ಜಲ ಜೀವನ್ ಮಿಷನ್: ಸಿಬ್ಬಂದಿ ಸಂಭಾವನೆ ಪರಿಷ್ಕರಣೆ
ಬೆಂಗಳೂರು, ಏಪ್ರಿಲ್ 16: ಕರ್ನಾಟಕ ಸರ್ಕಾರ ಜಲ ಜೀವನ್ ಮಿಷನ್, ಸ್ವಚ್ಚ ಭಾರತ ಮಿಷನ್ (ಗ್ರಾ) ಮತ್ತು WQMS ಶಾಖೆ ಅಡಿ ಗುತ್ತಿಗೆ/ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಮಾಸಿಕ ಸಂಭಾವನೆಯನ್ನು ಪರಿಷ್ಕರಿಸಿರುವ ಕುರಿತು ಆದೇಶವನ್ನು ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ನೀಡಿದ ಪತ್ರವನ್ನು ಉಲ್ಲೇಖಿಸಿ ಈ ಆದೇಶವನ್ನು ಹೊರಡಿಸಲಾಗಿದೆ.
ಈ ಕುರಿತು ನಿರ್ದೇಶಕರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರು ಆದೇಶ ಹೊರಡಿಸಿದ್ದು, ಎಲ್ಲಾ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಲಾಗಿದೆ.

ಆದೇಶದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿಯಲ್ಲಿ ಜಲ ಜೀವನ್ ಮಿಷನ್, ಸ್ವಚ್ಚ ಭಾರತ ಮಿಷನ್ (ಗ್ರಾ) ಯೋಜನೆಗಳಡಿ ಜಿಲ್ಲಾ ಮಟ್ಟದಲ್ಲಿ ಮತ್ತು WQMS ಶಾಖೆ ಅಡಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪ್ರಯೋಗಾಲಯಗಳಲ್ಲಿ ಹಾಗೂ ಕೇಂದ್ರ ಕಛೇರಿಯಲ್ಲಿ ಗುತ್ತಿಗೆ/ ಹೊರ ಗುತ್ತಿಗೆ ಆಧಾರದ ಮೇಲೆ ಮಾನವ ಸಂಪನ್ಮೂಲ ಸಂಸ್ಥೆಗಳ ಮೂಲಕ ಸಮಾಲೋಚಕರುಗಳು/ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುತ್ತಾರೆ.
ಸದರಿ ಸಿಬ್ಬಂದಿಗಳಿಗೆ ಕಳೆದ ಮೂರು ವರ್ಷಗಳಿಂದ ಮಾಸಿಕ ಸೇವಾ ಶುಲ್ಕ ಪಾವತಿ ಪರಿಷ್ಕರಣೆಯಾಗಿರುವುದಿಲ್ಲವೆಂದು, ಮಾಸಿಕ ಸೇವಾ ಶುಲ್ಕ ಪರಿಷ್ಕರಿಸಲು ಮನವಿ ಪತ್ರಗಳನ್ನು ಸಲ್ಲಿಸಿರುತ್ತಾರೆ. ಮುಂದುವರೆದು, ಸದರಿ ಮನವಿಗಳನ್ನು ಪರಿಶೀಲಿಸಲಾಗಿ, ಪ್ರಸ್ತುತ ಎಲ್ಲಾ ಜಿಲ್ಲಾ ಪಂಚಾಯಿತಿಗಳಲ್ಲಿ ಗುತ್ತಿಗೆ/ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಮಾಲೋಚಕರುಗಳ/ ಸಿಬ್ಬಂದಿಗಳ ಮಾಸಿಕ ಸೇವಾ ಶುಲ್ಕಗಳಲ್ಲಿ ವ್ಯತ್ಯಾಸಗಳಿರುತ್ತವೆ.
ಸದರಿ ವ್ಯತ್ಯಾಸಗಳನ್ನು ಸರಿಪಡಿಸಲು ಸಮಗ್ರವಾಗಿ ವಿವಿಧ ಹುದ್ದೆಗಳ ಮೂಲ ಮಾಸಿಕ ಶುಲ್ಕವನ್ನು ಹುದ್ದೆಯ ಸ್ವರೂಪ ಹಾಗೂ ವಿದ್ಯಾರ್ಹತೆ/ ಸಮನಾಂತರ ವಿದ್ಯಾರ್ಹತೆ ಆಧಾರದ ಮೇಲೆ ಪರಿಷ್ಕರಿಸಿ ನಿಗದಿಪಡಿಸಲಾಗಿದೆ. ಮುಂದುವರೆದು ಆ ಸೇವೆಯಲ್ಲಿ ಇಲಾಖೆಯಲ್ಲಿ ಸಲ್ಲಿಸಿರುವ ಸೇವಾ ಅವಧಿ ಆಧರಿಸಿ ವಾರ್ಷಿಕ ಶೇಕಡಾವಾರು ಹೆಚ್ಚಳವನ್ನು ನಿಗದಿಪಡಿಸಿ ಅದರಂತೆ ಮಾಸಿಕ ಸೇವಾಶುಲ್ಕವನ್ನು ಪರಿಷ್ಕರಿಸಲಾಗಿದೆ.
ಪರಿಷ್ಕೃತ ಸೇವಾಶುಲ್ಕದ ವಿವರಗಳನ್ನು ದಿನಾಂಕ 01.04.2025 ರಿಂದ ಜಾರಿಗೆ ಬರುವಂತೆ ಪರಿಷ್ಕೃತ ಮಾಸಿಕ ಸೇವಾ ಶುಲ್ಕವನ್ನು ಸಂಬಂಧಿಸಿದ ಗುತ್ತಿಗೆ/ ಹೊರಗುತ್ತಿಗೆ ಸೇವಾ ಏಜೆನ್ಸಿಗಳ ಮೂಲಕ ಪಾವತಿಸಲು ಆದೇಶಿಸಿದೆ.
ಷರತ್ತು ಮತ್ತು ನಿಭಂದನೆಗಳು
* ಇಲಾಖೆಯಡಿಯಲ್ಲಿ ಜಲ ಜೀವನ್ ಮಿಷನ್, ಸ್ವಚ್ಚ ಭಾರತ ಮಿಷನ್ (ಗ್ರಾ) ಮತ್ತು WOMS ಶಾಖೆ ಅಡಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪ್ರಯೋಗಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ/ ಸಮಾಲೋಚಕರ ಸೇವೆಯು ಸಂಪೂರ್ಣವಾಗಿ ಹೊರಗುತ್ತಿಗೆ ಆಧಾರದಲ್ಲಿದ್ದು, ಸೇವೆ ಖಾಯಂ ಗೊಳಿಸಲು ಯಾವುದೇ ಅವಕಾಶವಿರುವುದಿಲ್ಲ.
* ಸಿಬ್ಬಂದಿಗಳ ಸೇವೆಯನ್ನು ಸೇವಾ ಏಜೆನ್ಸಿಗಳ ಮೂಲಕ ಪಡೆಯಲಾಗಿದ್ದು, ಸಿಬ್ಬಂದಿಗಳ ಸೇವೆಗೆ ಸಂಬಂಧಿಸಿದಂತೆ ಯಾವುದೇ ಹಕ್ಕು ಮತ್ತು ಬಾಧ್ಯತೆಗಳಿಗೆ ಸಂಬಂಧಿಸಿದ ಏಜೆನ್ಸಿಯವರೆ ಜವಾಬ್ದಾರರಾಗಿದ್ದು, ಇಲಾಖೆ ಜವಾಬ್ದಾರಿಯಾಗಿರುವುದಿಲ್ಲ.
* ಸಂಬಂಧಿಸಿದ ಸೇವಾ ಏಜೆನ್ಸಿಯವರು ಶಾಸನಬದ್ಧ ಕಟಾವಣೆಗಳ ನಿಗದಿತ ಮರುಪಾವತಿ ಬಗ್ಗೆ ಖಾತರಿ ಪಡಿಸಿಕೊಳ್ಳುವುದು ಮತ್ತು ಈ ಕುರಿತಂತೆ ಯಾವುದೇ ವ್ಯತ್ಯಾಸಗಳಿಗೆ ಕೇಂದ್ರ ಕಛೇರಿಯು ಜವಾಬ್ದಾರಿಯಾಗಿರುವುದಿಲ್ಲ.
* ಪ್ರಸ್ತುತ ನಿಗದಿಪಡಿಸಿದ ಸೇವಾ ಶುಲ್ಕಕ್ಕಿಂತ ಹೆಚ್ಚುವರಿಯಾಗಿ ಯಾವುದೇ ಸಂಭಾವನೆ ಪಾವತಿಸತಕ್ಕದ್ದಲ್ಲ ಹಾಗೂ ಜಿಲ್ಲಾ ಮಟ್ಟದಲ್ಲಿ ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡತಕ್ಕದ್ದಲ್ಲ.
* ಯಾವುದೇ ಸಿಬ್ಬಂದಿ/ ಸಮಾಲೋಚಕರು ನ್ಯಾಯಾಲಯದ ಪ್ರಕರಣಗಳನ್ನು ಎದುರಿಸುತ್ತಿದ್ದಲ್ಲಿ ಅಂತಹ ಸಮಾಲೋಚಕರುಗಳ ಸೇವಾ ಶುಲ್ಕ ಪರಿಷ್ಕರಣೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದನ್ವಯ ಸಂಬಂಧಿಸಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಕಾರ್ಯಪಾಲಕ ಅಭಿಯಂತರರು ಜಿಲ್ಲಾ ಹಂತದಲ್ಲಿ ನಿಯಮಾನುಸಾರ ಕ್ರಮ ವಹಿಸುವುದು.
* ಸಮಾಲೋಚಕರು/ ಸಿಬ್ಬಂದಿಗಳ ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಿದ ಮೂಲ ಮಾಸಿಕ ಸೇವಾ ಶುಲ್ಕ, ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ಅನುಭವದ ಆಧಾರದ ಮೇಲೆ ಶೇಕಡಾವಾರು ವಾರ್ಷಿಕ ಪರಿಷ್ಕರಣೆಯ ವಿವರಗಳನ್ನು ಲಗತ್ತಿಸಲಾಗಿದೆ.
* ಈಗಾಗಲೇ ತಮ್ಮ ಹಂತದಲ್ಲಿ ಸೇವಾ ಶುಲ್ಕ ಪರಿಷ್ಕರಿಸಿದ್ದಲ್ಲಿ, ಸದರಿ ಸೇವಾ ಶುಲ್ಕವನ್ನು ನಿಗದಿಪಡಿಸಿದ ಮೂಲ ಸೇವಾಶುಲ್ಕಕ್ಕೆ ಸರಿಹೊಂದುವಂತೆ ಪಾವತಿಸುವುದು, ಒಂದು ವೇಳೆ ಈಗಾಗಲೇ ಪಾವತಿಸುತ್ತಿರುವ ಸೇವಾಶುಲ್ಕವು ಪರಿಷ್ಕರಿಸಿದ ಶುಲ್ಕಕ್ಕಿಂತ ಹೆಚ್ಚಾಗಿದ್ದಲ್ಲಿ, ಸಂಬಂಧಿಸಿದ ಸಿಬ್ಬಂದಿಯು ನಿಗದಿಪಡಿಸಿದ ಹಂತವನ್ನು ತಲುಪುವವರೆಗೆ ಸದರಿ ಸೇವಾ ಶುಲ್ಕವನ್ನೇ ಮುಂದುವರೆಸಿ ಪಾವತಿಸಲು ಕ್ರಮವಹಿಸುವುದು.
-
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications