ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಹುದ್ದೆ, ಸರ್ಕಾರದ ಉತ್ತರ
ಬೆಳಗಾವಿ, ಡಿಸೆಂಬರ್ 22; ಕರ್ನಾಟಕದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 3941 ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ. 814 ಉಪನ್ಯಾಸಕರ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಲಾಗಿದೆ.
ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ನಡೆಯುತ್ತಿದೆ. ಯಮಕನಮರಡಿ ಶಾಸಕ ಸತೀಶ್ ಎಲ್. ಜಾರಕಿಹೊಳಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಸಕಾಲ ಸಚಿವರಿಗೆ ಉಪನ್ಯಾಸಕರ ಹುದ್ದೆಗಳು ಖಾಲಿ ಇರುವ ಕುರಿತು ಪ್ರಶ್ನೆ ಕೇಳಿದ್ದರು.
ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಮಂಜೂರಾಗಿರುವ ಉಪನ್ಯಾಸಕರ ಹುದ್ದೆಗಳು ಎಷ್ಟು?, ವಿಷಯವಾರು ಮಾಹಿತಿ ನೀಡಿ ಎಂದು ಕೇಳಿದ್ದರು. ಖಾಲಿ ಇರುವ ಹುದ್ದೆಗಳು ಎಷ್ಟು?. ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂದು ವಿವರಣೆ ಕೇಳಿದ್ದರು.

ಇಲಾಖೆ ಈ ಪ್ರಶ್ನೆಗೆ ಉತ್ತರ ನೀಡಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 12,858 ಉಪನ್ಯಾಸಕರ ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 3941 ಹುದ್ದೆಗಳು ಖಾಲಿ ಇರುತ್ತದೆ. 814 ಉಪನ್ಯಾಸಕರ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು 17/11/2022ರ ಟಿಪ್ಪಣಿಯಲ್ಲಿ ಅನುಸೂಚಿತ ಜಾತಿಗಳಿಗೆ ಮತ್ತು ಅನುಸೂಚಿತ ಪಂಗಡಗಳಿಗೆ ಹೆಚ್ಚಿಸಲಾಗಿರುವ ಮೀಸಲಾತಿಯನ್ನು ಜಾರಿಗೊಳಿಸಲು ರೋಸ್ಟರ್ ಬಿಂದುಗಳನ್ನು ಗುರುತಿಸುವ ಪ್ರಕ್ರಿಯೆ ಅಂತಿಮಗೊಳ್ಳುವ ತನಕ ರಾಜ್ಯಾಧೀನ ಸೇವೆಗಳಲ್ಲಿ ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆಗಳನ್ನು ತಡೆಹಿಡಿಯಲು ಸೂಚಿಸಿದ್ದು, ಸದರಿ ಆದೇಶವನ್ನು ಹಿಂಪಡೆದ ನಂತರ ನೇಮಕಾತಿ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದೆ.
ಯಾವ-ಯಾವ ವಿಷಯಗಳು?; ಯಾವ-ಯಾವ ವಿಷಯಗಳ ಹುದ್ದೆಗಳು ಖಾಲಿ ಇವೆ ಎಂದು ಸಹ ಮಾಹಿತಿ ನೀಡಲಾಗಿದೆ. ಅರೆಬಿಕ್ 1, ಬಯಾಲಜಿ 283, ಕೆಮಿಸ್ಟ್ರಿ 150, ಬ್ಯುಸಿನೆಸ್ ಸ್ಟಡೀಸ್ 150, ಕಂಪ್ಯೂಟರ್ ಸೈನ್ಸ್ 17, ಎಕಾಮಿನಾಕ್ಸ್ 487, ಶಿಕ್ಷಣ 15, ಎಲೆಕ್ಟ್ರಾನಿಕ್ಸ್ 4, ಇಂಗ್ಲಿಶ್ 431.
ಜಿಯೋಗ್ರಾಫಿ 50, ಜಿಯಾಲಜಿ 1, ಹಿಂದಿ 33, ಇತಿಹಾಸ 335, ಕನ್ನಡ 481, ಲಾಜಿಕ್ಸ್ 6, ಮರಾಠಿ 5, ಗಣಿತ 181, ಸಂಗೀತ (ಹಿಂದೂಸ್ತಾನಿ) 2, ಫಿಸಿಕ್ಸ್ 185, ಪೊಲಿಟಿಕಲ್ ಸೈನ್ಸ್ 295, ಸೈಕಾಲಜಿ 2, ಸಂಸ್ಕೃತ 16, ಸೊಶಿಯಾಲಜಿ 410, ತಮಿಳು 1, ಉರ್ದು 49 ಹುದ್ದೆಗಳು ಖಾಲಿ ಇದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications