10,00,000 ಉದ್ಯೋಗ ಭರವಸೆ ನೀಡಿದ್ದ ರಾಹುಲ್ ಗಾಂಧಿ ವಿದೇಶದಲ್ಲಿ ಮಸ್ತಿ: ಬಿಜೆಪಿ
ಬೆಂಗಳೂರು, ಡಿಸೆಂಬರ್ 02: ಕರ್ನಾಟಕದಲ್ಲಿ ಇತ್ತೀಚೆಗೆ ಕರೆದ ಇಲಾಖೆಗಳ ನೇಮಕಾತಿ ಆಹ್ವಾನ ಹೊರತುಪಡಿಸಿದರೆ ಕೆಲವು ವರ್ಷಗಳಿಂದ ಸುಸೂತ್ರವಾಗಿ ಸರ್ಕಾರಿ ನೇಮಕಾತಿಗಳನ್ನು ನಡೆಸಲಾಗಿತ್ತು. ಖಾಲಿ ಇರುವ ಲಕ್ಷಾಂತರ ಹುದ್ದೆಗಳ ನೇಮಕಾತಿ ನಡೆಸಬೇಕು. ನಮ್ಮ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕೆಂದು ಆಗ್ರಹಿಸಿ ನಿರುದ್ಯೋಗಿಗಳು ಎರಡನೇ ಬಾರಿ ಬೀದಿಗೆ ಇಳಿದಿದ್ದಾರೆ. ಪ್ರತಿಭಟನೆ ಹತ್ತಿಕ್ಕುವ ಕೆಲಸವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಮಧ್ಯೆ ಭರವಸೆ ನೀಡಿದ ಸರ್ಕಾರ, ರಾಹುಲ್ ಗಾಂಧಿ ಅವರ ಬಗ್ಗೆ ಬಿಜೆಪಿ ಜರಿದಿದೆ.
ಉದ್ಯೋಗಕ್ಕಾಗಿ ಕರ್ನಾಟಕದ ಯುವಜನತೆ ಎರಡನೇ ಬಾರಿ ಬೀದಿಗಿಳಿದಿದ್ದಾರೆ ಎಂದು ಕರ್ನಾಟಕ ಬಿಜೆಪಿ ಎಕ್ಸ್ ಪೋಸ್ಟ್ ಮಾಡಿದೆ. "ಕರ್ನಾಟಕದ 10 ಲಕ್ಷ ಯುವಕರಿಗೆ ಉದ್ಯೋಗವನ್ನು ಕಾಂಗ್ರೆಸ್ ನೀಡಲಿದೆ' ಎಂಬ ರಾಹುಲ್ ಗಾಂಧಿ ಅವರು ಚುನಾವಣಾ ಪೂರ್ವ ನೀಡಿದ್ದ ಭರವಸೆಯ ವಿಡಿಯೋವನ್ನು ಪೋಸ್ಟ್ ಮಾಡಿ ಟಾಂಗ್ ನೀಡಲಾಗಿದೆ.

ಅಂದು ಅಧಿಕಾರಕ್ಕಾಗಿ 2.5 ಲಕ್ಷ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆಂದು ಯುವಕರಿಗೆ ಸುಳ್ಳು ಭರವಸೆ ಕೊಟ್ಟು ಓಡಿಹೋದ ಸಂಸದ ರಾಹುಲ್ ಗಾಂಧಿ ಅವರುವಿದೇಶಿ ಪ್ರವಾಸದಲ್ಲಿ ಮಜಾ ಮಾಡುತ್ತಿದ್ದಾರೆ ಎಂದು ಬಿಜೆಪಿ ಗಂಭೀರವಾದ ಆರೋಪ ಮಾಡಿದೆ.
ಇತ್ತ ರಾಜ್ಯದ ಕುರ್ಚಿ ಕಾಳಗದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬ್ರೇಕ್ಫಾಸ್ಟ್ ರಾಜಕಾರಣ ಮಾಡುವುದು ನಾಟಿಕೋಳಿ ತಿನ್ನುವುದರಲ್ಲಿ ಬ್ಯುಸಿಯಾಗಿದ್ದಾರೆ. ಕಾಂಗ್ರೆಸ್ ಗೆ ಅಧಿಕಾರದ ಚಿಂತೆ ಯುವಕರಿಗೆ ಒಂದು ಹೊತ್ತು ಊಟಕ್ಕಾಗಿ ಉದ್ಯೋಗ ಅವಕಾಶದ ಚಿಂತೆ... ಎಂದು ಸರ್ಕಾರದ ಆಡಳಿತವನ್ನು, ನಿದ್ಯೋಗಿಗಳ ಬಗ್ಗೆ ಇರುವ ಕಾಂಗ್ರೆಸ್ ನಾಯಕರ ತಾತ್ಸಾರವನ್ನು ಬಿಜೆಪಿ ಖಂಡಿಸಿದೆ.
ಉದ್ಯೋಗಕ್ಕಾಗಿ ಕರ್ನಾಟಕದ ಯುವಜನತೆ ಎರಡನೇ ಬಾರಿ ಬೀದಿಗಿಳಿದಿದ್ದಾರೆ.
— BJP Karnataka (@BJP4Karnataka) December 2, 2025
ಅಧಿಕಾರಕ್ಕಾಗಿ 2.5 ಲಕ್ಷ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆಂದು ಯುವಕರಿಗೆ ಸುಳ್ಳು ಭರವಸೆ ಕೊಟ್ಟು ಓಡಿಹೋದ @RahulGandhi ಯವರು ವಿದೇಶಿ ಪ್ರವಾಸದಲ್ಲಿ ಮಜಾ ಮಾಡುತ್ತಿದ್ದಾರೆ
ಇತ್ತ ರಾಜ್ಯದ ಕುರ್ಚಿ ಕಾಳಗದಲ್ಲಿರುವ ಸಿಎಂ @siddaramaiah… pic.twitter.com/uHl2i3k5uy
ನಿರುದ್ಯೋಗಿಗಳು ಸರ್ಕಾರಿ ನೇಮಕಾತಿ ಆಗದ್ದನ್ನು ಖಂಡಿಸಿ, ನೇಮಕಾತಿಗೆ ಆಗ್ರಹಿಸಿ ಧಾರವಾಡ ಚಲೋಗೆ ಕರೆ ನೀಡಿದ್ದರು. ರಾಜ್ಯದ ವಿವಿಧ ಮೂಲಗಳ ಜನರು ಬಂದು ಬೆಂಬಲಿಸುವಂತೆ ಕೋರಲಾಗಿತ್ತು. ಆದರೆ ಪ್ರತಿಭಟನೆ ನಡೆಯುವಾಗ ಧರಣಿನಿರತರನ್ನು ಬಂಧಿಸುವ ಮೂಲಕ ಸರ್ಕಾರ ಸಾಂವಿಧಾನಿಕ ಹಕ್ಕನ್ನು ಹತ್ತಿಕ್ಕಲು ಮುಂದಾಗಿದೆ. ಅದಕ್ಕಾಗಿ ಪೊಲೀಸ್ ಇಲಾಖೆಯನ್ನು ಬಳಸಿಕೊಂಡಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications