ರೈಲ್ವೆ ನೇಮಕಾತಿ 2026: 22,000ಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ಜರಿ ನೇಮಕಾತಿ
ನವದೆಹಲಿ: ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ ಬರೋಬ್ಬರಿ 22 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಲೆವೆಲ್ -1ರ ಹುದ್ದೆಗಳು ಸೇರಿದಂತೆ ದೇಶಾದ್ಯಂತ ವಿವಿಧ ವಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಹುದ್ದೆಗಳನ್ನು ಸೇರಬಯಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಹೇಗೆ? ಯಾವಾಗ ಅರ್ಜಿ ಸಲ್ಲಿಸಬಹುದು, ಮಾಸಿಕ ವೇತನ ಎಷ್ಟು? ನೇಮಕಾತಿ ವಿವರ ಮುಂದಿದೆ.
ಭಾರತೀಯ ರೈಲ್ವೆ ಸಚಿವಾಲಯದ ಅಧೀನದಲ್ಲಿರುವ ರೈಲ್ವೆ ನೇಮಕಾತಿ ಮಂಡಳಿಗಳು (RRB) ಲೆವೆಲ್-1 ಹುದ್ದೆಗಳ ಭರ್ತಿಗೆ ಕೇಂದ್ರಿತ ಉದ್ಯೋಗ ಅಧಿಸೂಚನೆ (CEN) ಸಂಖ್ಯೆ 09/2025 ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಈ ಅಧಿಸೂಚನೆಯ ಮೂಲಕ ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಒಟ್ಟು ಸುಮಾರು 22,000 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಏಳನೇ ವೇತನ ಆಯೋಗದ ಪೇ ಮ್ಯಾಟ್ರಿಕ್ಸ್ ಅಡಿಯಲ್ಲಿ ಈ ನೇಮಕಾತಿ ನಡೆಯುತ್ತದೆ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಿಲಾಗಿದೆ.

ಜ.21ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ
ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಿದೆ. 2026ರ ಜನವರಿ 21ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ. ಅರ್ಜಿ ಸಲ್ಲಿಕೆಗೆ ಫೆಬ್ರವರಿ 20ರವರೆಗೆ ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು http://www.rrbapply.gov.in ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಲು ಕೂಡಲೇ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕಿದೆ.
ಶೈಕ್ಷಣಿಕ ಅರ್ಹತೆ, ಮಾಸಿಕ ವೇತನ
ರೈಲ್ವೆ ಇಲಾಖೆಯ ಸದರಿ ಹುದ್ದೆಗಳಿಗೆ ಅಗತ್ಯವಿರುವ ಶೈಕ್ಷಣಿಕ ಅರ್ಹತೆ ಮತ್ತು ವೈದ್ಯಕೀಯ ಮಾನದಂಡಗಳು ಸಂಬಂಧಿಸಿದಂತೆ ಸಂಪೂರ್ಣ ವಿವರಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ. ಲೆವೆಲ್-1 ರ ವಿವಿಧ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮೂಲ ವೇತನವಾಗಿ ಮಾಸಿಕ 18,000 ರೂಪಾಯಿ ನಿಗದಿಪಡಿಸಲಾಗಿದೆ. ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
ಅಭ್ಯರ್ಥಿಗಳ ವಯೋಮಿತಿ
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳ ವಯೋಮಿತಿ 2026ರ ಜನವರಿ 1ರ ವೇಳೆಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷದೊಳಗೆ ಇರಬೇಕು. ಅಂಥವರು ಮಾತ್ರವೇ ಅರ್ಜಿ ಸಲ್ಲಿಸಬಹುದಾಗಿದೆ. ಜಾತಿ ಮೀಸಲಾತಿ ನಿಯಮಾನುಸಾರ ಆಯಾ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ರೈಲ್ವೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಕನಸು ಕಾಣುತ್ತಿರುವ ಲಕ್ಷಾಂತರ ಯುವಕರಿಗೆ ಈ ನೇಮಕಾತಿ ಅತ್ಯುತ್ತಮ ಅವಕಾಶ ಒದಗಿಸಲಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕವರೆಗೆ ಕಾಯದೆ, ಅಗತ್ಯ ದಾಖಲೆಗಳೊಂದಿಗೆ ಸಮಯಕ್ಕೆ ಸರಿಯಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕೆಂದು ರೈಲ್ವೆ ನೇಮಕಾತಿ ಮಂಡಳಿ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗೆ ಒಮ್ಮೆ ಅಧಿಸೂಚನೆ ಓದಿಕೊಳ್ಳಿ ಹಾಗೂ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು.
-
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications