ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನೇಮಕಾತಿ; ಸರ್ಕಾರದ ಮಾಹಿತಿ
ಬೆಂಗಳೂರು, ಜುಲೈ 11; ಕರ್ನಾಟಕದಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿನ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರ ವಿಧಾನಸಭೆ ಕಲಾಪದಲ್ಲಿ ಉತ್ತರ ನೀಡಿದೆ. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ರಾಜ್ಯದಲ್ಲಿ ಒಟ್ಟು ಮಂಜೂರಾಗಿರುವ ಹುದ್ದೆಗಳು 2194. ಇವುಗಳಲ್ಲಿ ಸದ್ಯ 604 ಹುದ್ದೆ ಖಾಲಿ ಇದೆ.
ಕರ್ನಾಟಕದ ಬಜೆಟ್ ಅಧಿವೇಶನದಲ್ಲಿ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಕೇಳಿದ್ದ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಉತ್ತರ ನೀಡಿದ್ದಾರೆ.

ಶಾಸಕರು ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಪ್ರಸ್ತುತ ಖಾಲಿ ಇರುವ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್-2 ಹುದ್ದೆಗಳ ವಿವರ, ಒಟ್ಟು ಮಂಜೂರಾದ ಹುದ್ದೆಗಳ ವಿವರ ಕೇಳಿದ್ದರು.
ಎಷ್ಟು ಹುದ್ದೆಗಳು ಖಾಲಿ?; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಉತ್ತರದಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 2194 ಹುದ್ದೆಗಳು ಮಂಜೂರಾಗಿವೆ. ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್-2: 3827 ಹುದ್ದೆಗಳು ಮಂಜೂರಾಗಿವೆ ಎಂದು ಹೇಳಿದ್ದಾರೆ.
ಸಚಿವರು ಉತ್ತರದಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 1590 ಹುದ್ದೆಗಳು ಭರ್ತಿಯಾಗಿವೆ. 604 ಹುದ್ದೆಗಳು ಖಾಲಿ ಇವೆ. ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್-2 3108 ಹುದ್ದೆಗಳು ಭರ್ತಿಯಾಗಿವೆ. 345 ಹುದ್ದೆಗಳು ಖಾಲಿ ಇವೆ ಎಂದು ಸದನಕ್ಕೆ ಮಾಹಿತಿ ನೀಡಿದ್ದಾರೆ.
ಈ ಹುದ್ದೆಗಳಲ್ಲಿ ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 0, ಚಿಕ್ಕಬಳ್ಳಾಪುರ 16, ಚಿತ್ರದುರ್ಗ 32, ದಾವಣಗೆರೆ 3, ಕೋಲಾರ 15, ರಾಮನಗರ 6, ಶಿವಮೊಗ್ಗ 32, ತುಮಕೂರು 31, ಬಾಗಲಕೋಟೆ 20, ಬೆಳಗಾವಿ 76 ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ಕೊಟ್ಟಿದ್ದಾರೆ.
ಧಾರವಾಡ 19, ಗದಗ 14, ಹಾವೇರಿ 9, ಉತ್ತರ ಕನ್ನಡ 11, ವಿಜಯಪುರ 3, ಚಿಕ್ಕಮಗಳೂರು 27, ಉಡುಪಿ 4, ದಕ್ಷಿಣ ಕನ್ನಡ 28, ಕೊಡಗು 16, ಮಂಡ್ಯ 30, ಹಾಸನ 15, ಮೈಸೂರು 36, ಚಾಮರಾಜನಗರ 22, ರಾಯಚೂರು 44, ಬೀದರ್ 23, ಬಳ್ಳಾರಿ 11, ಯಾದಗಿರಿ 6, ಕಲಬುರಗಿ 25, ಕೊಪ್ಪಳ 9 ಮತ್ತು ವಿಜಯನಗರದಲ್ಲಿ 19 ಹುದ್ದೆಗಳು ಖಾಲಿ ಇವೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಒಟ್ಟು ಮಂಜೂರಾಗಿರುವ ಹುದ್ದೆಗಳು 6021. ಇವುಗಳಲ್ಲಿ 5321 ಹುದ್ದೆಗಳು ಭರ್ತಿಯಾಗಿವೆ. 660 ಹುದ್ದೆಗಳು ಖಾಲಿ ಇದೆ ಎಂದು ಸಹ ಸಚಿವರು ಮಾಹಿತಿ ನೀಡಿದ್ದಾರೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications