HAL Jobs: ₹87,000 ಸಂಬಳದ ಹುದ್ದೆಗೆ ಅರ್ಜಿ ಆಹ್ವಾನ-ಮಾಹಿತಿ, ವಿವರ
HAL Jobs: ಬೆಂಗಳೂರಿನಲ್ಲಿ ಹಲವು ಕಂಪನಿಗಳಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡುತ್ತಿದ್ದಾರೆ. ಇದರ ನಡುವೆಯೂ ಕೆಲವೊಂದು ಕಂಪನಿಗಳು ಉದ್ಯೋಗಾಂಕ್ಷಿಗಳಿಗೆ ಉದ್ಯೋಗವಕಾಶಗಳನ್ನು ಒದಗಿಸುತ್ತಿವೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಖಾಲಿಯಿರುವ 87,880 ರೂಪಾಯಿ ಮಾಸಿಕ ವೇತನದ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಅರ್ಜಿ ಸಲ್ಲಿಸುವುದೇಗೆ? ಎಷ್ಟು ಹುದ್ದೆಗಳು ಖಾಲಿಯಿವೆ & ಯಾವ್ಯಾವ ವಿಭಾಗಗಳಲ್ಲಿ ಎಂದು ಇಲ್ಲಿ ತಿಳಿಯಿರಿ.
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನಲ್ಲಿ ಒಟ್ಟು 2 ಮೆಡಿಕಲ್ ಆಫೀಸರ್ ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಅರ್ಜಿ ಸಲ್ಲಿಸಲು ಮೇ 13ರಂದು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಅಧಿಕೃತ ವೆಬ್ಸೈಟ್ hal-india.co.inಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಇನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್ ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಆಯ್ಕೆಯಾದವರಿಗೆ 87,880 ರೂಪಾಯಿ ಮಾಸಿಕ ವೇತನ ನೀಡಲಾಗುತ್ತದೆ. ಕೆಲಸದ ಸ್ಥಳ ಬೆಂಗಳೂರು ಆಗಿದೆ.
ಇನ್ನು ಅಭ್ಯರ್ಥಿಗಳಿಹೆ ಲಿಖಿತ ಪರೀಕ್ಷೆ, ಸಂದರ್ಶನ ಮಾಡಲಾಗುತ್ತದೆ. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮುಖ್ಯ ವ್ಯವಸ್ಥಾಪಕ (HR) ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಂಡಸ್ಟ್ರಿಯಲ್ ಹೆಲ್ತ್ ಸೆಂಟರ್, ಸುರಂಜನದಾಸ್ ರಸ್ತೆ, ವಿಮಾನಪುರ ಅಂಚೆ ಬೆಂಗಳೂರು-560017 ಇವರಿಗೆ ಕಳುಹಿಸಬೇಕಾಗುತ್ತದೆ.
ಅರ್ಜಿ ಸಲ್ಲಿಕೆಗೆ ಏಪ್ರಿಲ್ 24ರಂದು ಆರಂಭವಾಗಿದ್ದು, ಕೊನೆಯ ದಿನಾಂಕ ಮೇ 13 ಆಗಿದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22323005/22328082ಗೆ ಕರೆ ಮಾಡಬಹುದಾಗಿದೆ. ಅಥವಾ [email protected]ಗೆ ಮೇಲ್ ಮಾಡಬಹುದಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications