಸಾಮರ್ಥ್ಯದ ಉತ್ಪಾದನೆ ಮಾಡಲಿದೆ. ಒಟ್ಟು ಯೋಜನೆಯಿಂದ 10 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಎಮ್ವಿ ಎನರ್ಜಿ ಕಂಪನಿಯು ಬೆಂಗಳೂರಿನ ಐಟಿಐಆರ್ ವಲಯದಲ್ಲಿ 120 ಎಕರೆ ಜಮೀನನ್ನು ಕೇಳಿದೆ. ಇದನ್ನು ಸಕಾರಾತ್ಮಕವಾಗಿ ಪರಿಶೀಲಿಸಿ, ಒದಗಿಸಲಾಗುವುದು ಎಂದು ಸಚಿವರು ನಿಯೋಗಕ್ಕೆ ಭರವಸೆ ನೀಡಿದರು.
ಕಂಪನಿಯು ಸೌರವಿದ್ಯುತ್ ಕ್ಷೇತ್ರದಲ್ಲಿ ಬೇಕಾಗುವ ಅಲ್ಯೂಮಿನಿಯಂ ಫ್ರೇಮ್, ಗಾಜು, ಇಪಿಇ, ಜೆಬಿ, ರಿಬ್ಬನ್ ಮತ್ತು ವೇಫರ್ ಉತ್ಪಾದನೆಗೂ ಹೆಸರಾಗಿದೆ. ಇದರಿಂದ ಪರಿಸರಸ್ನೇಹಿ ಇಂಧನ ಮತ್ತು ಸುಸ್ಥಿರ ಅಭಿವೃದ್ಧಿ ಎರಡನ್ನೂ ಸಾಧಿಸಬಹುದು ಎಂದು ಪಾಟೀಲ ಮಾಹಿತಿ ನೀಡಿದ್ದಾರೆ.
₹315 ಕೋಟಿ ರೂಪಾಯಿಗಳ ಹೂಡಿಕೆ
ಇನ್ನೂ ಕೋಲಾರ ಜಿಲ್ಲೆ ವೇಮಗಲ್ನಲ್ಲಿ ಜರ್ಮನಿ ಮೂಲದ ಕ್ರೋನ್ಸ್ ಕಂಪನಿಯ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ನಿರ್ಮಾಣಕ್ಕೆ ಮುಂದಾಗಿದೆ. ₹315 ಕೋಟಿ ರೂಪಾಯಿಗಳ ಹೂಡಿಕೆ ಇದಾಗಿದೆ. ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಕಂಪನಿ ನಿರ್ಮಿಸಲಿರುವ ಉದ್ದೇಶಿಸಿರುವ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅಡಿಗಲ್ಲು ಪೂಜೆ ನೆರವೇರಿಸಿದ್ದಾರೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications