ಕರ್ನಾಟಕ: ಅಂಚೆ ಇಲಾಖೆಯಲ್ಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಸೆಪ್ಟೆಂಬರ್ 15 : ಅಂಚೆ ಇಲಾಖೆ (ಕರ್ನಾಟಕ ವೃತ್ತ)ಯಲ್ಲಿ ಖಾಲಿ ಇರುವ 04 ಕುಶಲಕರ್ಮಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್ ಬಿಐನಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
ಕುಶಲಕರ್ಮಿ ಹುದ್ದೆಗೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ 14 ಅಕ್ಟೋಬರ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ವಿದ್ಯಾರ್ಹತೆ: 1 ವರ್ಷದ ಅನುಭವದೊಂದಿಗೆ ಸರ್ಕಾರಿ ಅಥವಾ ಮಾನ್ಯತೆ ಪಡೆದ ಯಾವುದೇ ತಾಂತ್ರಿಕ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಕುಶಲಕರ್ಮಿ ಪ್ರಮಾಣಪತ್ರವನ್ನು ಹೊಂದಿರಬೇಕು.
ವೇತನ
ಶ್ರೇಣಿ:
5200
ರಿಂದ
20200
ರು.
ತಿಂಗಳಿಗೆ.
ವಯೋಮಿತಿ:
ಜುಲೈ
1,
2017ಕ್ಕೆ
ಅನ್ವಯವಾಗುವಂತೆ
18
ರಿಂದ
30
ವರ್ಷ
ವಯೋಮಿತಿಯನ್ನು
ನಿಗದಿ
ಪಡಿಸಲಾಗಿದೆ.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಅಭ್ಯರ್ಥಿಗಳ ವೈಯಕ್ತಿಕ ಸಂದರ್ಶನ ಹಾಗೂ ಕೊನೆಯದಾಗಿ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆ ಮೂಲಕ ಈ ಕುಶಲಕರ್ಮಿ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ತಿಳಿಯಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.