ವಿಧಾನ ಪರಿಷತ್ ಸಚಿವಾಲಯ ನೇಮಕಾತಿ: ಹುದ್ದೆ, ವೇತನ ವಿವರ
ಬೆಂಗಳೂರು, ಡಿಸೆಂಬರ್ 03: ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿನ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿತ್ತು. ಈಗ ಪರಿಷ್ಕೃತ ದಿನಾಂಕವನ್ನು ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ 3/1/2025ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಒಟ್ಟು 7 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.
ವಿಧಾನ ಪರಿಷತ್ ಸಚಿವಾಲಯದ (ಅಧಿಕಾರಿಗಳು ಮತ್ತು ನೌಕರರ ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 2021ರ ರೀತ್ಯಾ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ವಿವಿಧ ವೃಂದಗಳ ಹುದ್ದೆಗಳಿಗೆ ಅಧಿಸೂಚನೆಯನ್ನು ದಿನಾಂಕ 12.03.2024ರಂದು ಹೊರಡಿಸಲಾಗಿದ್ದು, ಸದರಿ ಅಧಿಸೂಚನೆಯಲ್ಲಿ ಕಿರಿಯ ಸಹಾಯಕರ ಉಳಿಕೆ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ.

ಹುದ್ದೆ, ವೇತನ ವಿವರ: ಹುದ್ದೆಯ ಹೆಸರು ಕಿರಿಯ ಸಹಾಯಕರು. ಒಟ್ಟು ಹುದ್ದೆಗಳ ಸಂಖ್ಯೆ 7. ಉಳಿಕೆ ಮೂಲ ವೃಂದ 6 ಹುದ್ದೆಗಳು, ಕಲ್ಯಾಣ-ಕರ್ನಾಟಕ 1 ಹುದ್ದೆ. ನೇರ ನೇಮಕಾತಿಯ ಮೂಲಕ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ವೇತನ ಶ್ರೇಣಿ 34100-800-35700-900-39300-1000-43300-1125-47800-1250-52800-1375-58300-1500-64300-1650-67600 ರೂ.ಗಳು.
ಹುದ್ದೆಗಳ ಮೀಸಲಾತಿ ಹೀಗಿದೆ. ಪರಿಶಿಷ್ಟ ಜಾತಿ ಇತರೆ 1. ಸಾಮಾನ್ಯ ಮಹಿಳೆ 1, ಗ್ರಾಮೀಣ 1 ಒಟ್ಟು 2. ಪರಿಶಿಷ್ಟ ಪಂಗಡ ಇತರೆ 1, ಪ್ರವರ್ಗ -1 1, ಪ್ರವರ್ಗ 2ಎ 1. ಕಲ್ಯಾಣ ಕರ್ನಾಟಕ ಪರಿಶಿಷ್ಟ ಜಾತಿ ಇತರೆ 1.
ದಿನಾಂಕ 12/3/2024ರಂದು ಹೊರಡಿಸಿರುವ ಅಧಿಸೂಚನೆಯಲ್ಲಿನ ಎಲ್ಲಾ ಹುದ್ದೆಗಳಿಗೆ ಹಾಗೂ ಮೇಲ್ಕಂಡ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಪರಿಷ್ಕೃತ ದಿನಾಂಕಗಳು. ಅರ್ಜಿ ಸಲ್ಲಿಕೆ ಪ್ರಾರಂಭಿಸುವ ದಿನಾಂಕ 4/12/2024. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 3/1/2025, ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ 4/1/2025.
12/3/2024ರ ಅಧಿಸೂಚನೆ ವಯೋಮಿತಿ ಸಡಿಲಿಕೆ ಕೋಷ್ಠಕದಲ್ಲಿ ನಮೂದಿಸಿರುವ ಗರಿಷ್ಠ ವಯೋಮಿತಿಗೆ 2 ವರ್ಷಗಳ ಸಡಿಲಿಕೆ ನೀಡಲಾಗಿದೆ ಎಂಬುದರ ಬದಲು 3 ವರ್ಷದ ಸಡಿಲಿಕೆ ನೀಡಲಾಗಿದೆ. ಉಳಿದಂತೆ ನೇಮಕಾತಿ ಅಧಿಸೂಚನೆಯಲ್ಲಿ ನಿಗದಿ ಪಡಿಸಿದ ಅರ್ಹತೆ, ಸೂಚನೆ, ನಿಬಂಧನೆ, ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅಭ್ಯರ್ಥಿಗಳಿಗೆ ಸ್ಪಷ್ಟಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗೆ http://kea.kar.nic.in ಅಥವ https://cetonline.karnataka.gov.in/kea ವೆಬ್ಸೈಟ್ಗೆ ಭೇಟಿ ನೀಡಿ.
ಗುತ್ತಿಗೆ ಆಧಾರದ ಮೇಲೆ ನೇಮಕಾತಿ: ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯ ಉತ್ಕೃಷ್ಟತಾ ಕೇಂದ್ರಕ್ಕೆ ಗುತ್ತಿಗೆ ಆಧಾರದ ಮೇಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಇಲ್ಲಿ ಕಚೇರಿಯಲ್ಲಿ ವೇಳೆಯಲ್ಲಿ ಪಡೆದು, ಭರ್ತಿ ಮಾಡಿ ಸಂಬಂಧಿಸಿದ ದಾಖಲೆಗಳನ್ನು ನೋಟರಿ ಮಾಡಿಸಿ ಡಿಸೆಂಬರ್ 6ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08192-237480.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications