ಕನಿಷ್ಠ ವೇತನ ಏರಿಕೆ ಮಾಡಲಿದೆ ಕರ್ನಾಟಕ ಸರ್ಕಾರ, ಯಾರಿಗೆ ಲಾಭ
ಬೆಂಗಳೂರು, ಜನವರಿ 11: ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಸರ್ಕಾರ ಕನಿಷ್ಠ ವೇತನವನ್ನು ಏರಿಕೆ ಮಾಡಲಿದೆ. ಈ ತೀರ್ಮಾನದಿಂದಾಗಿ ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಕಾರ್ಯ ನಿರ್ವಹಣೆ ಮಾಡುವ ಅಂದಾಜು 2 ಕೋಟಿ ಉದ್ಯೋಗಿಗಳಿಗೆ ಲಾಭವಾಗಲಿದೆ. ರಾಜ್ಯ ಸರ್ಕಾರ ಪ್ರತಿ ಐದು ವರ್ಷಗಳಿಗೊಮ್ಮೆ ಕನಿಷ್ಠ ವೇತನವನ್ನು ಪರಿಷ್ಕರಣೆ ಮಾಡುತ್ತಾ ಬಂದಿದ್ದು, ಕಾರ್ಮಿಕರಿಗೆ ಅನುಕೂಲ ಮಾಡಿಕೊಡುತ್ತಿದೆ.
ಸದ್ಯ ಕರ್ನಾಟಕದಲ್ಲಿ ಕನಿಷ್ಠ ವೇತನ 15,000 ರೂ. ಇದೆ. ಸರ್ಕಾರ ಕನಿಷ್ಠ ವೇತನ ಹೆಚ್ಚಳ ಮಾಡುವ ಕುರಿತು ತೀರ್ಮಾನ ಕೈಗೊಂಡು, ನಿಯಮದಲ್ಲಿ ಬದಲಾವಣೆ ಮಾಡಿದ ಬಳಿಕ ಕೌಶಲ್ಯ ರಹಿತ ಕಾರ್ಮಿಕರು ಪ್ರತಿ ತಿಂಗಳು 20,000 ರೂ. ಕನಿಷ್ಠ ವೇತನವನ್ನು ಪಡೆಯಲಿದ್ದಾರೆ. ಈ ಕುರಿತು ನಿಯಮ ಬದಲಾವಣೆ ಮಾಡಲು ಕಾರ್ಮಿಕ ಇಲಾಖೆ ಚಿಂತನೆ ನಡೆಸಿದೆ.

ಕನಿಷ್ಠ ವೇತನ ಏರಿಕೆ: ಕನಿಷ್ಠ ವೇತನ ಪರಿಷ್ಕಣೆಯಿಂದ ಸಂಘಟಿತ ವಲಯದಲ್ಲಿ ಕೆಲಸ ಮಾಡುವ 53 ರಿಂದ 54 ಲಕ್ಷ ಉದ್ಯೋಗಿಗಳು, ಅಸಂಘಟಿತ ವಲಯದ 1.5 ಕೋಟಿ ಉದ್ಯೋಗಿಗಳಿಗೆ ಲಾಭವಾಗಲಿದೆ ಎಂದು ಅಂದಾಜಿಸಲಾಗಿದೆ. ಪ್ರಸ್ತುತದ ಜೀವನಮಟ್ಟವನ್ನು ಗಮನದಲ್ಲಿಟ್ಟುಕೊಂಡು ಈ ಕನಿಷ್ಠ ವೇತನ ನಿಗದಿಯ ತೀರ್ಮಾನವನ್ನು ಸರ್ಕಾರ ಕೈಗೊಳ್ಳಲಿದೆ.
ಉದ್ಯೋಗಿಗಳನ್ನು ಕೌಶಲ್ಯ ರಹಿತ ಕಾರ್ಮಿಕರು, ಅರೆ ಕೌಶಲ್ಯ ಹೊಂದಿದವರು, ಕೌಶಲ್ಯ ಹೊಂದಿದವರು, ಉತ್ತಮ ಕೌಶಲ್ಯ ಹೊಂದಿದವರು ಎಂದು ವಿಭಾಗ ಮಾಡಲಾಗಿದೆ. ಸದ್ಯ ಈ ವಿಭಾಗದ ಕಾರ್ಮಿಕರ ನಡುವೆ ಶೇ 10ರಷ್ಟು ವೇತನ ವ್ಯತ್ಯಾಸವಿದೆ. ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಅನ್ವಯ ಕಾರ್ಮಿಕನ ಆರ್ಥಿಕ ಸ್ಥಿತಿಯನ್ನು ಪರಿಗಣನೆ ಮಾಡದೇ ಅವರಿಗೆ ಕನಿಷ್ಠ ವೇತನವನ್ನು ನೀಡಬೇಕಿದೆ.
ಸುಪ್ರೀಂಕೋರ್ಟ್ ತನ್ನ ಐತಿಹಾಸಿಕ ತೀರ್ಪಿನಲ್ಲಿ ಕನಿಷ್ಠ ವೇತನ ನಿಗದಿ ಕುರಿತು ವಿವರಣೆ ನೀಡಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಈಗಾಗಲೇ ಇಲಾಖೆಯ ಅಧಿಕಾರಿಗಳ ಜೊತೆ ಕನಿಷ್ಠ ವೇತನ ಪರಿಷ್ಕರಣೆ ಕುರಿತು ಹಲವು ಸಭೆಗಳನ್ನು ನಡೆಸಿದ್ದಾರೆ. ಸುಪ್ರೀಂಕೋರ್ಟ್ ಆದೇಶದ ಅನ್ವಯ ವೇತನ ನಿಗದಿ ಮಾಡಲು ನಾವು ಬದ್ಧರಾಗಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.
ಅಸಂಘಟಿತ ವಲಯದಲ್ಲಿ ಕಾರ್ಯ ನಿರ್ವಹಣೆ ಮಾಡುವ ಎಲ್ಲಾ 83 ವರ್ಗದ ನೌಕರರ ಕನಿಷ್ಠ ವೇತನವನ್ನು ಪರಿಷ್ಕರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಈ ನಿಯಮ ಜಾರಿಗೆ ಬಂದರೆ ಕೌಶಲ್ಯಗಳ ಆಧಾರದ ಮೇಲೆ ಎಲ್ಲಾ ನಾಲ್ಕು ವಿಭಾಗದ ಕಾರ್ಮಿಕರಿಗೂ ವೇತನ ಏರಿಕೆಯಾಗಲಿದೆ.
ಸರ್ಕಾರದ ಈ ತೀರ್ಮಾನದ ಕುರಿತು ಎಐಟಿಯುಸಿ ಪ್ರತಿಕ್ರಿಯೆ ನೀಡಿದೆ, "ನಾವು ಸರ್ಕಾರದ ತೀರ್ಮಾನವನ್ನು ಸ್ವಾಗತ ಮಾಡುತ್ತೇವೆ. ಇದರಿಂದಾಗಿ ನೌಕರರ ವೇತನ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಲಿದೆ. ಇದನ್ನು ಜಾರಿಗೊಳಿಸುವಲ್ಲಿ ವಿಳಂಬವಾದರೆ ನಾವು ಹೋರಾಟ ಮಾಡಲಿದ್ದೇವೆ" ಎಂದು ಹೇಳಿದ್ದಾರೆ.
2022ರಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಕನಿಷ್ಠ ವೇತನವನ್ನು ಶೇ 5 ರಿಂದ 10ರಷ್ಟು ಏರಿಕೆ ಮಾಡಲು ಮುಂದಾಗಿತ್ತು. ಆಗ ಎಐಟಿಯುಸಿ ಈ ಕುರಿತು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿತ್ತು. ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಕನಿಷ್ಠ ವೇತನ ನಿಗದಿ ಮಾಡಲು ನಿರ್ದೇಶನ ನೀಡಬೇಕು ಎಂದು ಮನವಿ ಸಲ್ಲಿಕೆ ಮಾಡಿತ್ತು.
ಹೈಕೋರ್ಟ್ನ ಏಕಸದಸ್ಯ ಪೀಠದಲ್ಲಿ ಎಐಟಿಯುಸಿಗೆ ಗೆಲುವು ಸಿಕ್ಕಿತ್ತು. ಆದರೆ ಇದನ್ನು ಪ್ರಶ್ನಿಸಿ ಉದ್ಯೋಗದಾತರು ವಿಭಾಗೀಯ ಪೀಠದ ಮುಂದೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈಗ ಉದ್ಯೋಗದಾತರ ಅರ್ಜಿ ಏಕಸದಸ್ಯ ಪೀಠದ ಮುಂದೆ ಬಂದಿದೆ. ಇಂತಹ ಸಮಯದಲ್ಲಿಯೇ ಸರ್ಕಾರ ಕನಿಷ್ಠ ವೇತನ ಪರಿಷ್ಕರಣೆ ಕುರಿತು ಗಮನಹರಿಸಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications