Karnataka Anganwadi Jobs: ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳ ನೇಮಕಾತಿ: ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು, ಫೆಬ್ರವರಿ 10: ರಾಜ್ಯ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರ ನೇಮಕಾತಿ ನಡೆಯುತ್ತಿದ್ದು ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ.
ಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಒಟ್ಟು 152 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 15, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಒಟ್ಟು 6 ಜಿಲ್ಲೆಗಳಲ್ಲಿ ನೇಮಕಾತಿ ಮಾಡಲಾಗುತ್ತಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತುಮಾಹಿತಿ ಇಲ್ಲಿದೆ ನೋಡಿ.
ಯಾವ್ಯಾವ ಜಿಲ್ಲೆಯಲ್ಲಿ ಹುದ್ದೆಗಳ ನೇಮಕಾತಿ
ಬೆಂಗಳೂರು ಗ್ರಾಮೀಣ ಜಿಲ್ಲೆ
ಬೆಂಗಳೂರು ನಗರ ಜಿಲ್ಲೆ
ಬೆಳಗಾವಿ
ಬೀದರ್
ಹಾವೇರಿ
ತುಮಕೂರು
ಹುದ್ದೆಯ ಮಾಹಿತಿ
1. ಅಂಗನವಾಡಿ ಕಾರ್ಯಕರ್ತೆ -39 ಹುದ್ದೆ
2. ಅಂಗನವಾಡಿ ಸಹಾಯಕಿ - 113 ಹುದ್ದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಆಫ್ಲೈನ್ ಅಪ್ಲಿಕೇಷನ್ಗೆ ಕೊನೆಯ ದಿನಾಂಕ : 15-02-2024
ವಯಸ್ಸಿನ ಮಿತಿ
ಕನಿಷ್ಠ ವಯಸ್ಸಿನ ಮಿತಿ: 19 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು
ಶೈಕ್ಷಣಿಕ ವಿದ್ಯಾರ್ಹತೆ ಮಾಹಿತಿ
ಅಂಗನವಾಡಿ ಕಾರ್ಯಕರ್ತೆ ಹುದ್ದೆ: ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರಬೇಕು ಹಾಗೂ ಎಸ್ಎಸ್ಎಲ್ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಇನ್ನೂ ಸರ್ಕಾರದ ಅಂಗೀಕೃತ ಸಂಸ್ಥೆಯಿಂದ ಡಿಎಸ್ಇಆರ್ಟಿ ಯಿಂದ ಇಸಿಸಿಇ ಡಿಪ್ಲೊಮಾ ಕೋರ್ಸ್, ಜೆಒಸಿ ಕೋರ್ಸ್, ಎನ್ಟಿಟಿ ಕೋರ್ಸ್ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಡಿಪ್ಲೊಮಾ ನ್ಯೂಟ್ರಿಷಿಯನ್ , ಹೋಂ ಸೈನ್ಸ್ ಸರ್ಟಿಫಿಕೆಟ್ ಕೋರ್ಸ್ ಒಂದು ವರ್ಷದ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡುವುದು ಹಾಗೂ ಬೋನಸ್ +5 ಅಂಕಗಳನ್ನು ನೀಡಲಾಗುತ್ತದೆ.
ಅಂಗನವಾಡಿ ಸಹಾಯಕಿ ಹುದ್ದೆ
ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಬೋನಸ್ ಅಂಕಗಳ ಮಾಹಿತಿ ಇಲ್ಲಿದೆ.
ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಿದವರಲ್ಲಿ ಆಸಿಡ್ ದಾಳಿಗೆ ತುತ್ತಾದವರು, ವಿಧವೆ, ಇಲಾಖೆಯ ಸಂಸ್ಥೆಗಳ ನಿವಾಸಿಗಳು, ಅಂಗವಿಲಕರು, ಮಾಜಿ ದೇವದಾಸಿಯರ ಮಗಳು, ಯೋಜನಾ ನಿರಾಶ್ರಿತ ಮಹಿಳೆಯರಿಗೆ + 5 ಬೋನಸ್ ಅಂಕಗಳನ್ನು ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ: https://anganwadirecruit.kar.nic.in/
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications