ಮೈಕ್ರೋಸಾಫ್ಟ್ ಪ್ರಾಜೆಕ್ಟ್ ಬಂದ್, 350 ಎಚ್ಸಿಎಲ್ ಟೆಕ್ಕಿಗಳಿಗೆ ಪಿಂಕ್ ಸ್ಲಿಪ್
ಬೆಂಗಳೂರು, ಸೆ. 15: ಜಾಗತಿಕವಾಗಿ ಐಟಿ -ಬಿಟಿ ಕಂಪನಿಗಳ ಆರ್ಥಿಕ ಪ್ರಗತಿ ಸುಸ್ಥಿತಿಯಲ್ಲಿಲ್ಲ ಹಾಗಂತ ಪೂರ್ಣಪ್ರಮಾಣದಲ್ಲಿ ಉದ್ಯೋಗ ಕಡಿತ, ಪಿಂಕ್ ಸ್ಲಿಪ್ ವಿತರಣೆ ಆರಂಭವಾಗಿಲ್ಲ. ಆದರೆ, ದೊಡ್ಡ ದೊಡ್ಡ ಕಂಪನಿಗಳಿಂದ ಪ್ರಾಜೆಕ್ಟ್ ಸ್ಥಗಿತ, ತಕ್ಷಣವೇ ಉದ್ಯೋಗಿಗಳನ್ನು ಮನೆಗೆ ಕಳಿಸುವ ಪ್ರಕ್ರಿಯೆ ಆರಂಭವಾಗಿದೆ. ತನ್ನ ಕ್ಲೈಂಟ್ ಮೈಕ್ರೋಸಾಫ್ಟ್ ಸೂಚನೆಯಂತೆ ಪ್ರಮುಖ ಐಟಿ ಕಂಪನಿ ಎಚ್ಸಿಎಲ್ ತನ್ನ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಿ ಮನೆಗೆ ಕಳಿಸಿದೆ.
ಜಾಗತಿಕವಾಗಿ 300ಕ್ಕೂ ಅಧಿಕ ಮಂದಿ ಟೆಕ್ಕಿಗಳ ಉದ್ಯೋಗ ಕಡಿತವಾಗಿರುವುದನ್ನು ಎಚ್ಸಿಎಲ್ ಟೆಕ್ನಾಲಜೀಸ್ ದೃಢಪಡಿಸಿದೆ. ಕ್ಲೈಂಟ್ ಮೈಕ್ರೋಸಾಫ್ಟ್ ಸಂಸ್ಥೆ ನ್ಯೂಸ್ ಪ್ರಾಜೆಕ್ಟ್ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ ಎಚ್ಸಿಎಲ್ ಉದ್ಯೊಗಿಗಳು ಕೆಲಸ ಕಳೆದುಕೊಂಡಿದ್ದಾರೆ. ಭಾರತ, ಗ್ವಾಟೆಮಾಲಾ ಹಾಗೂ ಫಿಲಿಪೈನ್ಸ್ ದೇಶಗಳಲ್ಲಿನ ಉದ್ಯೋಗಿಗಳ ಉದ್ಯೋಗ ಕಡಿತವಾಗಿದೆ.
ಕಳೆದ ವಾರ ನಡೆದ 'ಟೌನ್ ಹಾಲ್' ಸಭೆ ಬಳಿಕ ಎಂಎಸ್ಎನ್ ಪ್ರಾಜೆಕ್ಟ್ ಮೇಲೆ ಕಾರ್ಯ ನಿರ್ವಹಿಸುತ್ತಿದ್ದವರಿಗೆ ಕ್ಲೈಂಟ್ ಅಣತಿಯಂತೆ ಈ ನಿರ್ಧಾರ ಕೈಗೊಂಡಿರುವ ಬಗ್ಗೆ ತಿಳಿಸಲಾಗಿದೆ. ಉದ್ಯೋಗ ಕಳೆದುಕೊಂಡವರಿಗೆ ಭತ್ಯೆ ಸಹಿತ ವೇತನದ ಪೂರ್ಣ ಪರಿಹಾರ ಮೊತ್ತ ಕೈ ಸೇರಲಿದ್ದು, ಸೆಪ್ಟೆಂಬರ್ 30 ಉದ್ಯೋಗ ಅವಧಿಯ ಕೊನೆ ದಿನವಾಗಲಿದೆ ಎಂದು ಸಂಸ್ಥೆ ಹೇಳಿದೆ.

ಜಾಗತಿಕವಾಗಿ ಆರ್ಥಿಕ ಅಸಮತೋಲನದ ಹಿನ್ನೆಲೆಯಲ್ಲಿ ಜಾಗತಿಕವಾಗಿ ಪ್ರಮುಖ ಐಟಿ ಕಂಪನಿಗಳು ಉದ್ಯೋಗಿಗಳಿಗೆ ಕಾಲ ಕಾಲಕ್ಕೆ ನೀಡುವ ಬೋನಸ್, ಭತ್ಯೆ ತಡೆ ಹಿಡಿಯಲು ಮುಂದಾಗಿರುವುದು, ಸಂಬಳ ಕಡಿತ, ಉದ್ಯೋಗ ಕಡಿತಕ್ಕೆ ಮುಂದಾಗಿರುವ ಸುದ್ದಿ ಕಳೆದ ಒಂದು ತಿಂಗಳಿನಿಂದ ಕೇಳಿ ಬರುತ್ತಿದೆ.
PwC 'Pulse: Managing business risks in 2022' ಇತ್ತೀಚಿನ ಸಮೀಕ್ಷೆಯ ಪ್ರಕಾರ, ಯುಎಸ್ನಲ್ಲಿ, 50% ಮಂದಿ ತಮ್ಮ ಒಟ್ಟಾರೆ ಉದ್ಯೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತಿದ್ದಾರೆ, ಆದರೆ ಪ್ರಮುಖ ಉದ್ಯಮಿಗಳು ಪ್ರತಿಭೆಯನ್ನು ನೇಮಿಸಿಕೊಳ್ಳುವ ಮತ್ತು ಉಳಿಸಿಕೊಳ್ಳುವ ಬಗ್ಗೆ ಕಾಳಜಿ ವಹಿಸುತ್ತಿರುವುದಾಗಿ ತಿಳಿಸಿದ್ದಾರೆ.
ಮೈಕ್ರೋಸಾಫ್ಟ್ ಮತ್ತು ಮೆಟಾ (ಹಿಂದೆ ಫೇಸ್ಬುಕ್) ನಂತಹ ಬಿಗ್ ಟೆಕ್ ಕಂಪನಿಗಳು ಸೇರಿದಂತೆ ಯುಎಸ್ನಲ್ಲಿ ಜುಲೈವರೆಗೆ 32,000 ಕ್ಕೂ ಹೆಚ್ಚು ಟೆಕ್ ಕೆಲಸಗಾರರನ್ನು ವಜಾಗೊಳಿಸಲಾಗಿದೆ ಮತ್ತು ಬೃಹತ್ ಸ್ಟಾಕ್ ಮಾರಾಟವನ್ನು ಕಂಡ ಟೆಕ್ ವಲಯಕ್ಕೆ ಇನ್ನೂ ಆರ್ಥಿಕ ಬಿಕ್ಕಟ್ಟು ತಟ್ಟಿಲ್ಲ.
ಭಾರತದಲ್ಲಿ, ಕೋವಿಡ್19 ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ 25,000 ಕ್ಕೂ ಹೆಚ್ಚು ಸ್ಟಾರ್ಟಪ್ ಸಿಬ್ಬಂದಿಗಳು ಕೆಲಸ ಕಳೆದುಕೊಂಡಿದ್ದಾರೆ - ಮತ್ತು ಈ ವರ್ಷ 12,000 ಕ್ಕೂ ಹೆಚ್ಚು ಕೆಲಸದಿಂದ ವಜಾ ಮಾಡಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications