Govt Job alert: ಕರ್ನಾಟಕ ಗೃಹ ಇಲಾಖೆಯ 5987 ಹುದ್ದೆಗಳು ಭರ್ತಿ ಶೀಘ್ರ, ಅಧಿಸೂಚನೆ ಮಾಹಿತಿ
ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ವಿಧಾನಮಂಡಲ ಅಧಿವೇಶನ ಕೊನೆಗೊಂಡಿದೆ. ಈ ವೇಳೆ ವಿವಿಧ ವಿಷಯಗಳು ಚರ್ಚೆ ಆಗಿದ್ದು, ಈ ಪೈಕಿ ಸರ್ಕಾರಿ ಹುದ್ದೆಗಳ ನೇಮಕಾತಿ ಯಾವುದೆಲ್ಲ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಆಯಿತು. ಈ ವೇಳೆ ಕರ್ನಾಟಕ ಗೃಹ ಇಲಾಖೆಯ ಒಂದಷ್ಟು ಹುದ್ದೆಗಳ ನೇಮಕಾತಿಗಾಗಿ ಅನುಮೋದನೆ ದೊರಕಿವೆ.
ಕರ್ನಾಟಕ ರಾಜ್ಯ ಗೃಹ ಇಲಾಖೆ ವ್ಯಾಪ್ತಿಯಲ್ಲಿ ಯಾವೇಲ್ಲ ಹುದ್ದೆಗಳು ಹಾಗೂ ಎಷ್ಟು ಹುದ್ದೆಗಳಿಗೆ ನೇಮಕಾತಿಗಾಗಿ ರಾಜ್ಯ ಆರ್ಥಿಕ ಇಲಾಖೆಯು ಅನುಮೋದನೆ ನೀಡಿದೆ ಎಂಬ ಮಾಹಿತಿ ನಿಮ್ಮ ಮುಂದಿದೆ. ಸದ್ಯ ಅನುಮೋದನೆ ಸಿಕ್ಕಿದ್ದು, ಅಧಿಕೃತ ಅಧಿಸೂಚನೆ ಹೊರ ಬೀಳಬೇಕಿದೆ. ಈ ಕುರಿತು ಅಪ್ಡೇಟ್ ಮಾಹಿತಿ ಇಲ್ಲಿದೆ.

ರಾಜ್ಯದಲ್ಲಿ ಈಗಾಗಲೇ ಒಂದಷ್ಟು ಗೃಹ ಇಲಾಖೆ ಹಲವು ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಅವುಗಳನ್ನು ಹೊರತುಪಡಿಸಿದರೆ, ಹೊಸದಾಗಿ ಪೊಲೀಸ್ ಇಲಾಖೆ 4,115 ಕಾನ್ಟೇಬಲ್, PSI ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. ಗೃಹ ಇಲಾಖೆ ಇತರ 1,872 ಹುದ್ದೆಗಳಿಗೆ ಶೀಘ್ರವೇ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆ ಇದೆ. ಒಟ್ಟು ಇಲಾಖೆ ವ್ಯಾಪ್ತಿಯಲ್ಲಿ 5,987 ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಬೇಕಿದ್ದು, ಅಧಿಸೂಚನೆ ಹೊರ ಬೀಳುತ್ತಿದ್ದಂತೆ ಪ್ರಕ್ರಿಯೆ ಆರಂಭವಾಗಲಿದೆ.
ಆರ್ಥಿಕ ಇಲಾಖೆ ಯಾವೆಲ್ಲ ನೇಮಕಾತಿಗೆ ಅನುಮೋದನೆ ನೀಡಿದೆ?
* ವಿಶೇಷ ತನಿಖಾಧಿಕಾರಿ - 15
* ಪೊಲೀಸ್ ಸಬ್ಇನ್ಸ್ಪೆಕ್ಟರ್ (2022-23)- 300 ಹುದ್ದೆಗಳು
* ಪೊಲೀಸ್ ಸಬ್ಇನ್ಸ್ಪೆಕ್ಟರ್ (2023-24)- 300 ಹುದ್ದೆಗಳು
* ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್)- 2000 ಹುದ್ದೆಗಳು
* ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ (ಕೆಎಸ್ಆರ್ಪಿ)- 1500 ಹುದ್ದೆಗಳು
(ಈ ಮೇಲಿನ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ ಆಗಬೇಕಿದೆ)

ಅಗ್ನಿಶಾಮಕ- ತುರ್ತು ಸೇವೆಗಳ ಇಲಾಖೆ ಹುದ್ದೆಗಳು ಪಟ್ಟಿ
ಆರ್ಥಿಕ ಇಲಾಖೆಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಈ ಕೆಳಗಿನ ಹುದ್ದೆಗಳ ಭರ್ತಿಗೆ 2020ರ ಜೂನ್ ತಿಂಗಳ 10 ರಂದು ಒಪ್ಪಿಗೆ ನೀಡಿತ್ತು.
* ಅಗ್ನಿಶಾಮಕ ಚಾಲಕ: 227 ಹುದ್ದೆಗಳು ಭರ್ತಿ ಆಗಬೇಕಿದೆ
* ಅಗ್ನಿಶಾಮಕ: 1222 ಹುದ್ದೆಗಳು ಭರ್ತಿ ಆಗಬೇಕಿದೆ
* ಅಗ್ನಿಶಾಮಕ ಠಾಣಾಧಿಕಾರಿ: 36 ಹುದ್ದೆಗಳು.
* ಚಾಲಕ ತಂತ್ರ: 82 ಹುದ್ದೆಗಳು
ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ
* ಪ್ರಥಮ ದರ್ಜೆ ಸಹಾಯಕರು: 7
* ದ್ವಿತೀಯ ದರ್ಜೆ ಸಹಾಯಕರು: 7
* ಶೀಘ್ರಲಿಪಿಗಾರರು: 43
ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಹುದ್ದೆಗಳೆಷ್ಟು?
* ಸಹಾಯಕ ಅಧೀಕ್ಷಕರ ಹುದ್ದೆ - 03
* ವೀಕ್ಷಕರ ಹುದ್ದೆ - 197
* ದ್ವಿತೀಯ ದರ್ಜೆ ಬೋಧಕರ ಹುದ್ದೆ - 22
(ಈ ಹುದ್ದೆಗಳು ನೇರ ನೇಮಕಾತಿ ಮೂಲಕ ಭರ್ತಿ ಆಗಲಿವೆ)
ಈ ಮೇಲಿನವು ಸೇರಿದಂತೆ ಆರ್ಥಿಕ ಇಲಾಖೆಯು ಸಾವಿರಾರು ಹುದ್ದೆಗಳಿಗೆ ಅನುಮೋದನೆ ನೀಡಿದ್ದು, ಅಧಿಸೂಚನೆ ಆದಷ್ಟು ಶೀಘ್ರವೇ ಹೊರಡಲಿದೆ. ಈ ಮೂಲಕ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಶೀಘ್ರವೇ ಸಿಹಿ ಸುದ್ದಿ ನೀಡಲಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications