ಹಿರಿಯೂರಿನಲ್ಲಿ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿಗಳನ್ನು ನೆನೆದು ಕಣ್ಣೀರಿಟ್ಟ ಟಿ.ಡಿ.ಶ್ರೀನಿವಾಸ್
ಚಿತ್ರದುರ್ಗ, ಡಿಸೆಂಬರ್, 2: ಜಿಲ್ಲೆಯ ಹಿರಿಯೂರು ನಗರದ ನೆಹರೂ ಮೈದಾನದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಡೆಯುತ್ತಿರುವ ಉದ್ಯೋಗ ಮೇಳಕ್ಕೆ ಉದ್ಯೋಗ ಆಕಾಂಕ್ಷಿಗಳು ಹರಿದು ಬಂದಿದ್ದಾರೆ. ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಹಾಗೂ ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಡಿ.ಟಿ. ಶ್ರೀನಿವಾಸ್ ಅವರ ನೇತೃತ್ವದಲ್ಲಿ ಈ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಈ ಮೇಳದಲ್ಲಿ ಸುಮಾರು 60ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿವೆ.
ಇನ್ನು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಿ.ಟಿ.ಶ್ರೀನಿವಾಸ್ ಅವರು ಈ ಹಿಂದೆ ಹಿರಿಯೂರು ನಗರದಲ್ಲಿ ಎರಡು ಬಾರಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿತ್ತು. ಆಗ ಸಾಕಷ್ಟು ನಿರುದ್ಯೋಗ ಯುವಕ, ಯುವತಿಯರು ಭಾಗವಹಿಸಿ ಉದ್ಯೋಗ ಪಡೆದುಕೊಂಡಿದ್ದರು. ಈ ತಾಲೂಕಿನ ಯುವಕ, ಯುವತಿಯರಿಗೆ ಉದ್ಯೋಗ ನೀಡಬೇಕು ಎನ್ನುವ ದೃಷ್ಟಿಯಿಂದ, ಈ ಉದ್ಯೋಗ ಮೇಳಗಳನ್ನು ಆಯೋಜನೆ ಮಾಡಲಾಗಿದೆ. ಈ ಸುವರ್ಣಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಪೋಷಕರ ಕನಸನ್ನು ಈಡೇರಿಸುವಂತೆ ಮನವಿ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ನೌಕರಿ ಪಡೆದುಕೊಳ್ಳುವುದು ಸವಾಲಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಳ್ಳುವ ಮೂಲಕ ಜೀವನ ನಿರ್ವಹಣೆ ಮಾಡಿಕೊಳ್ಳಬೇಕು. ಪ್ರತಿಯೊಂದು ಮನೆಯಲ್ಲೂ ತಂದೆ, ತಾಯಿಗಳು ಮಕ್ಕಳ ಬಗ್ಗೆ ಕನಸು ಕಟ್ಟಿಕೊಂಡಿದ್ದಾರೆ. ಅವರ ಆಸೆಯನ್ನು ಮಕ್ಕಳು ಇಂತಹ ಉನ್ನತ ಮಟ್ಟದ ಕಂಪನಿಯಲ್ಲಿ ಕೆಲಸ ಮಾಡುವ ಮೂಲಕ ನೆರವೇರಿಸಬೇಕು ಎಂದು ಹೇಳಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು
ಇಂದಿನ ವಿದ್ಯಾರ್ಥಿಗಳೇ ಮುಂದಿನ ಪೋಷಕರು, ಹಾಗಾಗಿ ಮುಂದೆ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರ ಭವಿಷ್ಯ ರೂಪಿಸಿಸಬೇಕು ಎಂದು ತಿಳಿಸಿದರು. ನಮ್ಮ ಮಾವನ ಆಸೆಯಂತೆ ಇಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ನಾವು ಮತ್ತು ನಮ್ಮ ಶಾಸಕರು ಕ್ಷೇತ್ರದ ಜನತೆಯೊಂದಿಗೆ ಸದಾ ಜೊತೆಗೆ ಇರುತ್ತೇವೆ ಎಂದು ಹೇಳಿದರು. ಇನ್ನು ಇದೇ ಸಂದರ್ಭದಲ್ಲಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಡಿ.ಟಿ. ಶ್ರೀನಿವಾಸ್ ಅವರು ವೇದಿಕೆಯಲ್ಲಿ ನಿರುದ್ಯೋಗ ಯುವಕ, ಯುವತಿಯರನ್ನು ನೆನೆದು ಕಣ್ಣೀರಿಟ್ಟ ಘಟನೆ ಕೂಡ ನಡೆಯಿತು.
ಈ ಉದ್ಯೋಗ ಮೇಳದಲ್ಲಿ ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು, ಹೊಳಲ್ಕೆರೆ, ಹೊಸದುರ್ಗ, ಶಿರಾ, ಸೇರಿದಂತೆ ಮತ್ತಿತರರ ಭಾಗಗಳಲ್ಲಿಂದ ಆಕಾಂಕ್ಷಿಗಳು ಭಾಗವಹಿಸಿದ್ದರು. ಸಂದರ್ಶನದ ಮೂಲಕ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನೂ ನೀಡಲಾಯಿತು.

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಜಬಿವುಲ್ಲಾ, ಸಮಾಜ ಸೇವಕಿ ಶಶಿಕಲಾ ರವಿಶಂಕರ್, ಡಿವೈಎಸ್ಪಿ ರೋಷನ್ ಜಮೀರ್, ಕೃಷಿಕ ಸಮಾಜದ ಅಧ್ಯಕ್ಷ ಎಚ್.ಆರ್. ತಿಮ್ಮಯ್ಯ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ರಾಜೇಶ್ವರಿ, ನಗರಸಭೆ ಸದಸ್ಯರಾದ ಸಣ್ಣಪ್ಪ, ಪಲ್ಲವ, ಬಾಲಕೃಷ್ಣ, ಕದ್ರ ಗಣೇಶ್, ಪ್ರಾಂಶುಪಾಲ ಧರಣೇಂದ್ರಯ್ಯ, ಆನಂದ ಶ್ರೇಷ್ಠಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications