Job Alert: ಏಕಲವ್ಯ ಶಾಲೆಗಳ 4,000 ಬೋಧಕ, ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ- ಮಾಹಿತಿ, ವಿವರ ಪಡೆಯಿರಿ
ನವದೆಹಲಿ, ಜುಲೈ 12: ಬುಡಕಟ್ಟು ವಿದ್ಯಾರ್ಥಿಗಳಿಗಾಗಿ ತೆರೆಯಲಾಗಿರುವ 401 ಏಕಲವ್ಯ ಮಾದರಿ ವಸತಿ ಶಾಲೆಗಳ ಹುದ್ದೆಗಳಿಗೆ ಬುಡಕಟ್ಟು ವಿದ್ಯಾರ್ಥಿಗಳ ರಾಷ್ಟ್ರೀಯ ಶಿಕ್ಷಣ ಸೊಸೈಟಿ (NESTS) ಅರ್ಜಿ ಆಹ್ವಾನಿಸಿದೆ. ಇದರಲ್ಲಿ 4,000 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ತುಂಬಲಾಗುತ್ತಿದೆ. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಏಕಲವ್ಯ ಮಾದರಿ ವಸತಿ ಶಾಲೆಗಳ ಸಿಬ್ಬಂದಿ ಆಯ್ಕೆ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.
ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಸ್ಥಾಪಿಸಲಾದ ಸ್ವಾಯತ್ತ ಸಂಸ್ಥೆ NESTS ವೆಬ್ಸೈಟ್ನಲ್ಲಿ ಈ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಪ್ರಾಂಶುಪಾಲರು, ಸ್ನಾತಕೋತ್ತರ ಶಿಕ್ಷಕರು, ಅಕೌಂಟೆಂಟ್, ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ ಮತ್ತು ಲ್ಯಾಬ್ ಅಟೆಂಡೆಂಟ್ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ, ಕೇಂದ್ರವು ಎನ್ಇಎಸ್ಟಿಎಸ್ ಮೂಲಕ ಇಎಂಆರ್ಎಸ್ ಸಿಬ್ಬಂದಿಯ ನೇರ ನೇಮಕಾತಿಗೆ ಅವಕಾಶ ನೀಡಿದೆ ಎಂದು ಘೋಷಿಸಿದ್ದರು. ಇದನ್ನು ಕಳೆದ ವರ್ಷದವರೆಗೆ ಆಯಾ ರಾಜ್ಯಗಳು ನಡೆಸುತ್ತಿದ್ದವು.
ದೇಶದಲ್ಲಿ ಒಟ್ಟು 750 ಏಕಲವ್ಯ ವಸತಿ ಶಾಲೆಗಳನ್ನು ಸ್ಥಾಪಿಸಲು ಮತ್ತು ಈ ಶಾಲೆಗಳಲ್ಲಿ 38,000 ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಕೇಂದ್ರ ಸರ್ಕಾರ ಯೋಜಿಸಿದೆ.
ವೆಬ್ಸೈಟ್ ಪ್ರಕಾರ, ಈಗ ಖಾಲಿ ಇರುವ 4,062 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದರಲ್ಲಿ ಪ್ರಾಂಶುಪಾಲರ 303 ಮತ್ತು ಪಿಜಿಟಿ ಶಿಕ್ಷಕರ 2,266 ಹುದ್ದೆಗಳು ಸೇರಿವೆ. ಪ್ರಾಂಶುಪಾಲರ 303 ಹುದ್ದೆಗಳಲ್ಲಿ 81 ಇತರೆ ಹಿಂದುಳಿದ ಜಾತಿ, 45 ಎಸ್ಸಿ ಮತ್ತು 22 ಎಸ್ಟಿಗಳಿಗೆ ಮೀಸಲಾಗಿದೆ.
180 ಭಾಷಾ ಶಿಕ್ಷಕರ ಹುದ್ದೆಗಳೂ ಭರ್ತಿಯಾಗಲಿದ್ದು, ಇದರಲ್ಲಿ ಸಂಸ್ಕೃತ ಶಿಕ್ಷಕರ 97, ತೆಲುಗು 37 ಮತ್ತು ಒಡಿಯ 20 ಹುದ್ದೆಗಳು ಸೇರಿವೆ.

ಎಲ್ಲಾ ವಿಭಾಗಗಳ ಮಹಿಳಾ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಇಎಂಆರ್ಎಸ್ ಕಾಯಂ ಸಿಬ್ಬಂದಿಗೂ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಇಲ್ಲಿಯವರೆಗೆ 690 ಏಕಲವ್ಯ ವಸತಿ ಶಾಲೆಗಳು ಮಂಜೂರಾಗಿದ್ದು, 401 ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ, ಈ ವಸತಿ ಶಾಲೆಗಳಲ್ಲಿ 4,000 ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪರಿಶಿಷ್ಟ ಪಂಗಡದ ವರ್ಗದಲ್ಲಿ VI ನೇ ತರಗತಿಯಿಂದ XII ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಏಕಲವ್ಯ ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದೆ.
ಏಕಲವ್ಯ ವಸತಿ ಶಾಲೆಗಳ ಹುಡುಗರು ಮತ್ತು ಹುಡುಗಿಯರಿಗೆ ಪ್ರತ್ಯೇಕ ಹಾಸ್ಟೆಲ್ಗಳು, ಶಿಕ್ಷಕರಿಗೆ ವಸತಿ, ಮೆಸ್ ಸೌಲಭ್ಯ, ಆಟದ ಮೈದಾನ ಮತ್ತು ಇತರ ಎಲ್ಲಾ ಸೌಕರ್ಯಗಳು ಇರುತ್ತವೆ . ಪ್ರತಿಭಾವಂತ ಮಕ್ಕಳಿಗೆ VI ನೇ ತರಗತಿಯಿಂದ XII ವರೆಗೆ ಉಚಿತ ವಸತಿ ಗುಣಮಟ್ಟದ ಶಿಕ್ಷಣವನ್ನು ಒದಗಿಸಲಾಗುತ್ತದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications