ಶಿವಮೊಗ್ಗದಲ್ಲಿ ಡಿಸೆಂಬರ್ 28ರಂದು ಉದ್ಯೋಗ ಮೇಳ
ಬೆಂಗಳೂರು, ಡಿಸೆಂಬರ್ 25 : ಶಿವಮೊಗ್ಗದಲ್ಲಿ ಡಿಸೆಂಬರ್ 28ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 40ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ.
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯ ಮಿಷನ್, ಕೈಗಾರಿಕಾ ಮತ್ತು ಉದ್ಯೋಗ ಇಲಾಖೆ ವತಿಯಿಂದ ಡಿಸೆಂಬರ್ 28ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಳಗ್ಗೆ 9ರಿಂದ ನಗರದ ಎಟಿಎನ್ಸಿಸಿ ಕಾಲೇಜಿನಲ್ಲಿ ಮೇಳ ನಡೆಯಲಿದೆ.
ಆಟೋಮೊಬೈಲ್, ಬ್ಯಾಂಕಿಂಗ್, ರಿಟೇಲ್, ವಿಮೆ, ಗಾರ್ಮೆಂಟ್ಸ್, ಬಿ.ಪಿ.ಒ, ಭದ್ರತಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ರಾಜ್ಯದ ಸುಮಾರು 40ಕ್ಕೂ ಹೆಚ್ಚಿನ ಕಂಪನಿಗಳು ಇದರಲ್ಲಿ ಪಾಲ್ಗೊಳ್ಳಲಿವೆ.

ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾ ಪೂರೈಸಿರುವ ಜಿಲ್ಲೆಯ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. 1500 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಅಭ್ಯರ್ಥಿಗಳು ರೆಸ್ಯೂಮ್, ವಿದ್ಯಾರ್ಹತೆ ಪ್ರಮಾಣ ಪತ್ರಗಳ ಜೊತೆ ಆಗಮಿಸಬೇಕಿದೆ. ಎಟಿಎನ್ಸಿಸಿ ಕಾಲೇಜಿನಲ್ಲಿ ಹೆಸರು ನೋಂದಣಿ ಮಾಡಿಕೊಂಡು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
'ಈ ಹಿಂದೆ ಏರ್ಪಡಿಸಿದ ಉದ್ಯೋಗ ಮೇಳಗಳಲ್ಲಿನ ನ್ಯೂನತೆಗಳನ್ನು ಸರಿಪಡಿಸಿಕೊಂಡು ಮೇಳವನ್ನು ವ್ಯವಸ್ಥಿತವಾಗಿ ಏರ್ಪಡಿಸಲಾಗುವುದು. ಅಲ್ಲದೇ ಜಿಲ್ಲೆಯ ಕಾಲೇಜುಗಳಲ್ಲಿ ಎಂಪ್ಲಾಯ್ಮೆಂಟ್ ಕ್ಲಬ್ಗಳನ್ನು ರಚಿಸಲು ಉದ್ದೇಶಿಸಲಾಗಿದೆ' ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಹೇಳಿದ್ದಾರೆ.
ಈ ಕ್ಲಬ್ಗಳಲ್ಲಿ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿ ಅರ್ಹರಿಗೆ ಕೃಷಿ, ಕೈಗಾರಿಕೆ, ವ್ಯಾಪಾರ, ಸ್ವಯಂ ಉದ್ಯೋಗ, ಬ್ಯಾಂಕ್, ಸಾಲ-ಸೌಲಭ್ಯ, ಮಾರುಕಟ್ಟೆ ಮುಂತಾದ ವಿಷಯಗಳ ಕುರಿತು ತರಬೇತಿ ನೀಡಲಾಗುವುದು ತರಬೇತಿ ನೀಡಲಿವೆ.
-
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications