ಕೊಪ್ಪಳ, ಧಾರವಾಡದಲ್ಲಿ ಕೆಲಸ ಖಾಲಿ ಇದೆ, ವಿವರ
ಕೊಪ್ಪಳ, ಜನವರಿ 23; ಕೊಪ್ಪಳ ಮತ್ತು ಧಾರವಾಡದಲ್ಲಿ ವಿವಿಧ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳು ಸೇರಿದಂತೆ ವಿವರಗಳು ಇಲ್ಲಿವೆ.
ಧಾರವಾಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕಕ್ಕೆ 'ಮಿಷನ್ ಶಕ್ತಿ' ಯೋಜನೆಯಡಿಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಮಂಜೂರಾಗಿರುವ ಜಿಲ್ಲಾ ಮಿಷನ್ ಸಂಯೋಜಕರು, ಪ್ರಧಾನ ಮಂತ್ರಿ ಮಾತೃವಂದನ ಜಿಲ್ಲಾ ಸಂಯೋಜಕರು ಮತ್ತು ಸ್ಪೆಷಲಿಸ್ಟ್ ಇನ್ ಫೈನಾನ್ಶಿಯಲ್ ಲಿಟರಸಿ ಮತ್ತು ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಧಾರವಾಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಛೇರಿಯಲ್ಲಿ ಅರ್ಜಿ ಪಡೆದು ಫೆಬ್ರವರಿ 5ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2447850 ಸಂಪರ್ಕಿಸಬಹುದು.
ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ಜಿಟಿಟಿಸಿ ಕೇಂದ್ರ ಕಚೇರಿಯ ನಿರ್ದೇಶನದಂತೆ ಕೊಪ್ಪಳ ತಾಲ್ಲೂಕಿನ ದದೇಗಲ್ನಲ್ಲಿಯ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಮೆಕಟ್ರಾನಿಕ್ಸ್ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನವನ್ನು ಜನವರಿ 24 ಮತ್ತು 25ರಂದು ಆಯೋಜನೆ ಮಾಡಲಾಗಿದೆ.
ಕನಿಷ್ಠ ಒಂದು ವರ್ಷ ಬೋಧನೆಯಲ್ಲಿ ಅನುಭವವುಳ್ಳ ಪ್ರಥಮ ದರ್ಜೆಯಲ್ಲಿ ಬಿಇ/ ಎಂ.ಟೆಕ್ ಇನ್ ಇ&ಸಿ ಮತ್ತು ಇ&ಇ ಪದವಿ ಹೊಂದಿದ ಆಸಕ್ತ ಆಕಾಂಕ್ಷಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದು.
ಯಾವುದೇ ರೀತಿಯ ದಿನ ಭತ್ಯೆ ಮತ್ತು ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ ಮತ್ತು ಒಂದು ವೇಳೆ ಈ ವಿಷಯವಾಗಿ ಜಿಟಿಟಿಸಿ ಕೇಂದ್ರ ಕಚೇರಿಯ ನಿರ್ದೇಶನದಲ್ಲಿ ಬದಲಾವಣೆ ಆಗಿದ್ದಲ್ಲಿ ನೇಮಕಾತಿಯನ್ನು ರದ್ದುಗೊಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಟಿಟಿಸಿ ಕಾರ್ಯಾಲಯ ಅಥವಾ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಗದಗ ರೋಡ್-ದದೇಗಲ್ ಕೊಪ್ಪಳ, ವಿಭಾಗದ ಮುಖ್ಯಸ್ಥರಾದ ಮೌನೇಶ್ ಅವರನ್ನು ಮೊಬೈಲ್ ಸಂಖ್ಯೆ 7507094445ಗೆ ಸಂಪರ್ಕಿಸಬಹುದಾಗಿದೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications