ಕೆಎಎಸ್ ಮುಖ್ಯ ಪರೀಕ್ಷೆ ವೇಳಾಪಟ್ಟಿ ರಿಲೀಸ್
KAS: ಇದೀಗ ರಾಜ್ಯದಲ್ಲಿ ಉದ್ಯೋಗಾವಕಾಶಗಳು ತೆಗದುಕೊಳ್ಳುತ್ತಲೇ ಇವೆ. ಇನ್ನು ಕೆಲವು ಇಲಾಖೆಗಳ ಹುದ್ದೆಗಳ ನೇಮಕಾತಿ ಸಂಬಂಧ ವೇಳಾಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ. ಹಾಗೆಯೇ ಇದೀಗ 384 ಕೆಎಎಸ್-ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಲೋಕ ಸೇವಾ ಆಯೋಗ ಮುಖ್ಯ ಪರೀಕ್ಷೆಯ ಸಂಭಾವ್ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆಯನ್ನು 2024ರ ಡಿಸೆಂಬರ್ 29ರಂದು ಕೆಪಿಎಸ್ಸಿ ಪರೀಕ್ಷೆ ನಡೆಸಿತ್ತು. ಇದೀಗ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನ ಬಿಡುಗಡೆ ಮಾಡಲಾಗಿದೆ. ಜೊತೆಗೆ ಇಲಾಖೆಯಿಂದ ನಡೆಯುವ ಮುಂದಿನ ಪರೀಕ್ಷೆಗಳ ದಿನಾಂಕಗಳನ್ನ ಬಿಡುಗಡೆ ಮಾಡಲಾಗಿದೆ. ಆದ್ದರಿಂದ ಕರ್ನಾಟಕ ಸರ್ಕಾದ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿದಂತ ಅಭ್ಯರ್ಥಿಗಳು ಪೂರ್ವ ತಯಾರಿ ಮಾಡಿಕೊಳ್ಳುವುದು ಉತ್ತಮ.

384 ಕೆಎಎಸ್ ಹುದ್ದೆಗಳ ಮುಖ್ಯ ಪರೀಕ್ಷೆಯ ಸಂಭಾವ್ಯ ವೇಳಾಪಟ್ಟಿ ಆಗಿದೆ. ಈ ದಿನಾಂಕಗಳಂದು ಏನಾದರೂ ಕೇಂದ್ರ ಅಥವಾ ರಾಜ್ಯ ಸರ್ಕಾರದ ಆಡಳಿತಾತ್ಮಕದಿಂದ ಸಮಸ್ಯೆ ಆಗದಿದ್ದರೇ ಇದೇ ದಿನಾಂಕದಂದೇ ಪರೀಕ್ಷೆ ನಡೆಸಲಾಗುತ್ತದೆ. 2023-24ರಲ್ಲಿ ಕರ್ನಾಟಕ ಸರ್ಕಾರದಡಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರೇ ಕೆಪಿಎಸ್ಸಿ ವೆಬ್ಸೈಟ್ಗೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ.
2025ರ ಫೆಬ್ರುವರಿ, ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಕೆಪಿಎಸ್ಸಿಯಿಂದ ಹೆಚ್ಚಿನ ಪರೀಕ್ಷೆಗಳು ನಡೆಯುವ ಸಾಧ್ಯತೆಯಿದೆ. ಈಗಾಗಲೇ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಕೀ ಉತ್ತರಗಳನ್ನು ಜನವರಿ 30ರಂದು ಅಂತಿಮ ಕೀ ಆನ್ಸರ್ಗಳನ್ನು ಬಿಡುಗಡೆ ಮಾಡಲಾಗಿದೆ. ಸದ್ಯದಲ್ಲೇ ಕೆಎಎಸ್ ಮೇನ್ ಎಕ್ಸಾಂ ಅಧಿಸೂಚನೆ ಹೊರ ಬೀಳಲಿದ್ದು, ಪೂರ್ವಭಾವಿಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ.
ಪರೀಕ್ಷೆ ವೇಳಾಪಟ್ಟಿ
* 384 ಗೆಜೆಟೆಡ್ ಪ್ರೊಬೇಷನರ್ (ಗ್ರೂಪ್-ಎ & ಬಿ)
* 28 ಮಾರ್ಚ್ 2025
* 29 ಮಾರ್ಚ್ 2025
* 01 ಏಪ್ರಿಲ್ 2025
* 02 ಏಪ್ರಿಲ್ 2025
ಕೆಪಿಎಸ್ಸಿ ಕೆಎಎಸ್ ಪೂರ್ವಭಾವಿ ಮರುಪರೀಕ್ಷೆಯನ್ನು ಕಳೆದ 2024 ಡಿಸೆಂಬರ್ 29 ರಂದು ನಡೆಸಿ, ತಾತ್ಕಾಲಿಕ ಕೀ ಉತ್ತರಗಳನ್ನು 2025 ಜನವರಿ 15 ರಂದು ಪ್ರಕಟಿಸಿ, ಆಕ್ಷೇಪಣೆ ಆಹ್ವಾನಿಸಿತ್ತು. ಸದರಿ ಆಕ್ಷೇಪಣೆಗಳನ್ನು ಪರಿಶೀಲಿಸಿದ್ದು, ಜನವರಿ 30 ರಂದು ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ.
ಮುಖ್ಯ ಪರೀಕ್ಷೆ ಪತ್ರಿಕೆಗಳು ಮತ್ತು ಅಂಕಗಳ ವಿವರ
1. ಕನ್ನಡ : 150 ಅಂಕಗಳು (ಪರೀಕ್ಷೆ ಅವಧಿ 2 ಗಂಟೆ )
2. ಇಂಗ್ಲಿಷ್ : 150 ಅಂಕಗಳು (ಪರೀಕ್ಷೆ ಅವಧಿ 2 ಗಂಟೆ)
ಮುಖ್ಯ ಪರೀಕ್ಷೆ ಇತರೆ ಪತ್ರಿಕೆಗಳು
* ಪತ್ರಿಕೆ-1: ಪ್ರಬಂಧಗಳು - 250 ಅಂಕ
* ಪತ್ರಿಕೆ-2: ಸಾಮಾನ್ಯ ಅಧ್ಯಯನ-1 (250 ಅಂಕಗಳು)
* ಪತ್ರಿಕೆ-3: ಸಾಮಾನ್ಯ ಅಧ್ಯಯನ-2 (250 ಅಂಕಗಳು)
* ಪತ್ರಿಕೆ-4: ಸಾಮಾನ್ಯ ಅಧ್ಯಯನ-3 (250 ಅಂಕಗಳು)
* ಪತ್ರಿಕೆ-5: ಸಾಮಾನ್ಯ ಅಧ್ಯಯನ-4 (250 ಅಂಕಗಳು)
-
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ












Click it and Unblock the Notifications