ಕಲ್ಯಾಣ-ಕರ್ನಾಟಕ ಭಾಗದ ನೇರ ನೇಮಕಾತಿ, ಸುತ್ತೋಲೆ
ಕಲ್ಯಾಣ-ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವಾಗ ವಿವಿಧ ನೇಮಕಾತಿ ಪ್ರಾಧಿಕಾರಗಳು ಈ ನಿಯಮ ಪಾಲಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.
ಬೆಂಗಳೂರು, ಫೆಬ್ರವರಿ 03; ಕರ್ನಾಟಕ ಸರ್ಕಾರ ಕಲ್ಯಾಣ-ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವಾಗ ವಿವಿಧ ನೇಮಕಾತಿ ಪ್ರಾಧಿಕಾರಗಳು ಪಾಲಿಸಬೇಕಾದ ವಿಧಿ-ವಿಧಾನಗಳ ಬಗ್ಗೆ ಸುತ್ತೋಲೆ ಹೊರಡಿಸಿದೆ.
ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-1) ವೀರಭದ್ರ ಈ ಸುತ್ತೋಲೆ ಹೊರಡಿಸಿದ್ದಾರೆ. ನೇಮಕಾತಿಗಳ ಬಗ್ಗೆ ಸ್ಪಷ್ಟನೆಗಳನ್ನು ನೀಡಿದ್ದಾರೆ.
ದಿನಾಂಕ 15/6/2022ರ ಸುತ್ತೋಲೆಯಲ್ಲಿ ದಿನಾಂಕ 6/6/2020ರ ಸುತ್ತೋಲೆಯನ್ನು ಹಿಂಪಡೆದು, ವಿವಿಧ ನೇಮಕಾತಿ ಪ್ರಾಧಿಕಾರಗಳು ಇನ್ನು ಮುಂದೆ ಮಿಕ್ಕುಳಿದ ವೃಂದ ಹಾಗೂ ಸ್ಥಳೀಯ ವೃಂದದಲ್ಲಿ ಲಭ್ಯವಿರುವ ನೇರ ನೇಮಕಾತಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಅಧಿಸೂಚನೆಯನ್ನು ಪ್ರತ್ಯೇಕವಾಗಿ ಹೊರಡಿಸಿ, ಪ್ರತ್ಯೇಕವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, ಪ್ರತ್ಯೇಕವಾಗಿ ಆಯ್ಕೆ ಪ್ರಕ್ರಿಯೆ ಕೈಗೊಂಡು ಆಯ್ಕೆಯನ್ನು ಅಂತಿಮಗೊಳಿಸುವಂತೆ ಸೂಚಿಸಲಾಗಿರುತ್ತದೆ.

ಮುಂದುವರೆದು, ಸದರಿ ಸುತ್ತೋಲೆಯ ಕೊನೆಯ ಕಂಡಿಕೆಯಲ್ಲಿ ಸದರಿ ಸುತ್ತೋಲೆಯು ಜಾರಿಗೆ ಬಂದ ದಿನಾಂಕಕ್ಕಿಂತ ಮೊದಲು ಈಗಾಗಲೇ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಹೊರತುಪಡಿಸಿ ಒಂದೇ ಅಧಿಸೂಚನೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿರುವ ಪುಕರಣಗಳಿಗೆ ಸೀಮಿತವಾಗುವಂತೆ ಮಾತ್ರ ದಿನಾಂಕ 6/6/2020ರ ಸುತ್ತೋಲೆಯಲ್ಲಿ ನೀಡಲಾಗಿರುವ ನಿರ್ದೇಶನಗಳನ್ವಯ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸುಂತೆ ಸೂಚಿಸಲಾಗಿದೆ.
ದಿನಾಂಕ 15/6/2022ರ ಸುತ್ತೋಲೆಯ ಕೊನೆಯ ಕಂಡಿಕೆಯಲ್ಲಿ ತಿಳಿಸಲಾಗಿರುವ ಅಂಶಗಳಿಗೆ ಕಲ್ಯಾಣ ಕರ್ನಾಟಕ ಭಾಗದ ಸ್ಥಳೀಯ ಅಭ್ಯರ್ಥಿಗಳಿಂದ ಹಾಗೂ ಜನಪ್ರತಿನಿಧಿಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಸದರಿ ವಿಷಯವನ್ನು ದಿನಾಂಕ 29/12/2022 ರಂದು ನಡೆದ ಸಚಿವ ಸಂಪುಟ ಉಪ ಸಮಿತಿಯ ಸಭೆಯಲ್ಲಿ ಮಂಡಿಸಿ ಸಮಿತಿಯ ನಿರ್ಣಯದಂತೆ 15/6/2022ರ ಸುತ್ತೋಲೆಯ ಕೊನೆಯ ಕಂಡಿಕೆಯಲ್ಲಿ ತಿಳಿಸಲಾಗಿರುವ ಅಂಶಗಳನ್ನು ಮಾತ್ರ ಹಿಂಪಡೆಯಲಾಗಿದೆ.
ವಿವಿಧ ನೇಮಕಾತಿ ಪ್ರಾಧಿಕಾರಗಳು ದಿನಾಂಕ 15/6/2022ರ ಸುತ್ತೋಲೆಯು ಜಾರಿಗೆ ಬರುವುದಕ್ಕೆ ಮೊದಲು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಹೊರತುಪಡಿಸಿ, ಬೇರೆ ಎಲ್ಲಾ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 6/6/2020ರ ಸುತ್ತೋಲೆಯನ್ವಯ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿ, ಅಂತಿಮ ಆಯ್ಕೆಪಟ್ಟಿ ಪ್ರಕಟಿಸದೇ ಇದ್ದಲ್ಲಿ, ಅಂತಹ ನೇಮಕಾತಿ ಪ್ರಕ್ರಿಯೆಗಳಿಗೆ ಸೀಮಿತವಾಗಿ ಮಾತ್ರ ಅರ್ಜಿ ಸಲ್ಲಿಸುವ ಸಮಯದಲ್ಲಿ ಸ್ಥಳೀಯ ಅಭ್ಯರ್ಥಿಗಳಿಂದ ಪಡೆಯಲಾಗಿರುವ ಆಯ್ಕೆಯನ್ನು ಪರಿಗಣಿಸದೇ, ಮೆರಿಟ್ ಪಟ್ಟಿಯಿಂದ ಆಯ್ಕೆ ಪಟ್ಟಿ ತಯಾರಿಸುವಲ್ಲಿ ಸ್ಥಳೀಯ ಅಭ್ಯರ್ಥಿಗಳನ್ನು ಮೊದಲಿಗೆ ಮಿಕ್ಕುಳಿದ ವೃಂದದಲ್ಲಿ ಲಭ್ಯವಿರುವ ಹುದ್ದೆಗಳಿಗೆದುರಾಗಿ ಪರಿಗಣಿಸಿ ಆಯ್ಕೆ ಪಟ್ಟಿ ತಯಾರಿಸುವುದು.
ನಂತರ ಸ್ಥಳೀಯ ವೃಂದದಲ್ಲಿ ಲಭ್ಯವಿರುವ ಹುದ್ದೆಗಳಿಗೆ ಪರಿಗಣಿಸಿ ಆಯ್ಕೆ ಪಟ್ಟಿ ತಯಾರಿಸುವಂತೆ ಸೂಚಿಸಿದೆ. ದಿನಾಂಕ 15/6/2022ರ ಸುತ್ತೋಲೆಯ ಕೊನೆಯ ಕಂಡಿಕೆಯನ್ನು ಮಾತ್ರ ಹಿಂಪಡೆಯಲಾಗಿದ್ದು, ಇನ್ನುಳಿದ ಎಲ್ಲಾ ಅಂಶಗಳು ಯಥಾವತ್ತಾಗಿ ಜಾರಿಯಲ್ಲಿರುತ್ತವೆ ಎಂದು ಸ್ಪಷ್ಟಪಡಿಲಾಗಿದೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications