ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ 186 ಖಾಲಿ ಹುದ್ದೆಗಳ ನೇಮಕ, ಅಧಿಸೂಚನೆ-ಪರೀಕ್ಷೆ ಮಾಹಿತಿ ತಿಳಿಯಿರಿ
ಬೆಂಗಳೂರು, ಮಾರ್ಚ್ 31: ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಶೀಘ್ರವೇ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಗೊಳ್ಳಲಿದೆ.
ಕಲ್ಯಾಣ ಅಧಿಕಾರಿ, ಕ್ಷೇತ್ರ ನಿರೀಕ್ಷಕರು, ಪ್ರಥಮ ದರ್ಜೆ ಸಹಾಯಕರು, ಆಪ್ತ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಒಳಗೊಂಡ ಒಟ್ಟು 186 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯು ಅನುಮೋದನೆ ನೀಡಿದೆ. ಈ ಹುದ್ದೆಗಳಿಗೆ ಅರ್ಹರರನ್ನು ನೇಮಕ ಮಾಡಿಕೊಳ್ಳಲು ಈಗಾಗಲೇ ಸಿದ್ಧಪಡಿಸಲಾಗಿರುವ ಅಧಿಸೂಚನೆಯನ್ನು ಶೀಘ್ರದಲ್ಲೇ ಹೊರಡಿಲಾಗುವುದು ಎಂದು ಸರ್ಕಾರ ತಿಳಿಸಿದೆ.

ಈ ಸಂಬಂಧ ಕರ್ನಾಟಕ ರಾಜ್ಯ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಣೆ ಹೊರಡಿಸಿ ಶೀಘ್ರವೇ ಅರ್ಹರಿಂದ ಅರ್ಜಿ ಆಹ್ವಾನಿಸಲಿದೆ. ಆದ್ದರಿಂದ ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಇಂದಿನಿಂದಲೇ ಅದಕ್ಕೆ ತಕ್ಕ ತಯಾರಿ ಮಾಡಿಕೊಳ್ಳುವುದು ಒಳಿತು.
ಖಾಲಿ ಹುದ್ದೆಗಳಿಗೆ ಆಯ್ಕೆಯಾಗಬೇಕಾದರೆ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಎದುರಿಸಬೇಕು. ಅದಕ್ಕಾಗಿ ಆಸಕ್ತಿ ಅಭ್ಯರ್ಥಿಗಳು ವಿದ್ಯಾಭ್ಯಾಸ ಆರಂಭಿಸಬೇಕಿದೆ. ಸದರಿ ಖಾಲಿ ಹುದ್ದೆಗಳ ನೇಮಕಾತಿ ಸಂಬಂಧದ ಪರೀಕ್ಷೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಜೂನ್ ಇಲ್ಲವೇ ಜುಲೈ ತಿಂಗಳಲ್ಲಿ ನಡೆಸಲಿವೆ ಎಂದು ತಳಿದು ಬಂದಿದೆ.
ಪರೀಕ್ಷಾ ವಿಧಾನ ಹಾಗೂ ಅರ್ಜಿ ಶುಲ್ಕ, ಹುದ್ದೆವಾರು ವಿದ್ಯಾರ್ಹತೆ, ಶೈಕ್ಷಣಿಕ ಅರ್ಹತೆ ಸೇರಿದಂತೆ ಮುಂತಾದ ಮಾನದಂಡಗಳು ಹಾಗೂ ಪೂರ್ಣ ಮಾಹಿತಿ ಅಧಿಸೂಚನೆ ಪ್ರಕಟಗೊಂಡ ನಂತರವೇ ತಿಳಿಯಲಿದೆ. ಅದಕ್ಕು ಮೊದಲು ಹುದ್ದೆಗಳ ಮಾಹಿತಿ ಇಲ್ಲಿ ತಿಳಿಯೋಣ.

ಖಾಲಿ ಹುದ್ದೆಗಳ ಮಾಹಿತಿ
ದ್ವಿತೀಯ ದರ್ಜೆ ಸಹಾಯಕರು- 100.
ಪ್ರಥಮ ದರ್ಜೆ ಸಹಾಯಕರು- 12
ಕ್ಷೇತ್ರ ನಿರೀಕ್ಷಕರು - 60
ಕಲ್ಯಾಣ ಅಧಿಕಾರಿಗಳು- 12
ಆಪ್ತ ಸಹಾಯಕರು 02
ಒಟ್ಟು ಖಾಲಿ ಹುದ್ದೆಗಳು- 186
ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ 186 ಖಾಲಿ ಹುದ್ದೆಗಳಿಗೆ ಕುರಿತಾದ ಅಧಿಸೂಚನೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ವೆಬ್ಸೈಟ್ನಲ್ಲಿ ಮುಂದಿನ 15ರಂದು ಬಿಡುಗಡೆಗೊಳಿಸಲಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 17 ರಿಂದ ಮೇ 17 ರವರೆಗೆ ಅವಕಾಶ ಸಿಗಲಿದೆ. ಶುಲ್ಕ ಸಹಿತ ಅರ್ಜಿಯನ್ನು ಮೇ 20ರೊಳಗೆ ಪಾವಿಸಬೇಕು ಅವಕಾಶ ಕಲ್ಪಿಸಾಗುತ್ತದೆ ಎಂದು ಪ್ರಾಧಿಕಾರದ ಮೂಲಗಳು ತಿಳಿಸಿವೆ.
ಅರ್ಹ ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳಾದ ಎಸ್ಎಸ್ಎಲ್ಸಿ ಅಂಕಪಟ್ಟಿ ಸೇರಿದಂತೆ ಇತರ ದಾಖೆಲೆಗಳು, ವೈಯಕ್ತಿಕ ದಾಖಲೆ ಪತ್ರಗಳು, ಇ- ಮೇಲ್ ವಿಳಾಸ ಹಾಗೂ ಮೊಬೈಲ್ ನಂಬರ್, ಹುದ್ದೆಗಳಿಗೆ ತಕ್ಕುದಾದ ಸೂಕ್ತ ವಿದ್ಯಾರ್ಹತೆ ದಾಖಲೆಗಳು, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ಇತರ ದಾಖಲೆಗಳು ಅರ್ಜಿ ಸಲ್ಲಿಕೆಗೆ ಬೇಕಾಗಬಹುದು ಎಂದು ಹೇಳಲಾಗಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications