ಕೊಪ್ಪಳ: ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳು ಖಾಲಿಯಿವೆ, ಜ.9 ರೊಳಗೆ ಅರ್ಜಿ ಸಲ್ಲಿಸಿ
ಕೊಪ್ಪಳ, ಜ. 02: ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಂಜೂರಾಗಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹಾಗೂ ಹೊಸದಾಗಿ ತಾಂತ್ರಿಕ ಸಹಾಯಕರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ನೆರವು ನೀಡಲು ಮಂಜೂರಾಗಿರುವ ಖಾಲಿ ಹುದ್ದೆಗಳನ್ನು ಹೊರ ಗುತ್ತಿಗೆ ಅಧಾರದಲ್ಲಿ ಮಾನವ ಸಂಪನ್ಮೂಲ ಸಂಸ್ಥೆಗಳ ಮೂಲಕ ಸೇವೆಯನ್ನು ಪಡೆಯಲು ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ವಿಭಾಗದಲ್ಲಿ 05 ಹುದ್ದೆಗಳು, ಅರಣ್ಯ ವಿಭಾಗದಲ್ಲಿ 07 ಹುದ್ದೆಗಳು ಮತ್ತು ರೇಷ್ಮೆ ವಿಭಾಗದಲ್ಲಿ ಒಂದು ಹುದ್ದೆ ಖಾಲಿಯಿದ್ದು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಎನ್ಐಸಿ ಜಿಲ್ಲಾ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು 2023ರ ಜನವರಿ 09 ಕೊನೆಯ ದಿನವಾಗಿದ್ದು, ಹುದ್ದೆಗಳ ವಿವರ ವಿದ್ಯಾರ್ಹತೆ ಹಾಗೂ ಅನುಭವ, ವಯೋಮಿತಿ, ಮಾಸಿಕ ಸಂಭಾವನ, ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಎನ್ಐಸಿ ಜಿಲ್ಲಾ ವೆಬ್ಸೈಟ್ www.koppal.nic.in ನ್ನು ಅಥವಾ ಜಿಲ್ಲಾ ಪಂಚಾಯತ್ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಜನವರಿ 12 ರಂದು ಜಿಲ್ಲಾ ಪಂಚಾಯತಿ ಹಾಜರಾಗಬೇಕು. ಅಭ್ಯರ್ಥಿಗಳ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಪ್ರಕಟಣೆ ಮಾಡಲಾಗುವುದು. ಈ ತಾತ್ಕಾಲಿಕ ಮೆರಿಟ್ ಪಟ್ಟಿಗಳಿಗೆ ಅಭ್ಯರ್ಥಿಗಳಿಂದ ಆಕ್ಷೇಪಣೆ ಸಲ್ಲಿಸಲು ಜ.18 ರಿಂದ ಜ. 24 ರವರೆಗೆ ಅವಕಾಶವಿದೆ. ತದನಂತರದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ವೆಬ್ಸೈಟ್ನಲ್ಲಿ ತಿಳಿಸಲಾಗಿದೆ.
ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಪರಿಶೀಲನೆ ಮಾಡಿ ಅಂತಿಮ ಆಯ್ಕೆ ಪಟ್ಟಿಯನ್ನು ಜನವರಿ 30 ರಂದು ಪ್ರಕಟಣೆ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications