Get Updates
Get notified of breaking news, exclusive insights, and must-see stories!

ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ಆಕಾಂಕ್ಷಿಯಾಗಿರುವ ಲಕ್ಷಾಂತರ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಕೇಂದ್ರ ಲೋಕಸೇವಾ ಆಯೋಗದ (UPSC) ಮಾದರಿಯಲ್ಲಿಯೇ ಇನ್ನು ಮುಂದೆ ಕರ್ನಾಟಕ ಲೋಕಸೇವಾ ಆಯೋಗದ (KPSC) ಮೂಲಕವೂ ಪ್ರತಿ ವರ್ಷ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ (ಗ್ರೂಪ್ ಎ ಮತ್ತು ಬಿ) ನೇಮಕಾತಿಗೆ ಅಧಿಸೂಚನೆ ಹೊರಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.

ಕೆಪಿಎಸ್‌ಸಿಯಲ್ಲಿ ಮಹತ್ತರ ಸುಧಾರಣೆ

ಕೆಪಿಎಸ್‌ಸಿ ಪರೀಕ್ಷೆಗಳಲ್ಲಿ ಪದೇ ಪದೇ ಕೇಳಿಬರುತ್ತಿರುವ ಅಕ್ರಮಗಳ ಆರೋಪಗಳು ಹಾಗೂ ಇದರಿಂದ ಉಂಟಾಗುತ್ತಿರುವ ನ್ಯಾಯಾಂಗ ವ್ಯಾಜ್ಯಗಳಿಗೆ ಶಾಶ್ವತ ಮುಕ್ತಿ ನೀಡಲು ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅನುಸರಿಸುತ್ತಿರುವ ಪಾರದರ್ಶಕ ಹಾಗೂ ಅತ್ಯುತ್ತಮ ಕ್ರಮಗಳನ್ನು ಕೆಪಿಎಸ್‌ಸಿಯಲ್ಲೂ ಅಳವಡಿಸಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಇಲಾಖೆಯಲ್ಲಿ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ, ಹಣಕಾಸು ಇಲಾಖೆ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ ಚರ್ಚಿಸಿದ್ದಾರೆ.

KPSC Recruitment

ಸಾಮಾನ್ಯವಾಗಿ ಕೆಪಿಎಸ್‌ಸಿ ನೇಮಕಾತಿ ಅಧಿಸೂಚನೆಗಳು ನಾಲ್ಕು ವರ್ಷಗಳಿಗೊಮ್ಮೆ ಮಾತ್ರ ಪ್ರಕಟವಾಗುತ್ತಿದ್ದವು. ಇದರಿಂದಾಗಿ ನಿರಂತರವಾಗಿ ಪರೀಕ್ಷಾ ಸಿದ್ಧತೆಯಲ್ಲಿ ತೊಡಗಿರುವ ಯುವ ಅಭ್ಯರ್ಥಿಗಳಿಗೆ ವಯೋಮಿತಿ ಮೀರಿ ಅನ್ಯಾಯವಾಗುತ್ತಿತ್ತು. ಪರಿಣಾಮ, ಅಭ್ಯರ್ಥಿಗಳು ನ್ಯಾಯಾಲಯದ ಮೆಟ್ಟಿಲೇರುತ್ತಿದ್ದರಿಂದ ಆಯೋಗವು ಸಾಲು ಸಾಲು ವ್ಯಾಜ್ಯಗಳನ್ನು ಎದುರಿಸುವಂತಾಗಿತ್ತು. ಈ ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು, ಯುಪಿಎಸ್‌ಸಿ ಮಾದರಿಯಲ್ಲಿ ನಿರ್ದಿಷ್ಟ ದಿನಾಂಕಗಳೊಂದಿಗೆ ವಾರ್ಷಿಕ ಪರೀಕ್ಷಾ ವೇಳಾಪಟ್ಟಿಯನ್ನು ನಿಗದಿಪಡಿಸಲು ತೀರ್ಮಾನಿಸಲಾಗಿದೆ.

ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ

ಮುಂಗಡವಾಗಿ ಐದು ವರ್ಷಗಳ ವೇಳಾಪಟ್ಟಿ ಪ್ರಕಟ

ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನಿಖರ ಅಂದಾಜು ಮಾಡಿ, ಹಣಕಾಸು ಇಲಾಖೆಯಿಂದ ತತ್ವಾಧಾರಿತ ಅನುಮೋದನೆ ಪಡೆಯಲಾಗುತ್ತದೆ. ಆ ಬಳಿಕ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಇಲಾಖೆಗಳು ಡಿಪಿಎಆರ್‌ಗೆ ಮಾಹಿತಿ ನೀಡಲಿವೆ. ಈ ಸಂಪೂರ್ಣ ಪ್ರಕ್ರಿಯೆಯ ಆಧಾರದ ಮೇಲೆ ಮುಂಚಿತವಾಗಿಯೇ ಐದು ವರ್ಷಗಳ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಕೃಷ್ಣ ಬೈರೇಗೌಡರು ವಿವರಿಸಿದ್ದಾರೆ.

ಮರುಪರೀಕ್ಷೆ ಇಲ್ಲ - ವದಂತಿಗಳಿಗೆ ಸ್ಪಷ್ಟನೆ

2023-24ನೇ ಸಾಲಿನಲ್ಲಿ ಕೆಪಿಎಸ್‌ಸಿ ಮೂಲಕ ನಡೆದ 384 ಹುದ್ದೆಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ ಹಾಗೂ ಅಕ್ರಮ ನಡೆದಿದೆ ಎಂಬ ಆರೋಪಗಳ ಕುರಿತು ಸದನದಲ್ಲಿ ನಡೆದ ಬಿಸಿಬಿಸಿ ಚರ್ಚೆಗೆ ಸಚಿವರು ಸ್ಪಷ್ಟ ಉತ್ತರ ನೀಡಿದರು. ಮಾರ್ಚ್ 2ರಂದು ಪ್ರಕಟವಾದ ಮುಖ್ಯ ಪರೀಕ್ಷೆಯ ಫಲಿತಾಂಶದಲ್ಲಿ, ಒಂದೇ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದ ಸುಮಾರು 11 ಮಂದಿ ಅಭ್ಯರ್ಥಿಗಳು ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ ಎಂಬ ಅನುಮಾನಗಳು ವ್ಯಕ್ತವಾಗಿದ್ದವು.

ಆದರೆ, ಈ ಆರೋಪಗಳನ್ನು ತಳ್ಳಿಹಾಕಿದ ಸಚಿವರು, ಯಾವುದೇ ಕಾರಣಕ್ಕೂ ಮರುಪರೀಕ್ಷೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. "ಸಿಸಿಟಿವಿ ದೃಶ್ಯಾವಳಿಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಯಾವುದೇ ರೀತಿಯ ದುರುಪಯೋಗ ನಡೆದಿಲ್ಲ ಎಂಬ ವರದಿಯನ್ನು ಕೆಪಿಎಸ್‌ಸಿ ಸಲ್ಲಿಸಿದೆ. ಆಯ್ಕೆಯಾಗಿರುವ ಈ 11 ಅಭ್ಯರ್ಥಿಗಳು ರಾಜ್ಯದ ವಿವಿಧ ಜಿಲ್ಲೆಗಳಿಗೆ ಸೇರಿದವರಾಗಿದ್ದು, ಅವರ ನಡುವೆ ಯಾವುದೇ ಸಂಬಂಧವಿಲ್ಲ" ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು. ಒಂದು ವೇಳೆ ಈಗ ಮರುಪರೀಕ್ಷೆ ನಡೆಸಿದರೆ, ಇಡೀ ನೇಮಕಾತಿ ಪ್ರಕ್ರಿಯೆ ಕನಿಷ್ಠ ಎರಡು ವರ್ಷ ವಿಳಂಬವಾಗಲಿದೆ ಹಾಗೂ ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರುವ 5,800 ಅಭ್ಯರ್ಥಿಗಳ ಮೇಲೆ ಇದು ಗಂಭೀರ ಪರಿಣಾಮ ಬೀರಲಿದೆ ಎಂಬುದನ್ನು ಅವರು ಮನವರಿಕೆ ಮಾಡಿಕೊಟ್ಟರು.

SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾಲಿ 18 ಸದಸ್ಯರಿರುವ ಕೆಪಿಎಸ್‌ಸಿ ಭ್ರಷ್ಟಾಚಾರಕ್ಕೆ ಸುದ್ದಿಯಾಗುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ನಿಯಮಾವಳಿಗಳ ಪ್ರಕಾರ ಹಾಲಿ ಸದಸ್ಯರ ಅಧಿಕಾರಾವಧಿ ಮುಗಿಯುವವರೆಗೆ ಅವರ ಸಂಖ್ಯೆಯನ್ನು ಕಡಿತಗೊಳಿಸಲು ಸಾಧ್ಯವಿಲ್ಲ. ಆದರೆ, 2027ರ ಮೇ ತಿಂಗಳ ವೇಳೆಗೆ ಆಯೋಗದ ಸದಸ್ಯರ ಸಂಖ್ಯೆ ತಾನಾಗಿಯೇ ಎಂಟಕ್ಕೆ ಇಳಿಕೆಯಾಗಲಿದೆ ಎಂದರು. ಇದೇ ವೇಳೆ, ಕೆಪಿಎಸ್‌ಸಿಯಲ್ಲಿ ಇನ್ನಷ್ಟು ಸುಧಾರಣೆಗಳನ್ನು ತರುವ ಉದ್ದೇಶದಿಂದ ಎಲ್ಲ ಪಕ್ಷಗಳ ಶಾಸಕರನ್ನು ಒಳಗೊಂಡ ವಿಶೇಷ 'ಸದನ ಸಮಿತಿ'ಯನ್ನು ಸರ್ಕಾರ ಶೀಘ್ರದಲ್ಲೇ ರಚಿಸಲಿದೆ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+