India Post Recruitment: ಕರ್ನಾಟಕದಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ ಹಾಗೂ ಆಯ್ಕೆಯಾದವರಿಗೆ ಮಾಸಿಕ ಸಂಬಳ ಎಷ್ಟು?
India Post Recruitment: ಭಾರತೀಯ ಅಂಚೆ ಇಲಾಖೆಯಲ್ಲಿ 98,083 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಕರ್ನಾಟಕದಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ?, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಆಯ್ಕೆಯಾದವರಿಗೆ ಮಾಸಿಕ ಸ್ಯಾಲರಿ ಎಷ್ಟಿರುತ್ತದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
10ನೇ ತರಗತಿ ಪಾಸಾದವರೂ ಅರ್ಜಿ ಸಲ್ಲಿಸಬಹುದು. ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ 98,083 ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಉತ್ತೀರ್ಣರಾದವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಕೆ ಮಾಡಬಹುದಾಗಿದೆ.

ಸದ್ಯ ಅಧಿಕೃತ ಅಧಿಸೂಚನೆ ಇನ್ನೂ ಬಿಡುಗಡೆ ಆಗಿಲ್ಲ. ಅದಾದ ಬಳಿಕವಷ್ಟೇ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಬಗ್ಗೆ ಮಾಹಿತಿ ಲಭಿಸಲಿದೆ. ಪರೀಕ್ಷೆ ಮೂಲಕ ಈ ನೇಮಕಾತಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಜಿಡಿಎಸ್ (Gramin Dak Sevak), ಪೋಸ್ಟ್ಮ್ಯಾನ್, ಎಂಟಿಎಸ್, ಪೋಸ್ಟಲ್ ಅಸಿಸ್ಟಂಟ್, ಮೇಲ್ ಗಾರ್ಡ್, ಸೋರ್ಟಿಂಗ್ ಅಸಿಸ್ಟಂಟ್ ಸೇರಿದಂತೆ ವಿವಿಧ ಹುದ್ದೆಗಳಿವೆ.
ಕರ್ನಾಟಕದಲ್ಲಿ ಒಟ್ಟು 5,731 ಹುದ್ದೆಗಳಿವೆ. ರಾಜ್ಯದಲ್ಲಿ ಎಂಟಿಎಸ್ -1,754, ಪೋಸ್ಟ್ಮ್ಯಾನ್ -3,887 ಮತ್ತು ಮೇಲ್ ಗಾರ್ಡ್ -90 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಶುಲ್ಕ ಪಾವತಿ ಮಾಹಿತಿ: ಸಾಮಾನ್ಯ/ಒಬಿಸಿ /ಇಡಬ್ಲ್ಯುಎಸ್ ವಿಭಾಗದ ಅಭ್ಯರ್ಥಿಗಳಿ 100 ರೂಪಾಯಿ, ಮಹಿಳಾ/ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಇನ್ನು 18ರಿಂದ 40 ವರ್ಷದೊಳಗಿನ ಆಸಕ್ತರು ಅರ್ಜಿ ಸಲ್ಲಿಸಬಹುದಾಗುದೆ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ-3 ವರ್ಷ, ಎಸ್ಸಿ / ಎಸ್ಟಿ -5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇರಲಿದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 3 ಗಂಟೆಗಳ ಈ ಪರೀಕ್ಷೆ 100 ಅಂಕಗಳಿಗೆ ಇರುತ್ತದೆ. ಗಣಿತ, ರೀಸನಿಂಗ್, ಹಿಂದಿ, ಇಂಗ್ಲಿಷ್ ವಿಷಯಗಳ ತಲಾ 25 ಅಂಕಗಳ ಪ್ರಶ್ನೆಗಳಿರುತ್ತವೆ. ಅಭ್ಯರ್ಥಿಗಳು ಸ್ಥಳೀಯ ಭಾಷೆಯ ಮೇಲಿನ ಹಿಡಿತ ಹೊಂದಿರುವುದು ಕಡ್ಡಾಯವಾಗಿದ್ದು, ಜೊತೆಗೆ ಕಂಪ್ಯೂಟರ್ ಜ್ಞಾನ ಮತ್ತು ಕಂಪ್ಯೂಟರ್ ಕಲಿಕೆಯ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ












Click it and Unblock the Notifications