IBM Job Cut: ಐಬಿಎಂ 8,000 ಉದ್ಯೋಗಿಗಳ ವಜಾ
IBM Layoffs: ಅಮೆರಿಕ ಮೂಲದ ತಂತ್ರಜ್ಞಾನ ದೈತ್ಯ ಸಂಸ್ಥೆಯಾಗಿರುವ ಐಬಿಎಂ (IBM Layoffs) ಕಂಪನಿಯು ತನ್ನಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 8,000 ನೌಕರರನ್ನು ಉದ್ಯೋಗದಿಂದ ವಜಾಗೊಳಿಸಿದೆ. ಆರ್ಟಿಫಿಸಿಯಲ್ ಇಂಟಲಿಜೆನ್ಸ್ (AI) ತಂತ್ರಜ್ಞಾನವನ್ನು ಕಚೇರಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದೆ. ಹೀಗಾಗಿ ಸಾವಿರಾರು ನೌಕರರು ಕೆಲಸ ಕಳೆದುಕೊಂಡಿದ್ದಾರೆ ಎಂದು ವರದಿ ಆಗಿದೆ.
ಐಬಿಎಂನ ತೆಗೆದು ಹಾಕಿದ ಈ 8,000 ಉದ್ಯೋಗಿಗಳಲ್ಲಿ ಬಹುತೇಕ ಮಂದಿ ಮಾನವ ಸಂಪನ್ಮೂಲ (ಎಚ್ಆರ್) ವಿಭಾಗದಲ್ಲಿ ಕೆಲಸ ಮಾಡಿದವರೇ ಆಗಿದ್ದಾರೆ. ಬ್ಯಾಕ್-ಆಫೀಸ್ ವ್ಯವಸ್ಥೆಯಲ್ಲಿ ಸಂಸ್ಥೆಯು ಕೃತಕ ಬುದ್ಧಿಮತ್ತೆ (AI) ಎಂಬ ಅತ್ಯಾಧುನಿಕ ತಂತ್ರಜ್ಞಾನ ಸಂಯೋಜಿಸಿದೆ. ಇದರ ಭಾಗವಾಗಿಯೇ ಇಷ್ಟು ಪ್ರಮಾಣದಲ್ಲಿ ಉದ್ಯೋಗಿಗಳನ್ನು ವಜಾಗೊಳಿಸಿದೆ.

ಇದೇ ಮೇ ತಿಂಗಳ ಆರಂಭದಲ್ಲಿ ಐಬಿಎಂ ಕಂಪನಿಯು ಮಾನವ ಸಂಪನ್ಮೂಲ ವಿಭಾಗದ 200 ಉದ್ಯೋಗಿಗಳಿಗೆ ಉದ್ಯೋಗ ವಜಾ ಕುರಿತು ಪ್ರತಿಕ್ರಿಯಿಸಿತ್ತು ಎನ್ನಲಾಗಿದೆ. ಈ ವೇಳೆ ಅವರ ಕೆಲಸಗಳಾದ ದಾಖಲೆ ಮತ್ತು ಮಾನವ ಸಂಪನ್ಮೂಲ ದತ್ತಾಂಶವನ್ನು ಸಂಘಟಿಸುವಂತಹ ಹಾಗೂ ಪುನರಾವರ್ತಿತ ಕಾರ್ಯ ಮಾಡುವ ಎಐ ತಂತ್ರಜ್ಞಾನವನ್ನು ಸಂಯೋಜಿಸಿಕೊಂಡಿತು.
ಇಡೀ ಎಚ್ಆರ್ ವಿಭಾಗವೇ ಕೃತಕ ಬುದ್ಧಿಮತ್ತೆ ರೂಪದಲ್ಲಿ ಬದಲಾಯಿತು. ಅಲ್ಲಿ ಕೆಲಕ್ಕಿದ್ದವರು ಮನೆಗೆ ಕಳುಹಿಸಲಾಯಿತು. ಏಕೆಂದರೆ ಈ ಸಾಫ್ಟ್ವೇರ್-ಚಾಲಿತ ಎಐ ಹತ್ತಾರು ಜನರು ಮಾಡುವ ಕೆಲಸವನ್ನು ಮಾಡುತ್ತದೆ. ಮಾನವ ಮೇಲ್ವಿಚಾರಣೆಯಲ್ಲಿ ಕಾರ್ಯ ಮಾಡುತ್ತದೆ. ಅತೀ ಕಡಿಮೆ ವೆಚ್ಚದಲ್ಲಿ ದಕ್ಷತೆ ಇರುವ ತಂತ್ರಜ್ಞಾನ ವಿನ್ಯಾಸಗೊಳಿಸಲಾಗಿದೆ. ಅದರ ಲಾಭ ಕಂಪನಿ ಪಡೆದುಕೊಳ್ಳುತ್ತಿದ್ದಂತೆ ಸಾವಿರಾರು ನೌಕರರಿಗೆ ಗೇಟ್ ಪಾಸ್ ನೀಡಿದೆ.
ಉದ್ಯೋಗಿಗಳ ವಜಾದಿಂದ ಕಂಪನಿಯು ತನ್ನ ಕೆಲಸ ಕಾರ್ಯ ಹೇಗೆ ಮಾಡುತ್ತದೆ ಎಂಬದರ ಮೇಲೆ ಕುತೂಹಲವು ಹೆಚ್ಚಾಗಿದೆ. ಇದೆಲ್ಲವು ಕಂಪನಿಯು ನಿಯಮಿತ ಬದಲಾವಣೆಗಳಲ್ಲಿ ಒಂದು ಎಂದಿರುವ ಐಬಿಎಂ ಸಿಇಒ ಅರವಿಂದ್ ಕೃಷ್ಣ ಅವರು, ಯಾಂತ್ರೀಕೃತ ಜಗತ್ತಿನಲ್ಲಿ ಬದಲಾವಣೆಗೆ ಒಗ್ಗಿಕೊಳ್ಳಬೇಕಿದೆ. ಕೆಲಸದ ಹರಿವು ಸುಗಮಗೊಳಿಸಲು ಎಐ ಬಳಕೆ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಸಾಫ್ಟ್ವೇರ್ ಅಭಿವೃದ್ಧಿ, ಮಾರ್ಕೆಟಿಂಗ್ ಮತ್ತು ಮಾರಾಟದಂತಹ ಇತರ ಕಾರ್ಯಗಳಿಗೂ ಬಳಸಲಾಗುತ್ತಿದೆ. ಉದ್ಯಮ ವಿಭಾಗಗಳಲ್ಲಿ AI ಮತ್ತು ಇತರ ಯಂತ್ರೋಪಕರಣಗಳ ಬಳಕೆ ಆಗುತ್ತಿದ್ದರು ಸಹಿತ ದೊಡ್ಡ ಪ್ರಮಾಣದ ಉದ್ಯೋಗಿಗಳ ಸಂಖ್ಯೆಯನ್ನು ಐಬಿಎಂ ಹೊಂದಿದೆ. ನಮ್ಮ ಒಟ್ಟು ಉದ್ಯೋಗವು ವಾಸ್ತವವಾಗಿ ಹೆಚ್ಚಾಗಿದೆ. ಎಐ ಹೂಡಿಕೆ ಬಳಿಕ ಇತರ ವಲಯಗಳ ಮೇಲೆ ಹೂಡಿಕೆ ಹೆಚ್ಚಾಗುವ ಸಾಧ್ಯತೆ ಇದೆ ಎಂದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications