Grama One: ಗ್ರಾಮ ಒನ್ ಕೇಂದ್ರ: ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ, ವಿವರ ನೋಡಿ
ಬೆಂಗಳೂರು, ಫೆಬ್ರವರಿ 12: ಕೇಂದ್ರ ಇಲ್ಲವೇ ರಾಜ್ಯ ಸರ್ಕಾರಗಳು (Central government) ಆಗಲಿ ತಾವು ರೂಪಿಸುವ ಯೋಜನೆಗಳು ಜನರಿಗೆ ತಲುಪಬೇಕಾದರೆ ಸೇವಾ ಕೇಂದ್ರಗಳ ಪಾತ್ರ ಮುಖ್ಯವಾಗಿರುತ್ತದೆ. ಫಲಾನುಭವಿಗಳಿಗೆ ಸರ್ಕಾರಿ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡುತ್ತಿರುವ 'ಸಮಗ್ರ ನಾಗರಿಕ ಸೇವಾ ಕೇಂದ್ರ'/ ಗ್ರಾಮ ಒನ್ ಕೇಂದ್ರ'ಗಳ ಪ್ರಾಂಚೈಸಿಗಾಗಿ ಅರ್ಜಿ ಕರೆಯಲಾಗಿದೆ.
ಹೌದು, ಜನರಿಗೆ ಅಗತ್ಯ ಸೇವೆ ನೀಡಲು ಇರುವ ಸೇವಾ ಕೇಂದ್ರ (ಗ್ರಾಮ ಒನ್)ಗಳನ್ನು ತೆರೆಯಲು ಇಚ್ಛಿಸುವವರು ಈ ಕೂಡಲೇ ಅಗತ್ಯ ಮಾಹಿತಿ ನೋಡಿಕೊಂಡು ಅರ್ಜಿ ಸಲ್ಲಿಸಬೇಕಿದೆ. ಇತ್ತೀಚೆಗೆ ಕರ್ನಾಟಕದಲ್ಲಿ ಸರ್ಕಾರಿ ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿದ ಬಳಿಕ 'ಸೇವಾ ಕೇಂದ್ರ'ಗಳಾದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ಗಳಿಗೆ ಎಲ್ಲಿಲ್ಲದ ಬೇಡಿಕೆ ಉಂಟಾಗಿದೆ.ಸರ್ಕಾದ ಯೋಜನೆ ಪಡೆಯಲು ಜನರು ಮೊದಲ ಗ್ರಾಮ ಒನ್ ಗಳಿಗೆ ತೆರಳಬೇಕಿದೆ. ಇಂತಹ ಕೇಂದ್ರ ತೆರೆಯಲು ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿ ಪ್ರಾಂಚೈಸಿ ಪಡೆದುಕೊಳ್ಳಬೇಕು.

ಅರ್ಜಿ ಸಲ್ಲಿಕೆಗೆ ಅಗತ್ಯವಾದ ದಾಖಲೆಗಳು?
* ಪ್ಯಾನ್ ಕಾರ್ಡ್
* ಆಧಾರ್ ಕಾರ್ಡ್
* ನಿಮ್ಮ ಬ್ಯಾಂಕ್ ಖಾತೆಯ ವಿವರ
* ಪ್ರಾಂಚೈಸಿ ಆರಂಭಿಸಿಲು ಉದ್ದೇಶಿಸಿರುವ ಸ್ಥಳ, ಗಣಕಯಂತ್ರ ಇನ್ನಿತರ ಉಪಕರಣಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 15ದಿನ ವಾಗಿದೆ. ಕೊನೆಯ ದಿನದವರೆಗೂ ಕಾಯದೇ ಆಸಕ್ತರು ಈ ಕೂಡಲೇ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ ಗ್ರಾಮ ಒನ್ ಆರಂಭಿಸಬೇಕೆಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ? ಎಲ್ಲಿ? ತಿಳಿಯಿರಿ
ಆಸಕ್ತರು ಅಭ್ಯರ್ಥಿಗಳು ಗ್ರಾಮ ಒನ್ ಪ್ರಾಂಚೈಸಿ ಪಡೆಯಲು ಇಲ್ಲಿ ನೀಡಲಾಗಿರುವ https://kal-mys.gramaone.karnataka.gov.in/ ಲಿಂಕ್ ಗೆ ಭೇಟಿ ನೀಡಬೇಕು. ಗ್ರಾಮ ಒನ್ ಫ್ರಾಂಚೈಸಿ ಆರಂಭಕ್ಕೆ ಬೇಕಾದ ಎಲ್ಲಾ ದಾಖಲಾಗಿಗಳನ್ನು ಸೂಕ್ತ ಮಾಹಿಗಳನ್ನು ನಮೂದಿಸಿ ಅರ್ಜಿ ಸಲ್ಲಿಸಬೇಕು ಎಂದು ಸರ್ಕಾರ ತಿಳಿಸಿದೆ.

ಎಲ್ಲೆಲ್ಲಿ ಪ್ರಾಂಚೈಸಿ ಆರಂಭಿಸಬಹುದು?
* ನಿಟ್ಟೂರು
* ಕೆ.ಬಡಗ
* ಬಿ.ಶೆಟ್ಟಿಗೇರಿ
* ಕಿರುಗೂರು
* ಬಲ್ಯಮಂಡೂರು
* ಪೊನ್ನಂಪೇಟೆಯ ನಾಲ್ಕೇರಿ, ಬೆಟ್ಟದಳ್ಳಿ
* ಸೋಮವಾರಪೇಟೆಯ ಗರ್ವಾಲೆ ಕಾಕೋಟು ಪರಂಬು, ಬೇಟೋಳಿ
* ಮಡಿಕೇರಿಯ ಹೊಕ್ಕೇರಿ ಹಾಕತ್ತೂರು ಮತ್ತು ಕರಿಕೆಯಲ್ಲಿ ಪ್ರಾಂಚೈಸಿ ನಿರ್ಮಿಸಬಹುದು.
ಹೆಚ್ಚಿನ ಮಾಹಿತಿಗೆ ಹೀಗೆ ಮಾಡಿ
ಒಟ್ಟಾರೆಯಾಗಿ ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 14 ಗ್ರಾಮ ಪಂಚಾಯತ್ ಗಳಲ್ಲಿ 'ಸಮಗ್ರ ನಾಗರಿಕ ಸೇವಾ ಕೇಂದ್ರ'/ ಗ್ರಾಮ ಒನ್ ಕೇಂದ್ರ' ಗಳ ಪ್ರಾಂಚೈಸಿ ಆರಂಭಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಾಂಚೈಸಿಗಳು ಹೆಚ್ಚಿನ ಮಾಹಿತಿಗೆ ಈ ವೆಬ್ಸೈಟ್ಗೆ https://kal-mys.gramaone.karnataka.gov.in/ ಭೇಟಿ ಕೊಡಿ. ಇಲ್ಲವೇ ಸಹಾಯವಾಣಿ 9148712473 ಇ-ಮೇಲ್ ಐಡಿ [email protected] ಜಿಲ್ಲಾಧಿಕಾರಿಗಳ ಕಚೇರಿ ಸಮಾಲೋಚಕರು 9611657344/ 9900385301ನ್ನು ಸಂಪರ್ಕಿಸುವಂತೆ ಸರ್ಕಾರ ತಿಳಿಸಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications