India Railway Jobs: ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ, ಅರ್ಜಿ ಆಹ್ವಾನ
ಬೆಂಗಳೂರು, ಮೇ 11: ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಪಡೆಯುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣ ಅವಕಾಶ. ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಖಾಲಿ ಇದ್ದು, ಆಸಕ್ತರು ಈ ಸದಾವಕಾಶವನ್ನು ಬಳಸಿಕೊಳ್ಳುವಂತೆ 'ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು' (RITES) ತಿಳಿಸಿದೆ.
ರೈಲ್ವೆ ಇಲಾಖೆಯು ತನ್ನಲ್ಲಿ ಖಾಲಿ ಇರುವ ಕೆಲವು ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. RITES ತನ್ನ ವ್ಯಾಪ್ತಿಯಲ್ಲಿ ಒಟ್ಟು 1 ಗ್ರೂಪ್ ಜನರಲ್ ಮ್ಯಾನೇಜರ್(ಸಿವಿಲ್) ಹುದ್ದೆ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಮುಂದಿನ ತಿಂಗಳು ಜೂನ್ 17 ಕೊನೆಯ ದಿನಾಂಕ ಎಂದು ಹೇಳಲಾಗಿದೆ. ಅಭ್ಯರ್ಥಿಗಳು ಕೊನೆ ದಿನಾಂಕವರೆಗೂ ಕಾಯದೇ ಈ ಕೂಡಲೇ ಅರ್ಜಿ ಸಲ್ಲಿಸಬೇಕು. ಇದಕ್ಕೂ ಮೊದಲು ವಿದ್ಯಾರ್ಹತೆ, ವೇತನ, ಅರ್ಜಿ ಸಲ್ಲಿಕೆ ವಿದಾನ ಇನ್ನಿತರ ನೇಮಕಾತಿಯ ಪೂರ್ಣ ಮಾಹಿತಿ ಇಲ್ಲಿ ತಿಳಿಯಬಹುದು.
ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ರೈಲ್ವೆ ಇಲಾಖೆ (RITES)
ಎಷ್ಟು ಹುದ್ದೆ ಇವೆ: ಒಂದು
ಹುದ್ದೆ ಹೆಸರು: ಗ್ರೂಪ್ ಜನರಲ್ ಮ್ಯಾನೇಜರ್(ಸಿವಿಲ್)
ವೇತನ: ನಿಗದಿ ಮಾಡಿಲ್ಲ
ಪೋಸ್ಟಿಂಗ್ : ಬೆಂಗಳೂರು
ಅರ್ಜಿ ಸಲ್ಲಿಕೆ ಕೊನೆ ದಿನ: 2024 ಜೂನ್ 17
ವಯಸ್ಸಿನ ಮಿತಿ
ಆಸಕ್ತ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆಯ ಕೊನೆ ದಿನವಾದ 2024 ಜೂನ್ 17ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು ಎಂದು ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳ ಅಧಿಸೂಚನೆ ಮಾಹಿತಿ ನೀಡಿದೆ.
ಅಭ್ಯರ್ಥಿಗಳ ಆಯ್ಕೆ ಹೇಗೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಿದ್ಯಾರ್ಹತೆ/ಕ್ವಾಲಿಫಿಕೇಶನ್ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದು. ಸೇವಾ ವೃತ್ತಿ ಅನುಭವ ಹಾಗೂ ನೇರವಾಗಿ ಸಂದರ್ಶನ ನಡೆಸಿ ಶಾರ್ಟ್ಲಿಸ್ಟ್ ಮಾಡಲಾಗುವುದು. ಇಲ್ಲಿ ಆಯ್ಕೆ ಆಗುವವರಿಗೆ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿಯೇ ಪೋಸ್ಟಿಂಗ್ ನೀಡಲಾಗುವುದು. ಸದ್ಯ ಮಾಸಿಕ ವೇತನ ಎಷ್ಟು ಎಂದು ನಿಗದಿ ಮಾಡಲಾಗಿಲ್ಲ. ನಿಯಮಾನುಸಾರ ಸಂಬಳ ಸಿಗಲಿದೆ.
ಈ ಮೇಲಿನ ಹುದ್ದೆಗೆ ಅರ್ಜಿ ಸಲ್ಲಿಸುವ ಯಾವುದೇ ವರ್ಗದ ಅಭ್ಯರ್ಥಿಗಳಿಗೂ ಅರ್ಜಿ ಶುಲ್ಕ ನಿಗದಿ ಮಾಡಲಾಗಿಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.
ಅರ್ಜಿ ಸಲ್ಲಿಕೆ ವಿಧಾನ
ಅರ್ಹ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅದಕ್ಕಾಗಿ ಇಲ್ಲಿ ನೀಡಲಾಗಿರುವ https://recruit.rites.com/frmRegistration.aspx ಬಳಿಸಿ ನಿಗದಿತ ದಿನಾಂಕದೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.
-
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?











Click it and Unblock the Notifications