IRCTC ನೇಮಕಾತಿ: ರೈಲ್ವೆ ವ್ಯಾಪ್ತಿಯಲ್ಲಿ ಉದ್ಯೋಗವಕಾಶ, ಭರ್ಜರಿ ವೇತನ ವಿವರ
ಬೆಂಗಳೂರು, ಜುಲೈ 24: ಭಾರತೀಯ ರೈಲ್ವೆ ಆಹಾರ ಪೂರೈಕೆ ಮತ್ತು ಯೋಜಿತ ಪ್ರವಾಸ (IRCTC) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ನೇಮಕಾತಿಯು ಮೂರು ವರ್ಷದ ಅವಧಿಗೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬೇಕಿದೆ.
ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಮ್ ಕಾರ್ಪೊರೇಷನ್ (IRCTC) ನಲ್ಲಿ ಗ್ರೂಪ್ ಜನರಲ್ ಮ್ಯಾನೇಜರ್/ಐಟಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಯ್ಕೆಯಾದಲ್ಲಿ ಅವರಿಗೆ ರೈಲ್ವೆ ವಲಯ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಅವಕಾಶ ಲಭಿಸಲಿದೆ.

ಅರ್ಜಿ ಸಲ್ಲಿಕೆಗೂ ಮೊದಲು ಯಾರು ಅರ್ಹರು, ಗರಿಷ್ಠ ವಯಸ್ಸು, ವೇತನ, ಪೋಸ್ಟಿಂಗ್, ಅರ್ಜಿ ಸಲ್ಲಿಕೆ ಸೇರಿದಂತೆ ವಿವಿಧ ಮಾಹಿತಿ ಇಲ್ಲಿ ತಿಳಿಯಿರಿ.
ಹುದ್ದೆ ಹೆಸರು: ಗ್ರೂಪ್ ಜನರಲ್ ಮ್ಯಾನೇಜರ್/ಐಟಿ ಹುದ್ದೆಗೆ
ಒಟ್ಟು ಹುದ್ದೆ: ಒಂದು
ಪೋಸ್ಟಿಂಗ್: ನವದೆಹಲಿ
ಮಾಸಿಕ ವೇತನ: ರೂ.37400 ರಿಂದ 67000 ರೂ.
ಅರ್ಜಿ ಸಲ್ಲಿಕೆ ಕೊನೆ ದಿನ: 10 ಆಗಸ್ಟ್ 2024
ವಿದ್ಯಾರ್ಹತೆ ಮಾಹಿತಿ
IRCTC ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸಬೇಕಾದ ಅಭ್ಯರ್ಥಿಗಳು ಹುದ್ದೆಗೆ ಅಗತ್ಯ ವಿದ್ಯಾರ್ಹತೆಗಳನ್ನು ಹೊಂದಿರಬೇಕಿದೆ. ಅಭ್ಯರ್ಥಿಗಳು ಮಾಹಿತಿ ತಂತ್ರಜ್ಞಾನ (ಐಟಿ) ಮಾನ್ಯತೆ ಹೊಂದಿರುವ ಅಧಿಕಾರಿಗಳಾಗಿರಬೇಕು. ಇವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ವಯೋಮಿತಿ ವಿವರ
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಗರಿಷ್ಠ ವಯಸ್ಸು 55 ವರ್ಷಗಳನ್ನು ದಾಟಿರಬಾರದು. 03 ವರ್ಷಗಳ ಆರಂಭಿಕ ಅವಧಿಗೆ ಡೆಪ್ಯುಟೇಶನ್ ಆಧಾರದ ಮೇಲೆ ನೇಮಕಾತಿ ನಡೆಯಲಿದೆ ಎಂದು IRCTC ನೇಮಕಾತಿ ಅಧಿಸೂಚನೆ ತಿಳಿಸಿದೆ.
ಅನುಭವಿ ಅಭ್ಯರ್ಥಿಗಳಿಗೆ ಆದ್ಯತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ವಾಣಿಜ್ಯ ವಿಭಾಗದಲ್ಲಿ ಅನುಭವ ಹೊಂದಿರಬೇಕು. ಈ ರಂಗದಲ್ಲಿ ಹಲವು ವರ್ಷಗಳ ಅನುಭವವನ್ನು ಹೊಂದಿರಬೇಕು ಮತ್ತು ಅಗತ್ಯಕ್ಕೆ ಅನುಗುಣವಾಗಿ ನಿರ್ದಿಷ್ಟ ಪ್ರದೇಶಗಳಲ್ಲಿ ಅಧಿಕಾರಿಯ ಅನುಭವದ ಸ್ವರೂಪವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪೋಸ್ಟಿಂಗ್, ಮಾಸಿಕ ವೇತನ
IRCTC ಈ ಹುದ್ದೆಗೆ ಆಯ್ಕೆ ಆಗುವವರಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುವುದು. ಅವರಿಗೆ ಮಾಸಿಕ ರೂ.37400ರಿಂದ 67000 ರೂ.ವರೆಗೆ ನೀಡಲಾಗುವುದು (ಆರನೇ ವೇತನ ಆಯೋಗಡಿ GP-10000 ರೂ.ಸಿಗಲಿದೆ).
ಅರ್ಹ ಅಭ್ಯರ್ಥಿಗಳು ಈ ಕೂಲಡೇ ಅಗತ್ಯ ದಾಖಲೆಗಳ ಸಹಿತ ನಿರ್ದಿಷ್ಟಪಡಿಸಿದ ಇಮೇಲ್ ವಿಳಾಸಕ್ಕೆ ಸ್ಕ್ಯಾನ್ ಮಾಡಿದ ಪ್ರತಿಯನ್ನು ಇಮೇಲ್ ([email protected]) ಮೂಲಕ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications