ಜೂ.24ರಂದು ಬೆಂಗ್ಳೂರಿನ ಏಟ್ರಿಯಾ ಕಾಲೇಜಿನಲ್ಲಿ ಉದ್ಯೋಗ ಮೇಳ
ಬೆಂಗಳೂರು, ಜೂನ್ 20 : ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರ ಮಾರ್ಗದರ್ಶನದಲ್ಲಿ ಬೆಂಗಳೂರಿನ ಆನಂದ ನಗರದಲ್ಲಿ ಇದೇ ಜೂನ್ 24ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಬೆಂಗಳೂರಿನ ಆನಂದ ನಗರದ ಏಟ್ರಿಯಾ ಕಾಲೇಜು ಆವರಣದಲ್ಲಿ ಬೆಳಗ್ಗೆ 09 ರಿಂದ ಸಂಜೆ 4 ಗಂಟೆ ವರೆಗೆ ಉದ್ಯೋಗ ಮೇಳ ನಡೆಯಲಿದ್ದು, ಮೇಳದಲ್ಲಿ ಸುಮಾರು 80 ಉದ್ಯೋಗ ನೀಡುವ ಕಂಪೆನಿಗಳು ಭಾಗವಹಿಸಲಿವೆ.

ಅರ್ಧದಲ್ಲಿಯೇ ಶಿಕ್ಷಣ ಮೊಟಕುಗೊಳಿಸಿದವರು, ಎಸ್ಎಸ್ಎಲ್ಸಿ, ಡಿಪ್ಲಮೋ, ಬಿಇ, ಬಿಟೆಕ್, ಐಟಿಐ, ಪದವಿ ಮುಗಿಸಿದ ಯುವಕ ಮತ್ತು ಯುವತಿಯರು ತಮ್ಮ ಮೂಲ ದಾಖಲಾತಿಗಳೊಂದಿಗೆ ಆಧಾರ್ ಕಾರ್ಡ್ ಪ್ರತಿ ಸಮೇತ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ನಿಮ್ಮ ಮೊಬೈಲ್ ನಿಂದ ಈ ಟೋಲ್ ಫ್ರೀ ನಂಬರಿಗೆ 7878704433 ಮಿಸ್ ಕಾಲ್ ಕೊಡುವ ಮೂಲಕ ನಿಮ್ಮ ಹೆಸರನ್ನು ನೋಂದಾಯಿಸತಕ್ಕದ್ದು.












Click it and Unblock the Notifications