ಬೆಂಗಳೂರಿನಲ್ಲಿ ಜುಲೈ 15ರಂದು ಉದ್ಯೋಗ ಮೇಳ
ಬೆಂಗಳೂರು, ಜುಲೈ 13 : ಬೆಂಗಳೂರು ಗ್ರಾಮಾಂತರ ಉದ್ಯೋಗ ವಿನಿಮಯ ಕಚೇರಿ ಜುಲೈ 15ರಂದು ಉದ್ಯೋಗ ಮೇಳವನ್ನು ಆಯೋಜಿಸಿದೆ. 25ಕ್ಕೂ ಹೆಚ್ಚು ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ.
ಹೊಸೂರು ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ (ಐಟಿಐ) ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ವಿನಿಮಯ ಕಚೇರಿ ಉದ್ಯೋಗ ಮೇಳ ಆಯೋಜಿಸಿದ್ದು, ಬೆಳಗ್ಗೆ 10 ಗಂಟೆಗೆ ಮೇಳ ಆರಂಭವಾಗಲಿದೆ. [ಕೊಪ್ಪಳದಲ್ಲಿ ಜುಲೈ 16ರಂದು ಕ್ಯಾಂಪಸ್ ಸಂದರ್ಶನ]

25ಕ್ಕೂ ಅಧಿಕ ಖಾಸಗಿ ಸಂಸ್ಥೆಗಳು ಈ ಮೇಳದಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಿದೆ. ಅರ್ಧದಲ್ಲಿಯೇ ಶಿಕ್ಷಣ ಮೊಟಕುಗೊಳಿಸಿದವರು, ಎಸ್ಎಸ್ಎಲ್ಸಿ ಅನುತ್ತೀರ್ಣರಾದವರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. [ಎಸ್ ಬಿಐನಲ್ಲಿ ವಿಶೇಷ ಅಧಿಕಾರಿ ಹುದ್ದೆಗಳಿವೆ, ಅರ್ಜಿ ಹಾಕಿ]
ಪಿಯುಸಿ, ಐಟಿಐ, ಡಿಪ್ಲೋಮಾ, ಪದವೀಧರ ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಸ್ವ-ವಿವರಗಳನ್ನು ಹೊಂದಿರುವ ಅರ್ಜಿಯ ಜೊತೆ ಉದ್ಯೋಗ ಮೇಳಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22289668.
ಉದ್ಯೋಗವಕಾಶಗಳು
* ದಿ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು ಕಿರಿಯ ಸಹಾಯಕ ಗ್ರೇಡ್-2 ಮತ್ತು ಜವಾನರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಕೊನೆಯ ದಿನಾಂಕ 22 ಜುಲೈ 2016. [ವಿವರಗಳು ಇಲ್ಲಿವೆ]
* ಬಳ್ಳಾರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಅಂತಿಮ ದಿನಾಂಕ 2016ರ ಜುಲೈ 21. [ವಿವರಗಳಿಗೆ ಕ್ಲಿಕ್ ಮಾಡಿ]
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications