IT Dept Recruitment 2023: ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ವೇತನ, ಕೊನೆ ದಿನಾಂಕ, ಆಯ್ಕೆ ವಿವರ
ಬೆಂಗಳೂರು, ಅಕ್ಟೋಬರ್ 29: ಭಾರತದ ಆದಾಯ ತೆರಿಗೆ ಇಲಾಖೆಯು ತನ್ನಲ್ಲಿ ಖಾಲಿ ಹಲವು ಹುದ್ದೆಗಳನ್ನು ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ನಿಮಿತ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ.
ಭಾರತದ ಆದಾಯ ತೆರಿಗೆ ಇಲಾಖೆ (IT Department jobs) ನಲ್ಲಿ ಒಟ್ಟು ಎಂಟು ಯಂಗ್ ಪ್ರೊಫೆಶನಲ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಮುಂದಿನ ನವೆಂಬರ್ 17ರಂದು ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಅಂಚೆ ಮೂಲಕ (ಆಫ್ಲೈನ್) ಅರ್ಜಿ ಸಲ್ಲಿಸಬೇಕ ಎಂದು ಇಲಾಖೆ ನೇಮಕಾತಿ ಅಧಿಸೂಚನೆ ಮಾಹಿತಿ ನೀಡಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೂ ಮೊದಲು ನೇಮಕಾತಿ ಕುರಿತು ಪೂರ್ಣ ವಿವರ ತಿಳಿದು ಅರ್ಜಿ ಸಲ್ಲಿಸಿ.

ನೇಮಕಾತಿ ಪ್ರಕ್ರಿಯೆಯ ಮಾಹಿತಿ
ಸಂಸ್ಥೆ ಹೆಸರು: ಆದಾಯ ತೆರಿಗೆ ಇಲಾಖೆ
ಹುದ್ದೆ ಹೆಸರು: ಯಂಗ್ ಪ್ರೊಫೆಶನಲ್
ಖಾಲಿ ಹುದ್ದೆಗಳು: 8
ಮಾಸಿಕ ಸಂಬಳ: 40,000 ರೂಪಾಯಿ
ಪೋಸ್ಟಿಂಗ್ ಸ್ಥಳ: ದೆಹಲಿ
ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕ: ನವೆಂಬರ್ 17
ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಲ್ಲಿ ಕಾನೂನು ವಿಭಾಗದಲ್ಲಿ ಪದವಿ, ಎಲ್ಎಲ್ಬಿ ಪೂರ್ಣಗೊಳಿಸಿರುವುದು ಕಡ್ಡಾಯ ಎಂದು ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆ ಮಾಹಿತಿ ನೀಡಿದೆ.
ವಯಸ್ಸಿನ ಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಇದೇ ಅಕ್ಟೋಬರ್ 26ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಸಿಗಲಿದೆ ಎಂದು ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆ ಮಾಹಿತಿ ನೀಡಿದೆ.

ಆಯ್ಕೆ ಹೇಗೆ ನಡೆಯುತ್ತದೆ?
ಮೊದಲು ಅಭ್ಯರ್ಥಿಗಳಿಗೆ ಆದಾಯ ತೆರಿಗೆ ಇಲಾಖೆಯು ಸ್ಕ್ರೀನಿಂಗ್ ನಡೆಸಲಿದೆ. ನಂತರ ಶಾರ್ಟ್ಲಿಸ್ಟ್ ಮಾಡಿ ಬಳಿಕ ಅವರನ್ನು ಸಂದರ್ಶನ ನಡೆಸಿ ಆಯ್ಕೆ ಮಾಡುತ್ತದೆ. ಇಲ್ಲಿ ಆಯ್ಕೆ ಆಗುವವರಿಗೆ ತಿಂಗಳಿಗೆ ₹ 40,000 ವೇತನ ಕೊಟ್ಟಿ ದೆಹಲಿಯಲ್ಲಿ ಪೋಸ್ಟಿಂಗ್ ನೀಡಲಿದೆ.
ಅರ್ಜಿ ಸಲ್ಲಿಸುವುದು ಹೇಗೆ
ಅಭ್ಯರ್ಥಿಗಳು ಸೂಕ್ತ ದಾಖಲೆಗಳ ಭರ್ತಿ ಮಾಡಿದ ಅರ್ಜಿಯನ್ನು ಆದಾಯ ತೆರಿಗೆ ಅಧಿಕಾರಿ (ಆಡಳಿತ) (ಕಾನೂನು ಮತ್ತು ಸಂಶೋಧನೆ), ಆದಾಯ ತೆರಿಗೆ ನಿರ್ದೇಶನಾಲಯ (ಕಾನೂನು ಮತ್ತು ಸಂಶೋಧನೆ), ಕೊಠಡಿ ಸಂಖ್ಯೆ- 413
4 ನೇ ಮಹಡಿ, ಡ್ರಮ್ ಆಕಾರದ ಕಟ್ಟಡ, I. P. ಎಸ್ಟೇಟ್, ನವದೆಹಲಿ-110002 ಇಲ್ಲಿಗೆ ಕಳುಹಿಸಬೇಕು.
ಅರ್ಜಿಯ ಸಾಫ್ಟ್ ಕಾಪಿಯನ್ನು ಈ ಇ-ಮೇಲ್ [email protected] ಗೆ ಕಳುಹಿಸಬೇಕು ಎಂದು ಇಲಾಖೆ ಸೂಚಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications