ಕೆಎಎಸ್ ಮುಖ್ಯ ಪರೀಕ್ಷೆ ವೇಳಾಪಟ್ಟಿ ರಿಲೀಸ್
KAS: ಇದೀಗ ರಾಜ್ಯದಲ್ಲಿ ಉದ್ಯೋಗಾವಕಾಶಗಳು ತೆಗದುಕೊಳ್ಳುತ್ತಲೇ ಇವೆ. ಇನ್ನು ಕೆಲವು ಇಲಾಖೆಗಳ ಹುದ್ದೆಗಳ ನೇಮಕಾತಿ ಸಂಬಂಧ ವೇಳಾಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ. ಹಾಗೆಯೇ ಇದೀಗ 384 ಕೆಎಎಸ್-ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಲೋಕ ಸೇವಾ ಆಯೋಗ ಮುಖ್ಯ ಪರೀಕ್ಷೆಯ ಸಂಭಾವ್ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆಯನ್ನು 2024ರ ಡಿಸೆಂಬರ್ 29ರಂದು ಕೆಪಿಎಸ್ಸಿ ಪರೀಕ್ಷೆ ನಡೆಸಿತ್ತು. ಇದೀಗ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನ ಬಿಡುಗಡೆ ಮಾಡಲಾಗಿದೆ. ಜೊತೆಗೆ ಇಲಾಖೆಯಿಂದ ನಡೆಯುವ ಮುಂದಿನ ಪರೀಕ್ಷೆಗಳ ದಿನಾಂಕಗಳನ್ನ ಬಿಡುಗಡೆ ಮಾಡಲಾಗಿದೆ. ಆದ್ದರಿಂದ ಕರ್ನಾಟಕ ಸರ್ಕಾದ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿದಂತ ಅಭ್ಯರ್ಥಿಗಳು ಪೂರ್ವ ತಯಾರಿ ಮಾಡಿಕೊಳ್ಳುವುದು ಉತ್ತಮ.

384 ಕೆಎಎಸ್ ಹುದ್ದೆಗಳ ಮುಖ್ಯ ಪರೀಕ್ಷೆಯ ಸಂಭಾವ್ಯ ವೇಳಾಪಟ್ಟಿ ಆಗಿದೆ. ಈ ದಿನಾಂಕಗಳಂದು ಏನಾದರೂ ಕೇಂದ್ರ ಅಥವಾ ರಾಜ್ಯ ಸರ್ಕಾರದ ಆಡಳಿತಾತ್ಮಕದಿಂದ ಸಮಸ್ಯೆ ಆಗದಿದ್ದರೇ ಇದೇ ದಿನಾಂಕದಂದೇ ಪರೀಕ್ಷೆ ನಡೆಸಲಾಗುತ್ತದೆ. 2023-24ರಲ್ಲಿ ಕರ್ನಾಟಕ ಸರ್ಕಾರದಡಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರೇ ಕೆಪಿಎಸ್ಸಿ ವೆಬ್ಸೈಟ್ಗೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ.
2025ರ ಫೆಬ್ರುವರಿ, ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಕೆಪಿಎಸ್ಸಿಯಿಂದ ಹೆಚ್ಚಿನ ಪರೀಕ್ಷೆಗಳು ನಡೆಯುವ ಸಾಧ್ಯತೆಯಿದೆ. ಈಗಾಗಲೇ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಕೀ ಉತ್ತರಗಳನ್ನು ಜನವರಿ 30ರಂದು ಅಂತಿಮ ಕೀ ಆನ್ಸರ್ಗಳನ್ನು ಬಿಡುಗಡೆ ಮಾಡಲಾಗಿದೆ. ಸದ್ಯದಲ್ಲೇ ಕೆಎಎಸ್ ಮೇನ್ ಎಕ್ಸಾಂ ಅಧಿಸೂಚನೆ ಹೊರ ಬೀಳಲಿದ್ದು, ಪೂರ್ವಭಾವಿಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ.
ಪರೀಕ್ಷೆ ವೇಳಾಪಟ್ಟಿ
* 384 ಗೆಜೆಟೆಡ್ ಪ್ರೊಬೇಷನರ್ (ಗ್ರೂಪ್-ಎ & ಬಿ)
* 28 ಮಾರ್ಚ್ 2025
* 29 ಮಾರ್ಚ್ 2025
* 01 ಏಪ್ರಿಲ್ 2025
* 02 ಏಪ್ರಿಲ್ 2025
ಕೆಪಿಎಸ್ಸಿ ಕೆಎಎಸ್ ಪೂರ್ವಭಾವಿ ಮರುಪರೀಕ್ಷೆಯನ್ನು ಕಳೆದ 2024 ಡಿಸೆಂಬರ್ 29 ರಂದು ನಡೆಸಿ, ತಾತ್ಕಾಲಿಕ ಕೀ ಉತ್ತರಗಳನ್ನು 2025 ಜನವರಿ 15 ರಂದು ಪ್ರಕಟಿಸಿ, ಆಕ್ಷೇಪಣೆ ಆಹ್ವಾನಿಸಿತ್ತು. ಸದರಿ ಆಕ್ಷೇಪಣೆಗಳನ್ನು ಪರಿಶೀಲಿಸಿದ್ದು, ಜನವರಿ 30 ರಂದು ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ.
ಮುಖ್ಯ ಪರೀಕ್ಷೆ ಪತ್ರಿಕೆಗಳು ಮತ್ತು ಅಂಕಗಳ ವಿವರ
1. ಕನ್ನಡ : 150 ಅಂಕಗಳು (ಪರೀಕ್ಷೆ ಅವಧಿ 2 ಗಂಟೆ )
2. ಇಂಗ್ಲಿಷ್ : 150 ಅಂಕಗಳು (ಪರೀಕ್ಷೆ ಅವಧಿ 2 ಗಂಟೆ)
ಮುಖ್ಯ ಪರೀಕ್ಷೆ ಇತರೆ ಪತ್ರಿಕೆಗಳು
* ಪತ್ರಿಕೆ-1: ಪ್ರಬಂಧಗಳು - 250 ಅಂಕ
* ಪತ್ರಿಕೆ-2: ಸಾಮಾನ್ಯ ಅಧ್ಯಯನ-1 (250 ಅಂಕಗಳು)
* ಪತ್ರಿಕೆ-3: ಸಾಮಾನ್ಯ ಅಧ್ಯಯನ-2 (250 ಅಂಕಗಳು)
* ಪತ್ರಿಕೆ-4: ಸಾಮಾನ್ಯ ಅಧ್ಯಯನ-3 (250 ಅಂಕಗಳು)
* ಪತ್ರಿಕೆ-5: ಸಾಮಾನ್ಯ ಅಧ್ಯಯನ-4 (250 ಅಂಕಗಳು)
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications