Job News: ವಿದೇಶದಲ್ಲಿ ಕೆಲಸ ಮಾಡಬೇಕೇ? ಇಲ್ಲಿದೆ ನೋಡಿ ಉತ್ತಮ ಅವಕಾಶ
Job News: ಇತ್ತೀಚಿನ ದಿನಗಳಲ್ಲಿ ಹಲವು ಕಂಪನಿಗಳು ಉದ್ಯೋಗವಕಾಶಗಳನ್ನು ಕಲ್ಪಿಸುತ್ತಲೇ ಇವೆ. ಇದೀಗ ಮಹಾರಾಷ್ಟ್ರ ಸರ್ಕಾರದ ಕೌಶಲ್ಯ, ಉದ್ಯೋಗ, ಉದ್ಯಮಶೀಲತೆ ಮತ್ತು ನಾವೀನ್ಯತೆ ಇಲಾಖೆ ಸೋಲಾಪುರ ಜಿಲ್ಲೆಯ ಅಭ್ಯರ್ಥಿಗಳಿಗೆ ಇಸ್ರೇಲ್ನಲ್ಲಿ ಉದ್ಯೋಗದ ಸುವರ್ಣಾವಕಾಶವನ್ನ ನೀಡಿದೆ. ಹಾಗಾದರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಆಸಕ್ತ ಅಭ್ಯರ್ಥಿಗಳು ಆದಷ್ಟು ಬೇಗ ಅರ್ಜಿ ಸಲ್ಲಿಸಬೇಕು. ಕೌಶಲ್ಯಾಭಿವೃದ್ಧಿ, ಉದ್ಯೋಗ ಮತ್ತು ಉದ್ಯಮಶೀಲತೆ ಸಹಾಯಕ ಆಯುಕ್ತೆ ಸಂಗೀತಾ ಖಂಡ್ರೆ ಈ ಮಾಹಿತಿಯನ್ನು ನೀಡಿದ್ದಾರೆ. ಮಿತ್ರ ಸಂಸ್ಥೆಯ ಮೂಲಕ ನಿರ್ಮಾಣ, ಆರೋಗ್ಯ ಮತ್ತು ಗೃಹ ಬೆಂಬಲ ಸೇವಾ ಕ್ಷೇತ್ರಗಳಲ್ಲಿ ಇಸ್ರೇಲ್ನಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗಗಳನ್ನು ಸೃಷ್ಟಿಸಲಾಗುತ್ತಿದೆ. ಈ ನೇಮಕಾತಿಯನ್ನು ವಿಶೇಷವಾಗಿ ಯುದ್ಧರಹಿತ ವಲಯ ಪ್ರದೇಶಗಳಿಗೆ ಮಾಡಲಾಗುತ್ತಿದೆ. ಮನೆ ಆಧಾರಿತ ಆರೋಗ್ಯ ರಕ್ಷಣಾ ಕ್ಷೇತ್ರದಲ್ಲಿ ಪರಿಣತಿ ಹೊಂದಿರುವವರಿಗೆ ಈ ಅವಕಾಶ ಇದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 25ರಿಂದ 45 ವರ್ಷದ ವಯೋಮಿತಿ ನಿಗದಿಪಡಿಸಲಾಗಿದೆ. ಈ ವಯಸ್ಸಿನಲ್ಲಿ ಇರುವವರು ಹಾಗೂ ವಿದೇಶದಲ್ಲಿ ನೆಲೆಸಲು ಬಯಸುವವರು ಈ ಉದ್ಯೋಗಕ್ಕೆ ಪ್ರಯತ್ನಿಸಬಹುದಾಗಿದೆ. ವಿದ್ಯಾರ್ಹತೆ ವಿಚಾರಕ್ಕೆ ಬಂದರೆ, ದೇಶೀಯ ಬೆಂಬಲ ಸೇವೆಗಳಲ್ಲಿ ಪರಿಣತಿ ಹೊಂದಿರುವ ಅಭ್ಯರ್ಥಿಗಳು ದೇಶದ ನಿಯಂತ್ರಣ ಪ್ರಾಧಿಕಾರಗಳಿಂದ ಮಾನ್ಯತೆ ಪಡೆದ 990 ಗಂಟೆಗಳ ಕೋರ್ಸ್ ವರ್ಕ್ ಪ್ರಮಾಣಪತ್ರವನ್ನು ಪೂರ್ಣಗೊಳಿಸಿರಬೇಕು.
ಇನ್ನು ನರ್ಸಿಂಗ್, ಫಿಸಿಯೋಥೆರಪಿ, ನರ್ಸ್ ಅಸಿಸ್ಟೆಂಟ್, ಜಿಡಿಎ, ಎಎನ್ಎಂ, ಜಿಎನ್ಎಂ ಅಥವಾ ಬಿಎಸ್ಸಿ ನರ್ಸಿಂಗ್ ಕ್ಷೇತ್ರಗಳಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳು ಅರ್ಹರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಸಕ್ತಅಭ್ಯರ್ಥಿಗಳು https://maharashtrainternational.com/ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ನೀವು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು.
ಉದ್ಯೋಗಕ್ಕೆ ಸಂಬಂಧಿಸಿದ ವಿವರವಾದ ಮಾಹಿತಿ ಈ ಪೋರ್ಟಲ್ನ ಇತ್ತೀಚಿನ ಉದ್ಯೋಗಗಳು ವಿಭಾಗದಲ್ಲಿ ಲಭ್ಯವಿದೆ. ಈ ಅವಕಾಶದ ಬಗ್ಗೆ ಸಾಧ್ಯ ಆದಷ್ಟು ಅರ್ಹ ಅಭ್ಯರ್ಥಿಗಳಿಗೆ ತಿಳಿಸುವಂತೆ ಸಂಬಂಧಪಟ್ಟ ವೈದ್ಯಕೀಯ ಕಾಲೇಜುಗಳು ಮತ್ತು ನರ್ಸಿಂಗ್ ಕಾಲೇಜುಗಳಿಗೆ ಮನವಿ ಮಾಡಲಾಗಿದೆ.
ಒಟ್ಟಿನಲ್ಲಿ ಇದೀಗ ಹಲವು ಕಂಪನಿಗಳು ಉದ್ಯೋಗವಕಾಶವನ್ನು ಕಲ್ಪಿಸುತ್ತಲೇ ಇವೆ. ಅದರಲ್ಲೂ ಇಂಜಿನಿಯರಿಂಗ್ ವಿಭಾಗಕ್ಕೆ ಸಂಬಂಧಿಸಿದಂತೆ ಉದ್ಯೋಗವಕಾಶಗಳು ತೆರೆದುಕೊಳ್ಳುತ್ತಲಿವೆ. ಇದರಿಂದ ಉದ್ಯೋಗ ಹುಡುಕಾಟದಲ್ಲಿದ್ದವರಿಗೆ ತುಂಬಾ ಸಹಾಯ ಆಗುತ್ತಲೇ ಇದೆ. ಇನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಹಲವು ಕಂಪನಿಗಳಲ್ಲಿ ದೊಡ್ಡ ಮಟ್ಟದಲ್ಲಿ ಬಹುದೊಡ್ಡ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎನ್ನುವ ಮಾಹಿತಿ ಇದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ












Click it and Unblock the Notifications