Nokia: 1.26 ಲಕ್ಷ ಟೆಲಿಕಾಂ ನುರಿತ ಯುವಕರಿಗೆ ಉದ್ಯೋಗ: ಕೌನ್ಸಿಲ್
ಬೆಂಗಳೂರು, ಜುಲೈ 18: ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಟೆಲಿಕಾಂ ತಂತ್ರಜ್ಞಾನದಲ್ಲಿ ತರಬೇತಿ ಪಡೆದ ಸುಮಾರು 1.26 ಲಕ್ಷ ಯುವಕರು ಉದ್ಯೋಗ ಪಡೆಯಲಿದ್ದಾರೆ ಎಂದು ಟೆಲಿಕಾಂ ಸೆಕ್ಟರ್ ಸ್ಕಿಲ್ ಕೌನ್ಸಿಲ್ನ ಉನ್ನತ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಅಹಮದಾಬಾದ್ನ ಟೆಲಿಕಾಂ ಸೆಕ್ಟರ್ ಸ್ಕಿಲ್ ಕೌನ್ಸಿಲ್ (TSSC) ಕೌಶಲ್ಯ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಫಿನ್ನಿಶ್ ಟೆಲಿಕಾಂ ಗೇರ್ ತಯಾರಕ ನೋಕಿಯಾ ಸಹಯೋಗದೊಂದಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಗಾಗಿ ಹೊಸ ಸೆಂಟರ್ ಆಫ್ ಎಕ್ಸಲೆನ್ಸ್ ಅನ್ನು ಸ್ಥಾಪಿಸುವುದಾಗಿ ಘೋಷಿಸಿದೆ ಎಂದು ಮನಿ ಕಂಟ್ರೋಲ್ ವರದಿ ಮಾಡಿದೆ.

ಟೆಲಿಕಾಂ ಸೆಕ್ಟರ್ ಸ್ಕಿಲ್ ಕೌನ್ಸಿಲ್ (TSSC) ಪ್ರಸ್ತಕ ಆರ್ಥಿಕ ವರ್ಷದಲ್ಲಿ 1.26 ಲಕ್ಷ ಯುವಕರಿಗೆ ತರಬೇತಿ ನೀಡಿ ಉದ್ಯೋಗಕ್ಕೆ ಸಜ್ಜುಗೊಳಿಸಲಿದೆ. ಹೀಗಾಗಿ ಅವರೆಲ್ಲರು ಉದ್ಯಮದಿಂದ ಉದ್ಯೋಗಿಯಾಗಲಿದ್ದಾರೆ ಎಂದು ಹೊಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದ ಬದಿಯಲ್ಲಿ ಟಿಎಸ್ಎಸ್ಸಿ ಯ ಮುಖ್ಯಸ್ಥರಾದ ಅರವಿಂದ್ ಬಾಲಿ ಹೇಳಿದರು.
ಸ್ಕಿಲ್ ಲ್ಯಾಬ್ನಿಂದ ಉದ್ಯೋಗ ನೀಡುವ ಗುರಿ
ಐಟಿಐ ಕುಬೇರ್ನಗರದಲ್ಲಿರುವ ಸೆಂಟರ್ ಆಫ್ ಎಕ್ಸ್ಲೆನ್ಸ್ (CoE) ಅಭ್ಯರ್ಥಿಗಳಿಗೆ 5G ತಂತ್ರಜ್ಞಾನ ಕೌಶಲ್ಯಗಳಲ್ಲಿ ತರಬೇತಿ ನೀಡಲು ಸ್ಕಿಲ್ ಲ್ಯಾಬ್ ನಿರ್ಮಾಣ ಮಾಡಲಾಗುತ್ತಿದೆ. ಈ ಕೌಶಲ್ಯ ಕೇಂದ್ರವು ತರಬೇತಿ ಪೂರ್ಣಗೊಂಡ 4-6 ವಾರಗಳಲ್ಲಿ ಕನಿಷ್ಠ 70 ಪ್ರತಿಶತದಷ್ಟು ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಗುರಿ ಹೊಂದಿದೆ. ಯೋಜನೆ ಆರಂಭಿಕ ಮೊದಲ ವರ್ಷವೇ ಸುಮಾರು 300 ಅಭ್ಯರ್ಥಿಗಳು ಕಾರ್ಯಕ್ರಮದ ಲಾಭ ಪಡೆಯಲಿದ್ದಾರೆ ಎಂದರು.

ನೋಕಿಯ (Nokia) ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR) ನಿಧಿಯ ಭಾಗವಾಗಿ ಕಂಪನಿಯು ಸೆಂಟರ್ ಆಫ್ ಎಕ್ಸ್ಲೆನ್ಸ್ ನೌಕರರಿಗಾಗಿ ಮೂಲಸೌಕರ್ಯ, ಉಪಕರಣಗಳು ಮತ್ತು ತರಬೇತಿಯಲ್ಲಿ ಅಧಿಕ ಹೂಡಿಕೆ ಮಾಡಲು ನಿರ್ಧರಿಸಿದೆ. ಇದರಿಂದ ಒಂದು ಲಕ್ಷಕ್ಕೂ ಅಧಿಕ ಮಂದಿಗೆ ಉದ್ಯೋಗ ಅನುಕೂಲ ದೊರೆಯಲಿದೆ.
ಪ್ರಧಾನಮಂತ್ರಿಯವರ ಡಿಜಿಟಲ್ ಭಾರತ್ನ ದೂರದೃಷ್ಟಿಗೆ ಪೂರಕವಾದ ಯೋಜನೆ ಇದಾಗಿದೆ. ಟೆಲಿಕಾಂ ತಂತ್ರಜ್ಞಾನಗಳಲ್ಲಿ ಹೊಸತನಕ್ಕೆ ತುಡಿಯುವ ನೋಕಿಯಾ (Nokia) ಮುಂಚೂಣಿಯಲ್ಲಿದೆ. 5G ವ್ಯವಸ್ಥೆಯನ್ನು ನಿರ್ಮಿಸಲು ಸಹಾಯ ಮಾಡಲು ತಾಂತ್ರಿಕವಾಗಿ ನುರಿತ ಮಾನವಶಕ್ತಿ ಅಭಿವೃದ್ಧಿಪಡಿಸಲು ಹೂಡಿಕೆ ಮಾಡಲಾಗುತ್ತಿದೆ ಎಂದು ನೋಕಿಯಾ ಇಂಡಿಯಾದ ಮುಖ್ಯ ಮಾರ್ಕೆಟಿಂಗ್ ಅಧಿಕಾರಿ ಅಮಿತ್ ಮಾರ್ವಾಹ್ ತಿಳಿಸಿದರು.
Nokia ಮೂಲಸೌಕರ್ಯ, ಉಪಕರಣಗಳು ಮತ್ತು ತರಬೇತಿಯಲ್ಲಿ ಹೂಡಿಕೆ ಮಾಡಿದೆ. ಈ ಕೇಂದ್ರವನ್ನು ಗುಜರಾತ್ನ ಕಾರ್ಮಿಕ ಹಾಗೂ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಸಚಿವ ಬಲ್ವಂತಸಿಂಗ್ ರಜಪೂತ್ ಉದ್ಘಾಟಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications