ಕೊಪ್ಪಳದ ಕಲ್ಯಾಣ ಇಲಾಖೆಗೆ ಪಾಕಪ್ರವೀಣರು ಬೇಕಾಗಿದ್ದಾರೆ
ಕೊಪ್ಪಳ, ಜೂನ್ 16 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಅಡುಗೆಯವರು/ ಅಡುಗೆ ಸಹಾಯಕರ ನೇರ ನೇಮಕಾತಿಗಾಗಿ ಈ ಹಿಂದೆ ಆನ್ಲೈಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಇದೀಗ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ದಾಖಲೆಗಳ ಪರಿಶೀಲನೆ ಹಾಗೂ ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆಗೆ ದಿನಾಂಕವನ್ನು ನಿಗದಿಪಡಿಸಲಾಗಿದೆ.
ಅಡುಗೆಯವರು - 41 ಹುದ್ದೆ ಮತ್ತು ಅಡುಗೆ ಸಹಾಯಕರು - 92 ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಪೈಕಿ 1:5 ರ ಅನುಪಾತದ ಪ್ರಕಾರ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ವೆಬ್ಸೈಟ್ www.koppal.nic.in ನಲ್ಲಿ ಪ್ರಕಟಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಂಡು ದಾಖಲಾತಿಗಳ ಪರಿಶೀಲನೆ ಹಾಗೂ ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಬೇಕು.
* ಜೂನ್. 22 ರಂದು : ದಾಖಲೆಗಳ ಪರಿಶೀಲನೆಗಾಗಿ, ಅಡುಗೆಯವರ ಹುದ್ದೆಗೆ ಅರ್ಜಿ ಸಲ್ಲಿಸಿದವರು ಹಾಗೂ
* ಜೂನ್. 23 ರಂದು ಅಡುಗೆ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿದವರು
* ಜೂನ್. 28 ರಂದು : ಅಡುಗೆ ತಯಾರಿಕ ಪ್ರಾಯೋಗಿಕ ಪರೀಕ್ಷೆಗಾಗಿ, ಅಡುಗೆಯವರ ಹುದ್ದೆಗೆ ಅರ್ಜಿ ಸಲ್ಲಿಸಿದವರು
* ಜೂನ್. 29 ರಂದು ಅಡುಗೆ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿದವರು
* ಜುಲೈ. 03 ರಂದು ಅಡುಗೆಯವರ ಹಾಗೂ ಅಡುಗೆ ಸಹಾಯಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಹೊರಡಿಸಲಾಗುವುದು.
* ಆಕ್ಷೇಪಣೆಗಳಿಗೆ ಸಮಜಾಯಿಷಿ ನೀಡಿದ ನಂತರ ಜುಲೈ. 18 ರಂದು ಅಂತಿಮ ಆಯ್ಕೆ ಪಟ್ಟಿ ಹೊರಡಿಸಲಾಗುವುದು
ಸ್ಥಳ: ಕೊಪ್ಪಳದ ಕವಲೂರು ನಗರ ಹರಿಪ್ರಿಯಾ ಎಕ್ಸ್ಟೆನ್ಷನ್ ಏರಿಯಾದಲ್ಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳ ಸಂಕೀರ್ಣದಲ್ಲಿ ಹಾಜರಾಗಿ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕು.
ಎಂದು ಕೊಪ್ಪಳ ಜಿಲ್ಲಾಧಿಕಾರಿ ಹಾಗೂ ಗ್ರೂಪ್-ಡಿ ನೌಕರರ ನೇರ ನೇಮಕಾತಿ ಸಮಿತಿಯ ಅಧ್ಯಕ್ಷರಾದ ಎಂ. ಕನಗವಲ್ಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications