Indian Post Recruitment: ಈ ಖಾಲಿ ಹುದ್ದೆಗಳಿಗೆ SSLC ಪಾಸಾದವರು ಅರ್ಜಿ ಸಲ್ಲಿಸಿ, 63,200 ರೂ.ವೇತನ
ಬೆಂಗಳೂರು, ಡಿಸೆಂಬರ್ 16: ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣ ಅವಕಾಶ ಇದ್ದು, ಅರ್ಹರು ಕೂಡಲೇ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಪಡೆಯುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹ ಆಸಕ್ತರಿಗೆ 2025ರ ಜನವರಿ 12ವರೆಗೆ ಅರ್ಜಿ ಸಲ್ಲಿಸಬಹುದು. ಕೊನೆ ದಿನಾಂಕವರೆಗೆ ಕಾಯದೇ ಇಲ್ಲಿನ ಮಾಹಿತಿ ತಿಳಿದುಕೊಂಡು ಕೂಡಲೇ ಅರ್ಜಿ ಸಲ್ಲಿಸಬೇಕು.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 19 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇವೆ. ಅರ್ಜಿಗಳನ್ನು ಕೂಡಲೇ ಸಲ್ಲಿಸಬೇಕು.

ನೇಮಕಾತಿ ಪೂರ್ಣ ಮಾಹಿತಿ
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ
ಉದ್ಯೋಗಗಳ ಹೆಸರು: ಸ್ಟಾಫ್ ಕಾರ್ ಡ್ರೈವರ್
ಒಟ್ಟು ಹುದ್ದೆಗಳು: 19
ಮಾಸಿಕ ವೇತನ: ನಿಯಮಾನುಸಾರ
ಗರಿಷ್ಠ ವಯಸ್ಸು: ಗರಿಷ್ಠ 27 ವರ್ಷ
ಅರ್ಜಿ ಸಲ್ಲಿಕೆ ವಿಧಾನ: ಅಂಚೆ ಮೂಲಕ (ಆಫ್ಲೈನ್)
ವಿದ್ಯಾರ್ಹತೆ
ಆಸಕ್ತ ಅರ್ಹ ಅಭ್ಯರ್ಥಿಗಳು ಯಾವುದೇ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು ಎಂದು ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯಸ್ಸಿನ ಮಿತಿ
ಈ ಮೇಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಐದು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಸಿಗಲಿದೆ.
ಮಾಸಿಕ ವೇತನ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯ್ಕೆ ಆದಲ್ಲಿ ಅವರಿಗೆ ಮಾಸಿಕ ರೂ.19,900 ರಿಂದ 63,200 ರೂಪಾಯಿವರೆಗೆ ವೇತನ ನೀಡಲಾಗುವುದು. ಅಭ್ಯರ್ಥಿಗಳಿಗೆ ಬಿಹಾರ ರಾಜ್ಯದಲ್ಲಿ ಉದ್ಯೋಗ ನೀಡಲಾಗುವುದು ಎಂದು ಅಧಿಸೂಚನೆ ತಿಳಿಸಿದೆ.
ಆಯ್ಕೆ ಹೇಗೆ ನಡೆಯಲಿದೆ
ಅರ್ಜಿ ಸಲ್ಲಿಸಿದವರಿಗೆ ಮೊದಲು ಟ್ರೇಡ್ ಟೆಸ್ಟ್ ಬಳಿಕ ಡ್ರೈವಿಂಗ್ ಟೆಸ್ಟ್ ನಡೆಸಲಾಗುವುದು. ಬಳಿಕ ಅಂತಿಮವಾಗಿ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ ವಿಳಾಸ
ಆಸಕ್ತರು ಈ ಕೂಡಲೇ ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು. ಆಫ್ಲೈನ್ ಮೂಲಕ ಅಂದರೆ ಅಂಚೆ ಮೂಲಕವೇ ಅರ್ಜಿ ಸಲ್ಲಿಸಬೇಕು.
ಭರ್ತಿ ಮಾಡಿದ ಅರ್ಜಿಯನ್ನು 'ಅಸಿಸ್ಟೆಂಟ್ ಡೈರೆಕ್ಟರ್ (ನೇಮಕಾತಿ) ಮುಖ್ಯ ಪೋಸ್ಟ್ಮಾಸ್ಟರ್ ಜನರಲ್ ಕಚೇರಿ, ಬಿಹಾರ ಸರ್ಕಲ್, ಪಾಟ್ನಾ-800001' ಗೆ ಅರ್ಜಿಯನ್ನು ಜನವರಿ 12ರೊಳಗೆ ಕಳುಹಿಸಬೇಕು..
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications