ಕನಿಷ್ಠ ವೇತನ ಏರಿಕೆ ಮಾಡಲಿದೆ ಕರ್ನಾಟಕ ಸರ್ಕಾರ, ಯಾರಿಗೆ ಲಾಭ
ಬೆಂಗಳೂರು, ಜನವರಿ 11: ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಸರ್ಕಾರ ಕನಿಷ್ಠ ವೇತನವನ್ನು ಏರಿಕೆ ಮಾಡಲಿದೆ. ಈ ತೀರ್ಮಾನದಿಂದಾಗಿ ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಕಾರ್ಯ ನಿರ್ವಹಣೆ ಮಾಡುವ ಅಂದಾಜು 2 ಕೋಟಿ ಉದ್ಯೋಗಿಗಳಿಗೆ ಲಾಭವಾಗಲಿದೆ. ರಾಜ್ಯ ಸರ್ಕಾರ ಪ್ರತಿ ಐದು ವರ್ಷಗಳಿಗೊಮ್ಮೆ ಕನಿಷ್ಠ ವೇತನವನ್ನು ಪರಿಷ್ಕರಣೆ ಮಾಡುತ್ತಾ ಬಂದಿದ್ದು, ಕಾರ್ಮಿಕರಿಗೆ ಅನುಕೂಲ ಮಾಡಿಕೊಡುತ್ತಿದೆ.
ಸದ್ಯ ಕರ್ನಾಟಕದಲ್ಲಿ ಕನಿಷ್ಠ ವೇತನ 15,000 ರೂ. ಇದೆ. ಸರ್ಕಾರ ಕನಿಷ್ಠ ವೇತನ ಹೆಚ್ಚಳ ಮಾಡುವ ಕುರಿತು ತೀರ್ಮಾನ ಕೈಗೊಂಡು, ನಿಯಮದಲ್ಲಿ ಬದಲಾವಣೆ ಮಾಡಿದ ಬಳಿಕ ಕೌಶಲ್ಯ ರಹಿತ ಕಾರ್ಮಿಕರು ಪ್ರತಿ ತಿಂಗಳು 20,000 ರೂ. ಕನಿಷ್ಠ ವೇತನವನ್ನು ಪಡೆಯಲಿದ್ದಾರೆ. ಈ ಕುರಿತು ನಿಯಮ ಬದಲಾವಣೆ ಮಾಡಲು ಕಾರ್ಮಿಕ ಇಲಾಖೆ ಚಿಂತನೆ ನಡೆಸಿದೆ.

ಕನಿಷ್ಠ ವೇತನ ಏರಿಕೆ: ಕನಿಷ್ಠ ವೇತನ ಪರಿಷ್ಕಣೆಯಿಂದ ಸಂಘಟಿತ ವಲಯದಲ್ಲಿ ಕೆಲಸ ಮಾಡುವ 53 ರಿಂದ 54 ಲಕ್ಷ ಉದ್ಯೋಗಿಗಳು, ಅಸಂಘಟಿತ ವಲಯದ 1.5 ಕೋಟಿ ಉದ್ಯೋಗಿಗಳಿಗೆ ಲಾಭವಾಗಲಿದೆ ಎಂದು ಅಂದಾಜಿಸಲಾಗಿದೆ. ಪ್ರಸ್ತುತದ ಜೀವನಮಟ್ಟವನ್ನು ಗಮನದಲ್ಲಿಟ್ಟುಕೊಂಡು ಈ ಕನಿಷ್ಠ ವೇತನ ನಿಗದಿಯ ತೀರ್ಮಾನವನ್ನು ಸರ್ಕಾರ ಕೈಗೊಳ್ಳಲಿದೆ.
ಉದ್ಯೋಗಿಗಳನ್ನು ಕೌಶಲ್ಯ ರಹಿತ ಕಾರ್ಮಿಕರು, ಅರೆ ಕೌಶಲ್ಯ ಹೊಂದಿದವರು, ಕೌಶಲ್ಯ ಹೊಂದಿದವರು, ಉತ್ತಮ ಕೌಶಲ್ಯ ಹೊಂದಿದವರು ಎಂದು ವಿಭಾಗ ಮಾಡಲಾಗಿದೆ. ಸದ್ಯ ಈ ವಿಭಾಗದ ಕಾರ್ಮಿಕರ ನಡುವೆ ಶೇ 10ರಷ್ಟು ವೇತನ ವ್ಯತ್ಯಾಸವಿದೆ. ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಅನ್ವಯ ಕಾರ್ಮಿಕನ ಆರ್ಥಿಕ ಸ್ಥಿತಿಯನ್ನು ಪರಿಗಣನೆ ಮಾಡದೇ ಅವರಿಗೆ ಕನಿಷ್ಠ ವೇತನವನ್ನು ನೀಡಬೇಕಿದೆ.
ಸುಪ್ರೀಂಕೋರ್ಟ್ ತನ್ನ ಐತಿಹಾಸಿಕ ತೀರ್ಪಿನಲ್ಲಿ ಕನಿಷ್ಠ ವೇತನ ನಿಗದಿ ಕುರಿತು ವಿವರಣೆ ನೀಡಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಈಗಾಗಲೇ ಇಲಾಖೆಯ ಅಧಿಕಾರಿಗಳ ಜೊತೆ ಕನಿಷ್ಠ ವೇತನ ಪರಿಷ್ಕರಣೆ ಕುರಿತು ಹಲವು ಸಭೆಗಳನ್ನು ನಡೆಸಿದ್ದಾರೆ. ಸುಪ್ರೀಂಕೋರ್ಟ್ ಆದೇಶದ ಅನ್ವಯ ವೇತನ ನಿಗದಿ ಮಾಡಲು ನಾವು ಬದ್ಧರಾಗಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.
ಅಸಂಘಟಿತ ವಲಯದಲ್ಲಿ ಕಾರ್ಯ ನಿರ್ವಹಣೆ ಮಾಡುವ ಎಲ್ಲಾ 83 ವರ್ಗದ ನೌಕರರ ಕನಿಷ್ಠ ವೇತನವನ್ನು ಪರಿಷ್ಕರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಈ ನಿಯಮ ಜಾರಿಗೆ ಬಂದರೆ ಕೌಶಲ್ಯಗಳ ಆಧಾರದ ಮೇಲೆ ಎಲ್ಲಾ ನಾಲ್ಕು ವಿಭಾಗದ ಕಾರ್ಮಿಕರಿಗೂ ವೇತನ ಏರಿಕೆಯಾಗಲಿದೆ.
ಸರ್ಕಾರದ ಈ ತೀರ್ಮಾನದ ಕುರಿತು ಎಐಟಿಯುಸಿ ಪ್ರತಿಕ್ರಿಯೆ ನೀಡಿದೆ, "ನಾವು ಸರ್ಕಾರದ ತೀರ್ಮಾನವನ್ನು ಸ್ವಾಗತ ಮಾಡುತ್ತೇವೆ. ಇದರಿಂದಾಗಿ ನೌಕರರ ವೇತನ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಲಿದೆ. ಇದನ್ನು ಜಾರಿಗೊಳಿಸುವಲ್ಲಿ ವಿಳಂಬವಾದರೆ ನಾವು ಹೋರಾಟ ಮಾಡಲಿದ್ದೇವೆ" ಎಂದು ಹೇಳಿದ್ದಾರೆ.
2022ರಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಕನಿಷ್ಠ ವೇತನವನ್ನು ಶೇ 5 ರಿಂದ 10ರಷ್ಟು ಏರಿಕೆ ಮಾಡಲು ಮುಂದಾಗಿತ್ತು. ಆಗ ಎಐಟಿಯುಸಿ ಈ ಕುರಿತು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿತ್ತು. ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಕನಿಷ್ಠ ವೇತನ ನಿಗದಿ ಮಾಡಲು ನಿರ್ದೇಶನ ನೀಡಬೇಕು ಎಂದು ಮನವಿ ಸಲ್ಲಿಕೆ ಮಾಡಿತ್ತು.
ಹೈಕೋರ್ಟ್ನ ಏಕಸದಸ್ಯ ಪೀಠದಲ್ಲಿ ಎಐಟಿಯುಸಿಗೆ ಗೆಲುವು ಸಿಕ್ಕಿತ್ತು. ಆದರೆ ಇದನ್ನು ಪ್ರಶ್ನಿಸಿ ಉದ್ಯೋಗದಾತರು ವಿಭಾಗೀಯ ಪೀಠದ ಮುಂದೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈಗ ಉದ್ಯೋಗದಾತರ ಅರ್ಜಿ ಏಕಸದಸ್ಯ ಪೀಠದ ಮುಂದೆ ಬಂದಿದೆ. ಇಂತಹ ಸಮಯದಲ್ಲಿಯೇ ಸರ್ಕಾರ ಕನಿಷ್ಠ ವೇತನ ಪರಿಷ್ಕರಣೆ ಕುರಿತು ಗಮನಹರಿಸಿದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications