ಕೆಪಿಟಿಸಿಎಲ್ನ 404 ಇಂಜಿನಿಯರ್ ನೇಮಕಕ್ಕೆ ಹಸಿರು ನಿಶಾನೆ
ಬೆಂಗಳೂರು, ಫೆಬ್ರವರಿ 08: ವಿವಿಧ ಕಾರಣಗಳಿಂದ ನೆನೆಗುದಿಗೆ ಬಿದ್ದಿದ್ದ ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್)ನ 404 ಸಹಾಯಕ ಅಭಿಯಂತರ ಹುದ್ದೆಗಳ ನೇಮಕಕ್ಕೆ ಕರ್ನಾಟಕ ಹೈಕೋರ್ಟ್ ಕಡೆಗೂ ಅನುಮತಿ ನೀಡಿದೆ.
ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ ತಾತ್ಕಾಲಿಕ ನೇಮಕಾತಿ ಆದೇಶಗಳನ್ನು ನೀಡುವಂತೆ ಮಧ್ಯಂತರ ಆದೇಶ ಹೊರಡಿಸಿದೆ. ಆದರೆ ಈ ನೇಮಕಾತಿ ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಡಲಿದೆ ಎಂದು ಸ್ಪಷ್ಟಪಡಿಸಲಾಗಿದೆ.

ನೇಮಕಾತಿ ಸಂಬಂಧ ಕೆಪಿಟಿಸಿಎಲ್ 2023ರ ಫೆಬ್ರವರಿ 4ರಂದು ಪ್ರಕಟಿಸಿದ್ದ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ರದ್ದುಪಡಿಸಿ ಏಕಸದಸ್ಯ ನ್ಯಾಯಪೀಠ ನೀಡಿದ ಆದೇಶ ಪ್ರಶ್ನಿಸಿ ಆ ಪಟ್ಟಿಯಲ್ಲಿ ಅರ್ಹತೆ ಪಡೆದುಕೊಂಡಿದ್ದ ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲೂಕಿನ ಜಿ. ಶೃತಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳ 50ಕ್ಕೂ ಅಧಿಕ ಅಭ್ಯರ್ಥಿಗಳು ಮೇಲ್ಮನವಿಗಳನ್ನು ಸಲ್ಲಿಸಿದ್ದರು.
ಮುಖ್ಯ ನ್ಯಾಯಮೂರ್ತಿ ಪಿ. ಎಸ್. ದಿನೇಶ್ ಕುಮಾರ್ ಹಾಗೂ ನ್ಯಾಯಮೂರ್ತಿ ಟಿ. ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯಪೀಠ ಈ ಅರ್ಜಿಗಳ ವಿಚಾರಣೆ ನಡೆಸಿತು. ಮೇಲ್ಮನವಿದಾರರು, ರಾಜ್ಯ ಸರ್ಕಾರ, ಕೆಪಿಟಿಸಿಎಲ್, ಕರ್ನಾಟಕ ರಾಜ್ಯ ಪರೀಕ್ಷಾ ಪ್ರಾಧಿಕಾರದ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಈ ಆದೇಶ ನೀಡಿತು.
2023ರ ಜನವರಿ 3ರಂದು ಪ್ರಕಟಿಸಿದ ಅರ್ಹ ಅಭ್ಯರ್ಥಿಗಳ ತಾತ್ಕಾಾಲಿಕ ಅಂಕ ಪಟ್ಟಿಯಂತೆ 404 (313 ಮೂಲ ವೃಂದ, 91 ಕಲ್ಯಾಾಣ ಕರ್ನಾಟಕ ವೃಂದ) ಅಭ್ಯರ್ಥಿಗಳಿಗೆ ತಾತ್ಕಾಲಿಕ ನೇಮಕಾತಿ ಆದೇಶಗಳನ್ನು ನೀಡುವಂತೆ ಕೋರ್ಟ್ ಕೆಪಿಟಿಸಿಎಲ್ಗೆ ನಿರ್ದೇಶನ ನೀಡಿದೆ.
ಈ ತಾತ್ಕಾಲಿಕ ನೇಮಕಾತಿಗಳು ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಡುತ್ತವೆ ಎಂದು ನೇಮಕಾತಿ ಆದೇಶಗಳಲ್ಲಿ ನಮೂದಿಸಬೇಕು. ಒಂದು ವೇಳೆ ಮೇಲ್ಮನವಿ ಪುರಸ್ಕೃತಗೊಂಡು ಮೇಲ್ಮನವಿದಾರರು ಆಯ್ಕೆಗೊಂಡರೆ ಸೇವಾ ಹಿರಿತನ ಮತ್ತು ರೋಸ್ಟರ್ ಪಾಲಿಸಬೇಕು ಎಂದು ಹೇಳಿರುವ ನ್ಯಾಾಯಪೀಠ ವಿಚಾರಣೆಯನ್ನು ಮಾರ್ಚ್ 13ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: ಕೆಪಿಟಿಸಿಎಲ್ನಲ್ಲಿ ಖಾಲಿ ಇರುವ ಸಹಾಯಕ ಅಭಿಯಂತರರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2022ರ ಆ.24ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, ಆ.25ಕ್ಕೆ ಕೀ ಉತ್ತರಗಳನ್ನು ಪ್ರಕಟಿಸಿತ್ತು. ಆಕ್ಷೇಪಣೆ ಸಲ್ಲಿಸಲು ಸೆ.2ರವರೆಗೆ ಅವಕಾಶ ನೀಡಲಾಗಿತ್ತು. ಕೀ ಉತ್ತರ ಪಟ್ಟಿಯಲ್ಲಿ ಕೆಲವು ಉತ್ತರಗಳು ತಪ್ಪಾಗಿವೆ ಎಂದು ಹಲವು ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಿದರು.
ಇದಕ್ಕೆ ಪರೀಕ್ಷಾ ಪ್ರಾಧಿಕಾರ ತಜ್ಞರ ಸಮಿತಿ ರಚಿಸಿ ಅದರ ಪರಿಶೀಲನೆ ಬಳಿಕ ನ.22ರಂದು ಅಂತಿಮ ಕೀ ಉತ್ತರಗಳ ಪಟ್ಟಿ ಪ್ರಕಟಿಸಿತು. ಡಿ.27ರಂದು ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಯಿತು. ಅದರ ಆಧಾರದಲ್ಲಿ 2023ರ ಜ.3ರಂದು ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಯಿತು. ಅದರಲ್ಲಿ 501 ಅಭ್ಯರ್ಥಿಗಳು ಅರ್ಹತೆ ಪಡೆದುಕೊಂಡು, 404 ಅಭ್ಯರ್ಥಿಗಳ ತಾತ್ಕಲಿಕ ಪಟ್ಟಿ ಪ್ರಕಟಿಸಲಾಯಿತು.
ಈ ಮಧ್ಯೆ ಪರಿಷ್ಕೃತ ಕೀ ಉತ್ತರ ಪಟ್ಟಿಗೆ 900ಕ್ಕೂ ಹೆಚ್ಚು ಆಕ್ಷೇಪಣೆಗಳು ವ್ಯಕ್ತವಾದವು. ಆದಕ್ಕೆ ಪುನಃ ತಜ್ಞರ ಸಮಿತಿಯ ಪರಿಶೀಲನೆಗೊಳಪಡಿಸಲಾಯಿತು. ಹೆಚ್ಚುವರಿ ಅಂಕಗಳನ್ನು ನೀಡಿ 2023ರ ಫೆ.4ರಂದು ಪರಿಷ್ಕೃತ ಪಟ್ಟಿ ಪ್ರಕಟಿಸಲಾಯಿತು. ಇದರ ಪರಿಣಾಮ 135 ಅಭ್ಯರ್ಥಿಗಳು ಅರ್ಹತೆ ಪಡೆದುಕೊಂಡು ಒಟ್ಟು ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಸಂಖ್ಯೆ 636 ಆಯಿತು.
ಎರಡನೇ ಬಾರಿ ಪರಿಷ್ಕೃತ ಪಟ್ಟಿಯನ್ನು ಪ್ರಕಟಿಸಿದ್ದನ್ನು ಆಕ್ಷೇಪಿಸಿ ಮೊದಲ ಪಟ್ಟಿಯಲ್ಲಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಎರಡನೇ ಪರಿಷ್ಕರಣೆಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ರದ್ದುಪಡಿಸಿತ್ತು. ಇದರಿಂದ ಅರ್ಹತಾ ಪಟ್ಟಿಯಿಂದ ವಂಚಿತರಾದ 135 ಅಭ್ಯರ್ಥಿಗಳ ಪೈಕಿ 50ಕ್ಕೂ ಅಧಿಕ ಅಭ್ಯರ್ಥಿಗಳು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications